AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಸಂಪರ್ಕದಲ್ಲಿದ್ದವರೆಲ್ಲಾ ಕ್ವಾರಂಟೈನ್ ಆಗಿ, ಕೊವಿಡ್ ಟೆಸ್ಟ್ ಮಾಡಿಸಿಕೊಳ್ಳಿ: ಬಿ.ಎಸ್.ಯಡಿಯೂರಪ್ಪ ಮನವಿ

ನನ್ನ ಸಂಪರ್ಕದಲ್ಲಿರುವವರೆಲ್ಲರೂ ಕ್ವಾರಂಟೈನ್​ ಆಗಿ ಎಂದು ಟ್ವೀಟರ್​ನಲ್ಲಿ ಪೋಸ್ಟ್​ ಹಂಚಿಕೊಳ್ಳುವುದರ ಮೂಲಕ ಮುಖಮಂತ್ರಿ ಬಿಎಸ್​.ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ.

ನನ್ನ ಸಂಪರ್ಕದಲ್ಲಿದ್ದವರೆಲ್ಲಾ ಕ್ವಾರಂಟೈನ್ ಆಗಿ, ಕೊವಿಡ್ ಟೆಸ್ಟ್ ಮಾಡಿಸಿಕೊಳ್ಳಿ: ಬಿ.ಎಸ್.ಯಡಿಯೂರಪ್ಪ ಮನವಿ
ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ
shruti hegde
|

Updated on: Apr 16, 2021 | 5:34 PM

Share

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರಿಗೆ ಕೊರೊನಾ ಪಾಸಿಟಿವ್​ ವರದಿ ದೃಢವಾಗಿದೆ. ಈ ಹಿನ್ನೆಲೆಯಲ್ಲಿ, ನನ್ನ ಸಂಪರ್ಕದಲ್ಲಿ ಇದ್ದವರೆಲ್ಲರೂ ಕ್ವಾರಂಟೈನ್​ ಆಗಿ. ಜೊತೆಗೆ ಕೊವಿಡ್​ ಟೆಸ್ಟ್​ ಮಾಡಿಕೊಳ್ಳಿ ಎಂದು ಟ್ವಿಟರ್​​ನಲ್ಲಿ ಪೋಸ್ಟ್​ ಹಂಚಿಕೊಳ್ಳುವುದರ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ. 

ಜ್ವರದ ಹಿನ್ನಲೆಯಲ್ಲಿ ನಾನು ಇಂದು ತಪಾಸಣೆಗೆ ಒಳಪಟ್ಟಾಗ ಕೊವಿಡ್ ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ. ರೋಗ ಲಕ್ಷಣಗಳು ಅಲ್ಪ ಪ್ರಮಾಣದಲ್ಲಿ ಇರುವುದರಿಂದ ವೈದ್ಯರ ಸಲಹೆಯಂತೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ಸಂಪರ್ಕಕ್ಕೆ ಬಂದಿದ್ದವರು ಕ್ವಾರಂಟೈನ್​ನಲ್ಲಿದ್ದು, ಒಮ್ಮೆ ಪರೀಕ್ಷಿಸಿಕೊಳ್ಳಿ ಎಂದು ಕೋರುತ್ತೇನೆ ಎಂದು ಬರೆದುಕೊಂಡಿದ್ದಾರೆ.

ವಿಷಯ ತಿಳಿದ ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ, ಕೊರೊನಾ ಸೊಂಕಿನಿಂದ ಪೀಡಿತರಾಗಿರುವ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಶೀಘ್ರ ಗುಣಮುಖರಾಗುವಂತೆ ಕೋರುತ್ತೇನೆ. ಕೊರೊನಾದಿಂದ ಚೇತರಿಸಿಕೊಂಡು ಎಂದಿನಂತೆ ಆಡಳಿತದಲ್ಲಿ ಸಕ್ರಿಯರಾಗುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್​ ಮಾಡಿದ್ದಾರೆ.

ಸಿಎಂ ಬಿ.ಎಸ್.ಯಡಿಯೂರಪ್ಪಗೆ ಕೊರೊನಾ ಪಾಸಿಟಿವ್ ವರದಿಯಾಗಿದೆ. ಬೇಗ ಗುಣಮುಖರಾಗಲೆಂದು ಆಶಿಸುತ್ತೇನೆ. ನಿಮ್ಮ ಉತ್ತಮ ಆರೋಗ್ಯಕ್ಕಾಗಿ ರಾಜ್ಯದ ಜನತೆಯ ಪ್ರಾರ್ಥನೆ ನಿಮ್ಮೊಂದಿಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಅಶ್ವತ್ಥ್ ನಾರಾಯಣ ಟ್ವೀಟ್ ಮಾಡಿ ಆಶಿಸಿದ್ದಾರೆ.

ಇದನ್ನೂ ಓದಿ: ಯಡಿಯೂರಪ್ಪಗೆ ಕೊರೊನಾ ಪಾಸಿಟಿವ್; ಬೆಳಗಾವಿ ನಾಯಕರಿಗೂ ಶುರುವಾಯ್ತು ಢವಢವ!

ಲಸಿಕೆ ಪಡೆದಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಏಕೆ ಬಂತು ಕೊರೊನಾ: ರಾಜ್ಯ ಕಾಂಗ್ರೆಸ್ ಪ್ರಶ್ನೆ

(All those in my contacts become quarantine to say chief minister BS Yediyurappa appeal)

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ