AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈ ಮೀರುತ್ತಿದೆ ಕೊರೊನಾ ಪರಿಸ್ಥಿತಿ.. ಚುನಾವಣೆ ಅವಸರ ಮುಗಿಯುತ್ತಿದ್ದಂತೆ ತಕ್ಷಣವೇ ತುರ್ತು ಸಭೆ ಕರೆದ ಸಿಎಂ ಯಡಿಯೂರಪ್ಪ

ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಈಗಾಗಲೇ ರಾತ್ರಿ ವೇಳೆ ಕೊರೊನಾ ಕರ್ಫ್ಯೂ ಜಾರಿಗೊಳಿಸಲಾಗಿದೆಯಾದರೂ ಇನ್ನೂ ಬಿಗಿ ಕ್ರಮಗಳ ಅವಶ್ಯಕತೆ ಇದೆ ಎಂದು ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿರುವುದಾಗಿ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಇಂದು ನಡೆಯುವ ಸಭೆ ಮಹತ್ವದ್ದಾಗಿದೆ.

ಕೈ ಮೀರುತ್ತಿದೆ ಕೊರೊನಾ ಪರಿಸ್ಥಿತಿ.. ಚುನಾವಣೆ ಅವಸರ ಮುಗಿಯುತ್ತಿದ್ದಂತೆ ತಕ್ಷಣವೇ ತುರ್ತು ಸಭೆ ಕರೆದ ಸಿಎಂ ಯಡಿಯೂರಪ್ಪ
ಸೌಜನ್ಯ : ಅಂತರ್ಜಾಲ
Skanda
| Updated By: ಸಾಧು ಶ್ರೀನಾಥ್​|

Updated on:Apr 16, 2021 | 10:07 AM

Share

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ತೀವ್ರಗತಿಯಲ್ಲಿ ಏರುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ನೇತೃತ್ವದಲ್ಲಿ ತುರ್ತು ಸಭೆ ಕರೆಯಲಾಗಿದೆ. ಕೊರೊನಾ ನಿಯಂತ್ರಣ ಸಂಬಂಧಿತ ಸಭೆಯಲ್ಲಿ ಹಿರಿಯ ಅಧಿಕಾರಿಗಳು, ಸಚಿವರು ಭಾಗಿಯಾಗಲಿದ್ದು, ಬೆಳಗ್ಗೆ 9.30ಕ್ಕೆ ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ತುರ್ತುಸಭೆ ಕರೆಯಲಾಗಿದೆ. ರಾಜ್ಯದಲ್ಲಿ ಕೊವಿಡ್ ಪ್ರಕರಣಗಳ ಸಂಖ್ಯೆ ನಿರೀಕ್ಷೆಗೂ ಮೀರಿ ಹೆಚ್ಚಾಗುತ್ತಿದ್ದು, ಸಭೆಯ ನಂತರ ಕೆಲ ಕಠಿಣ ನಿಯಮಾವಳಿಗಳನ್ನು ಜಾರಿಗೊಳಿಸುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಈಗಾಗಲೇ ರಾತ್ರಿ ವೇಳೆ ಕೊರೊನಾ ಕರ್ಫ್ಯೂ ಜಾರಿಗೊಳಿಸಲಾಗಿದೆಯಾದರೂ ಇನ್ನೂ ಬಿಗಿ ಕ್ರಮಗಳ ಅವಶ್ಯಕತೆ ಇದೆ ಎಂದು ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿರುವುದಾಗಿ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಇಂದು ನಡೆಯುವ ಸಭೆ ಮಹತ್ವದ್ದಾಗಿದ್ದು, ಕೊರೊನಾದಿಂದಾಗಿ ಹಲವು ಚಟುವಟಿಕೆಗಳು ಸ್ತಬ್ಧವಾಗುವ ಸಾಧ್ಯತೆ ದಟ್ಟವಾಗಿದೆ.

ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವುದರಿಂದ ಭಾರತೀಯ ಪುರಾತತ್ವ ಇಲಾಖೆ ರಾಜ್ಯದ ಎಲ್ಲಾ ಪ್ರವಾಸಿ ತಾಣಗಳನ್ನೂ ಮೇ.15ರ ತನಕ ಬಂದ್ ಮಾಡಿ ಆದೇಶ ಹೊರಡಿಸಿದೆ. ಕೊರೊನಾ ಎರಡನೇ ಅಲೆಯ ಗಂಭೀರತೆ ಬಗ್ಗೆ ಚರ್ಚೆ ಆಗುತ್ತಿರುವ ಹೊತ್ತಿನಲ್ಲೇ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದ್ದು, ಇನ್ನೂ ಕಠಿಣ ನಿಯಮಗಳು ಜಾರಿಗೊಳ್ಳುವ ಸಾಧ್ಯತೆ ಇದೆ.

ಅಂತೆಯೇ, ನಾಳೆ (ಏಪ್ರಿಲ್​ 17) ಬೆಳಗಾವಿ ಉಪಚುನಾವಣೆ ಮುಕ್ತಾಯವಾಗುತ್ತಿದ್ದಂತೆಯೇ ರಾಜ್ಯದಲ್ಲಿ ಕಠಿಣ ನಿಯಮಾವಳಿಗಳನ್ನು ಸರ್ಕಾರ ಜಾರಿಗೊಳಿಸಬಹುದು ಎಂದು ಈ ಹಿಂದೆಯೇ ಅಂದಾಜಿಸಲಾಗಿತ್ತು. ಅಲ್ಲದೇ ಏಪ್ರಿಲ್​ 18ರಂದು ಈ ಬಗ್ಗೆ ಚರ್ಚಿಸಲು ಸರ್ವಪಕ್ಷ ಸಭೆಯನ್ನೂ ಕರೆಯಲಾಗಿದ್ದು, ಸಭೆ ಬಳಿಕ ಕಠಿಣ ನಿರ್ಧಾರಗಳ ಬಗ್ಗೆ ಚಿಂತಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ತಿಳಿಸಿದ್ದರು.

(CM BS Yediyurappa to conduct meeting today with officials tough rules may start after Karnataka Byelection)

ಇದನ್ನೂ ಓದಿ: India Corona Cases: ಕೊರೊನಾ 2ನೇ ಅಲೆ ಅಬ್ಬರಕ್ಕೆ ತತ್ತರಿಸಿದ ಭಾರತ.. ಇಂದು 2 ಲಕ್ಷ 16 ಸಾವಿರ ಕೇಸ್ ಪತ್ತೆ 

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿಯಂತ್ರಣ ತಪ್ಪಿದ ಕೊರೊನಾ; ಸಮುದಾಯಕ್ಕೆ ಹರಡಿದ ಶಂಕೆ

Published On - 9:12 am, Fri, 16 April 21

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ