AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಧ ಗಂಟೆಯಲ್ಲಿ ಅಂತಿಮ ನಿರ್ಣಯ -ಸಾರಿಗೆ ನೌಕರರ ಬೇಡಿಕೆಗಳಿಗೆ ಸಿಎಂ BSY ಅಸ್ತು?

ಸಾರಿಗೆ ನೌಕರರ ಬೇಡಿಕೆಗಳ ಈಡೇರಿಕೆಗೆ ಸಿಎಂ ಅಸ್ತು ಎಂದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸರ್ಕಾರಿ ನೌಕರರನ್ನಾಗಿ ಪರಿಗಣನೆ ಮಾಡುವುದು ಸದ್ಯಕ್ಕೆ ಅಸಾಧ್ಯ. ಆದರೆ, ಅವರ 10 ಬೇಡಿಕೆಗಳ ಪೈಕಿ ಬಹುತೇಕ ಬೇಡಿಕೆಗಳಿಗೆ ಸಿಎಂ ಯಡಿಯೂರಪ್ಪ ಅಸ್ತು ಎಂದಿದ್ದಾರೆ ಎಂದು ತಿಳಿದುಬಂದಿದೆ.

ಅರ್ಧ ಗಂಟೆಯಲ್ಲಿ ಅಂತಿಮ ನಿರ್ಣಯ -ಸಾರಿಗೆ ನೌಕರರ ಬೇಡಿಕೆಗಳಿಗೆ ಸಿಎಂ BSY ಅಸ್ತು?
ಸಿಎಂ BSY ಜೊತೆ ಸಚಿವ ಸವದಿ ಸಭೆ
KUSHAL V
|

Updated on: Dec 13, 2020 | 2:16 PM

Share

ಬೆಂಗಳೂರು: ಸಾರಿಗೆ ನೌಕರರ ಬೇಡಿಕೆಗಳ ಈಡೇರಿಕೆಗೆ ಸಿಎಂ ಅಸ್ತು ಎಂದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸರ್ಕಾರಿ ನೌಕರರನ್ನಾಗಿ ಪರಿಗಣನೆ ಮಾಡುವುದು ಸದ್ಯಕ್ಕೆ ಅಸಾಧ್ಯ. ಆದರೆ, ಅವರ 10 ಬೇಡಿಕೆಗಳ ಪೈಕಿ ಬಹುತೇಕ ಬೇಡಿಕೆಗಳಿಗೆ ಸಿಎಂ ಯಡಿಯೂರಪ್ಪ ಅಸ್ತು ಎಂದಿದ್ದಾರೆ ಎಂದು ತಿಳಿದುಬಂದಿದೆ.

ಯಾವ ಪ್ರಮುಖ ಬೇಡಿಕೆಗಳಿಗೆ ಸಿಎಂ ಅಸ್ತು ಎಂದಿದ್ದಾರೆ? 1. ಸಾರಿಗೆ ನೌಕರರ ವೇತನ ತಾರತಮ್ಯ ನಿವಾರಿಸುವುದು 2. ಕೊವಿಡ್‌ನಿಂದ ಮೃತಪಟ್ಟಲ್ಲಿ ಕುಟುಂಬಕ್ಕೆ 30 ಲಕ್ಷ ರೂಪಾಯಿ ಪರಿಹಾರ ನೀಡಲು ಸಮ್ಮತಿ 3. ಹಿರಿಯ ಅಧಿಕಾರಿಗಳ ಕಿರುಕುಳ ತಡೆಗೆ ಸೂಕ್ತ ಕ್ರಮ

‘ಅರ್ಧ ಗಂಟೆಯಲ್ಲಿ ಅಂತಿಮ ನಿರ್ಣಯ ಕೈಗೊಳ್ಳುತ್ತೇವೆ’ ಇತ್ತ, ಅರ್ಧ ಗಂಟೆಯಲ್ಲಿ ಅಂತಿಮ ನಿರ್ಣಯ ಕೈಗೊಳ್ಳುತ್ತೇವೆ ಎಂದು ಸಿಎಂ ಜೊತೆ ಸಭೆ ಬಳಿಕ ಸಚಿವ ಲಕ್ಷ್ಮಣ ಸವದಿ ಹೇಳಿದರು. ಬಳಿಕ ಅವರ ಬಳಿಯೇ ಹೇಳಿಕೆ ಕೊಡಿಸಿ ಇದಕ್ಕೆ ಅಂತ್ಯ ಹಾಡಬೇಕು ಎಂದು ನಿರ್ಧರಿಸಿದ್ದೇವೆ ಎಂದು ಸಹ ಹೇಳಿದರು.

ಸಿಎಂ ಪ್ರತಿಭಟನಾನಿರತ ನೌಕರರನ್ನು ಆಹ್ವಾನಿಸಿದ್ದರು, ನಾನೂ ಸಹ ಆಹ್ವಾನಿಸಿದ್ದೇನೆ. ನಂದೀಶ್ ರೆಡ್ಡಿ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದೇವೆ. ಸರ್ಕಾರ, ಸಿಬ್ಬಂದಿ ಮಧ್ಯೆ ಸೇತುವೆಯಾಗಿ ನಂದೀಶ್‌ ರೆಡ್ಡಿ ಕೆಲಸ ಮಾಡುತ್ತಿದ್ದಾರೆ. ಕೊವಿಡ್ ಸಂದರ್ಭದಲ್ಲೂ ಅವರಿಗೆ ವೇತನ ನೀಡಿದ್ದೇವೆ. ಅರ್ಧ ಗಂಟೆಯಲ್ಲಿ ಕೊನೇ ಸುತ್ತಿನ ಮಾತುಕತೆ ಮುಕ್ತಾಯವಾಗುತ್ತೆ. ಬಳಿಕ ಅಂತಿಮ ಘೋಷಣೆಯನ್ನು ಮಾಡುತ್ತೇವೆ ಎಂದು ಸವದಿ ಹೇಳಿದರು.

ಸಿಎಂ ಭೇಟಿಯಾದ ಬಳಿಕ ಸಚಿವ ಸವದಿ ಯೂನಿಯನ್ ಮುಖಂಡರ ಜತೆ ಚರ್ಚೆ ನಡೆಸಲು ಮತ್ತೆ ವಿಕಾಸಸೌಧಕ್ಕೆ ತೆರಳಿದರು. ಇದೀಗ, ಯೂನಿಯನ್ ಮುಖಂಡರ ಜತೆ ಅಂತಿಮ ಸುತ್ತಿನ ಚರ್ಚೆ ನಡೆಯಲಿದೆ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್