AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಎನ್​. ಆರ್​. ಸಂತೋಷ್ ಹೇಳಿದ್ದೇನು?

12 ನಿದ್ರೆ ಮಾತ್ರೆ ನುಂಗಿ ಆಸ್ಪತ್ರೆ ಸೇರಿದ್ದ ಸಿ.ಎಂ ಬಿಎಸ್ ಯಡಿಯೂರಪ್ಪ ರಾಜಕೀಯ ಕಾರ್ಯದರ್ಶಿ ಎನ್​.ಆರ್​.ಸಂತೋಷ್ ರಾಮಯ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಎನ್​. ಆರ್​. ಸಂತೋಷ್ ಹೇಳಿದ್ದೇನು?
ಎನ್​.ಆರ್​.ಸಂತೋಷ್
ಆಯೇಷಾ ಬಾನು
| Edited By: |

Updated on:Nov 30, 2020 | 12:58 PM

Share

ಬೆಂಗಳೂರು: 12 ನಿದ್ರೆ ಮಾತ್ರೆ ನುಂಗಿ ಆಸ್ಪತ್ರೆ ಸೇರಿದ್ದ ಸಿ.ಎಂ ಬಿಎಸ್ ಯಡಿಯೂರಪ್ಪ ರಾಜಕೀಯ ಕಾರ್ಯದರ್ಶಿ ಎನ್​.ಆರ್​.ಸಂತೋಷ್ ಎಮ್.ಎಸ್. ರಾಮಯ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ಏಕಾಏಕಿ 12 ನಿದ್ರೆ ಮಾತ್ರೆಗಳನ್ನು ನುಂಗಿ ಆಸ್ಪತ್ರೆ ಸೇರಿದ್ದ ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ್ದಾರ. ಈ ಘಟನೆಗೆ ಕಾರಣವೇನು ಎಂದು ಪೊಲೀಸರು ತಲೆ ಕೆಡಿಸಿಕೊಂಡಿದ್ದರು. ಸದ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸಂತೋಷ್ ಈ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಅಜೀರ್ಣವಾಗಿದ್ದ ಹಿನ್ನೆಲೆ ಮಾತ್ರೆ ನುಂಗಿದ್ದೆ: ಇದೊಂದು ಅಚಾತುರ್ಯದ, ಆಕಸ್ಮಿಕ ಘಟನೆ. ನನಗೆ ಯಾವುದೇ ಒತ್ತಡವಿರಲಿಲ್ಲ. ನಾನು ಆತ್ಮಹತ್ಯೆಗೆ ಯತ್ನಿಸುವಂತಹ ವ್ಯಕ್ತಿಯೂ ಅಲ್ಲ. ಉಪಚುನಾವಣೆಯ ಸೋಲಿನಿಂದ ಡಿಕೆಶಿಗೆ ಮತಿಗೆಟ್ಟಿರಬೇಕು. ಅವರು ಈ ಮೊದಲೂ ಈ ರೀತಿಯ ಹೇಳಿಕೆಗಳನ್ನ ಕೊಟ್ಟಿದ್ದರು. ನನಗೆ ಸ್ವಲ್ಪ ಅಜೀರ್ಣವಾಗಿದ್ದ ಹಿನ್ನೆಲೆ ಮಾತ್ರೆ ನುಂಗಿದ್ದೆ.

ಮಾತ್ರೆ ಬದಲಾಗಿ ನಿದ್ದೆ ಮಾತ್ರೆ ಸೇವಿಸಿಬಿಟ್ಟಿದ್ದೆ. ನನಗೆ ನಿದ್ದೆ ಬರದಿದ್ದಾಗ ನಿದ್ದೆ ಮಾತ್ರೆ ಸೇವಿಸುವ ಅಭ್ಯಾಸವಿದೆ. ಅರ್ಧ ಮಾತ್ರೆ ಸೇವಿಸುತ್ತಿದ್ದೆ, ಮೊನ್ನೆ ಇಡೀ ಮಾತ್ರೆ ಸೇವಿಸಿದ್ದೆ. ಒಂದೆರಡು ದಿನ ವಿಶ್ರಾಂತಿ ಪಡೆದು ಸಿಎಂ ಭೇಟಿಯಾಗುತ್ತೇನೆ ಎಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ N.R.ಸಂತೋಷ್ ಹೇಳಿಕೆ ನೀಡಿದ್ದಾರೆ.

Published On - 12:43 pm, Mon, 30 November 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?