AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಲ್ಯಾಕ್ಸ್ ಆಗಲು ಕುಟುಂಬ ಸಮೇತ ರೆಸಾರ್ಟ್ಗೆ ಹೋಗಿದ್ದ ಸಿಎಂ ಬಿ.ಎಸ್. ಯಡಿಯೂರಪ್ಪ ರಾತ್ರೋರಾತ್ರಿ ಬೆಂಗಳೂರಿಗೆ ವಾಪಸ್

ಇಂದು ಇಡೀ ದಿನ ರೆಸಾರ್ಟ್‌ನಲ್ಲಿರಲು ಸಿಎಂ ನಿರ್ಧರಿಸಿದ್ದರು. ಹೀಗಾಗಿ 3 ವಿಲ್ಲಾ ಬುಕ್ ಮಾಡಿದ್ದರು. ಫುಲ್ ರಿಲ್ಯಾಕ್ಸ್ ಆಗಿ ಸಂಪೂರ್ಣ ವಿಶ್ರಾಂತಿ ಪಡೆಯಲೆಂದು ಕುಟುಂಬ ಸಮೇತರಾಗಿ ರೆಸಾರ್ಟ್‌ಗೆ ತೆರಳಿದ್ದರು. ನಿನ್ನೆ ರಾತ್ರಿ ಊಟ ಸೇವಿಸಿ, ವಿಶ್ರಾಂತಿ ಪಡೆದು ಇದ್ದಕಿದ್ದಂತೆ ರಾತ್ರೋರಾತ್ರಿ ಪ್ಲ್ಯಾನ್ ಬದಲಿಸಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.

ರಿಲ್ಯಾಕ್ಸ್ ಆಗಲು ಕುಟುಂಬ ಸಮೇತ ರೆಸಾರ್ಟ್ಗೆ ಹೋಗಿದ್ದ ಸಿಎಂ ಬಿ.ಎಸ್. ಯಡಿಯೂರಪ್ಪ  ರಾತ್ರೋರಾತ್ರಿ ಬೆಂಗಳೂರಿಗೆ ವಾಪಸ್
ಸರ್ಕಾರಿ ಕಾರು (ಸಂಗ್ರಹ ಚಿತ್ರ)
Follow us
TV9 Web
| Updated By: ಆಯೇಷಾ ಬಾನು

Updated on:Jun 24, 2021 | 8:43 AM

ದೇವನಹಳ್ಳಿ: ಕೆಲ ದಿನಗಳಿಂದ ಬಿಜೆಪಿ ಪಕ್ಷದಲ್ಲಿ ಅನೇಕ ಗೊಂದಲಗಳು ಕಾಣಿಸುತ್ತಿವೆ. ನಾಯಕರಲ್ಲೆ ಅಸಮಾಧಾನ ಮನೆ ಮಾಡಿದೆ. ಸದ್ಯ ಇದೆಲ್ಲದಕ್ಕೂ ತೆರೆಬಿದಿದ್ದು ಸಿಎಂ ಬಿ.ಎಸ್. ಯಡಿಯೂರಪ್ಪ ರಿಲ್ಯಾಕ್ಸ್ ಮೂಡ್ಗೆ ಜಾರಿದ್ದಾರೆ. ರಿಲ್ಯಾಕ್ಸ್ ಆಗಲು ಕುಟುಂಬ ಸಮೇತ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಬಳಿಯಿರುವ ಪ್ರೆಸ್ಟೀಜ್ ಗಾಲ್ಫ್ ಶೈರ್ ರೆಸಾರ್ಟ್ಗೆ ಬಂದಿದ್ದರು. ಆದ್ರೆ ಯಾವ ಸಮಸ್ಯೆ ಎದುರಾಯ್ತೋ ಏನೋ ರೆಸಾರ್ಟ್‌ನಿಂದ ರಾತ್ರೋರಾತ್ರಿ ಸಿಎಂ ಬಿಎಸ್‌ವೈ ವಾಪಸ್ ಆಗಿದ್ದಾರೆ.

ಇಂದು ಇಡೀ ದಿನ ರೆಸಾರ್ಟ್‌ನಲ್ಲಿರಲು ಸಿಎಂ ನಿರ್ಧರಿಸಿದ್ದರು. ಹೀಗಾಗಿ 3 ವಿಲ್ಲಾ ಬುಕ್ ಮಾಡಿದ್ದರು. ಫುಲ್ ರಿಲ್ಯಾಕ್ಸ್ ಆಗಿ ಸಂಪೂರ್ಣ ವಿಶ್ರಾಂತಿ ಪಡೆಯಲೆಂದು ಕುಟುಂಬ ಸಮೇತರಾಗಿ ರೆಸಾರ್ಟ್‌ಗೆ ತೆರಳಿದ್ದರು. ನಿನ್ನೆ ರಾತ್ರಿ ಊಟ ಸೇವಿಸಿ, ವಿಶ್ರಾಂತಿ ಪಡೆದು ಇದ್ದಕಿದ್ದಂತೆ ರಾತ್ರೋರಾತ್ರಿ ಪ್ಲ್ಯಾನ್ ಬದಲಿಸಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಸದ್ಯ ಈ ಬಗ್ಗೆ ಸಿಎಂ ಬಿಎಸ್ವೈ ಸ್ಪಷ್ಟನೆ ನೀಡಬೇಕಿದೆ.

ಮತ್ತೊಂದು ಕಡೆ ಕಾಂಗ್ರೆಸ್ ನಾಯಕರ ನಡುವೆ ಸಿಎಂ ಕುರ್ಚಿ ಫೈಟ್ ಶುರುವಾಗಿದೆ. ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯೋಕೆ ಇನ್ನೂ 2 ವರ್ಷ ಟೈಂ ಇದೆ. ಎರಡು ವರ್ಷಕ್ಕೂ ಮೊದಲೇ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಸಿಎಂ ಆಗೋದ್ಯಾರು ಅನ್ನೋ ಬೆಂಕಿ ಧಗಧಗ ಅಂತಾ ಹೊತ್ತಿ ಉರೀತಿದೆ. ಇದೇ ವಿಚಾರಕ್ಕೆ ಸಿದ್ದರಾಮಯ್ಯ ಬೆಂಬಲಿಗರು, ಡಿಕೆ ಬ್ರದರ್ಸ್ ನಡುವೆ ಜಂಗೀ ಕುಸ್ತಿ ಶುರುವಾಗಿದೆ. ಕಾಂಗ್ರೆಸ್ ಅಧಿಕಾರಕ್ಕೇರಿದ್ರೆ ಸಿದ್ದರಾಮಯ್ಯ ಮುಂದಿನ ಸಿಎಂ ಅಂತಾ ಜಮೀರ್ ಬಾಂಬ್ ಸಿಡಿಸ್ತಿದ್ದಂತೆ ಎಚ್ಚೆತ್ತ ಕನಕಪುರದ ಬಂಡೆ ದೆಹಲಿಗೆ ಹೋಗಿ ಹೈಕಮಾಂಡ್ಗೆ ದೂರು ಸಲ್ಲಿಸಿದ್ರೂ ಕೂಡ ಸಿದ್ದರಾಮಯ್ಯ ಮುಂದಿನ ಸಿಎಂ ಅನ್ನೋ ಕೂಗು ಮಾತ್ರ ಕಡಿಮೆಯಾಗಿಲ್ಲ. ಇದು ಡಿಕೆ ಬ್ರದರ್ಸ್ ಪಿತ್ತ ನೆತ್ತಿಗೇರುವಂತೆ ಮಾಡಿದೆ.

ಇದನ್ನೂ ಓದಿ: ಮದುವೆ ಆಗಿ 6 ತಿಂಗಳಿಗೆ ವೈರಲ್​ ಆಯ್ತು ಚಹಾಲ್​-ಧನಶ್ರೀ ವಿಡಿಯೋ; ಕ್ರಿಕೆಟಿಗನ ಪತ್ನಿ ಹೇಳಿದ್ದೇನು?

Published On - 8:41 am, Thu, 24 June 21

ವೇಗದ ಶತಕ ಸಿಡಿಸಿ ಹೆಡ್ ದಾಖಲೆ ಮುರಿದ ಕ್ಲಾಸೆನ್
ವೇಗದ ಶತಕ ಸಿಡಿಸಿ ಹೆಡ್ ದಾಖಲೆ ಮುರಿದ ಕ್ಲಾಸೆನ್
ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ