Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಜಿಲ್ಲಾ ಬಿಜೆಪಿಯಲ್ಲಿ ಅಸಮಾಧಾನದ ಹೊಗೆ.. ಶಮನಕ್ಕಾಗಿ ಸಿಎಂ ಬಿಗ್ ಮೀಟಿಂಗ್

ಏಪ್ರಿಲ್ 17ರಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಇಂದು ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ನಾಮಪತ್ರ ಸಲ್ಲಿಸಲಿದ್ದಾರೆ. ಹೀಗಾಗಿ ಇಂದು ಬಿಜೆಪಿ ನಾಯಕರ ದಂಡು ಬೆಳಗಾವಿಗೆ ಆಗಮಿಸಲಿದೆ. ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಬಹಿರಂಗ ಬಳಿಕ ಮೊದಲ ಬಾರಿ ಬಾಲಚಂದ್ರ ಜಾರಕಿಹೊಳಿ‌ ಬೆಳಗಾವಿಗೆ ಬರಲಿದ್ದಾರೆ.

ಬೆಳಗಾವಿ ಜಿಲ್ಲಾ ಬಿಜೆಪಿಯಲ್ಲಿ ಅಸಮಾಧಾನದ ಹೊಗೆ.. ಶಮನಕ್ಕಾಗಿ ಸಿಎಂ ಬಿಗ್ ಮೀಟಿಂಗ್
ಬಿ.ಎಸ್​. ಯಡಿಯೂರಪ್ಪ (ಸಂಗ್ರಹ ಚಿತ್ರ)
Follow us
ಆಯೇಷಾ ಬಾನು
|

Updated on:Mar 30, 2021 | 9:07 AM

ಬೆಳಗಾವಿ: ಬೆಳಗಾವಿ ಜಿಲ್ಲಾ ಬಿಜೆಪಿಯಲ್ಲಿ ಅಸಮಾಧಾನದ ಹೊಗೆ ಕಾಣಿಸಿಕೊಂಡಿದೆ. ಅಸಮಾಧಾನ ಶಮನ ಮಾಡಲು ಇಂದು ಬೆಳಗಾವಿಯಲ್ಲಿ ಸಿಎಂ ವಾಸ್ತವ್ಯ ಮಾಡಲಿದ್ದಾರೆ. ಹಾಗೂ ಇಂದು ಸರಣಿ ಸಭೆ ನಡೆಸಲಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಬಿಜೆಿಪಿ ಮುಖಂಡರ ವಿರುದ್ಧ ಟಿಕೆಟ್ ವಂಚಿತರ ಸಿಟ್ಟು ಹೆಚ್ಚಾಗಿದೆ. ಹಲವು ಕಾರಣಕ್ಕೆ ಸ್ಥಳೀಯ ಮುಖಂಡರು ಸಿಟ್ಟಾಗಿದ್ದಾರೆ.

ಬೆಳಗಾವಿ ಜಿಲ್ಲಾ ಬಿಜೆಪಿಯಲ್ಲಿ ಅಸಮಾಧಾನಕ್ಕೆ ಕಾರಣಗಳೇನು ಗೊತ್ತಾ? -ನೆರೆಯ ಜಿಲ್ಲೆಯ ಜಗದೀಶ್ ಶೆಟ್ಟರ್, ಪ್ರಹ್ಲಾದ್ ಜೋಶಿಗೆ ಚುನಾವಣಾ ಉಸ್ತುವಾರಿ ಹೊಣೆ ನೀಡಿರುವುದು -ಮಹಿಳಾ ಪ್ರತಿನಿಧಿಯಾಗಿ ಚಿಕ್ಕೋಡಿ ಲೋಕಸಭಾ ಕ್ಷೇತ್ರ ಶಶಿಕಲಾ ಜೊಲ್ಲೆರಿಗೆ ಚುನಾವಣಾ ಉಸ್ತುವಾರಿ -ಬೆಳಗಾವಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ನಾಯಕರಿಗ್ಯಾರಿಗೂ ಇಲ್ಲ ಚುನಾವಣಾ ಉಸ್ತುವಾರಿ -ಬಿಜೆಿಪಿ ಮುಖಂಡರ ಮೇಲೆ ಟಿಕೆಟ್ ವಂಚಿತರ ಅಸಮಾಧಾನ -ಬೆಳಗಾವಿ ಲೋಕಸಭೆಗೆ ಇದ್ದರು ಬರೋಬ್ಬರಿ 72 ಟಿಕೆಟ್ ಆಕಾಂಕ್ಷಿಗಳು. -ಬಿಜೆಿಪಿ ಮುಖಂಡರ ಮೇಲೆ ಅಸಮಾಧಾನಗೊಂಡಿದ್ದ ಟಿಕೆಟ್ ವಂಚಿತರು -ಚುನಾವಣಾ ವಿಚಾರದಲ್ಲಿ ಬಹುತೇಕ ಜಿಲ್ಲಾ ಬಿಜೆಪಿ ನಾಯಕರು ನ್ಯೂಟ್ರಲ್ ಅನೇಕ ಕಾರಣಗಳಿಂದ ಅಸಮಾಧಾನದ ಹೊಗೆ ಕಾಣಿಸಿಕೊಂಡಿದೆ. ಹೀಗಾಗಿ ಒಂದು ದಿನ ವಾಸ್ತವ್ಯ ಹೂಡಿ ಸಭೆ ನಡೆಸಿ ಎಂದು ಸಿಎಂ ಬಿಎಸ್ ಯಡಿಯೂರಪ್ಪರಿಗೆ ಜಗದೀಶ್ ಶೆಟ್ಟರ್ ಮನವಿ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಬೆಳಗಾವಿಯಲ್ಲೇ ಸಿಎಂ ಬಿಎಸ್‌ವೈ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ವಾಸ್ತವ್ಯ ಹೂಡಲಿದ್ದಾರೆ.

ಇನ್ನು ಏಪ್ರಿಲ್ 17ರಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಇಂದು ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ನಾಮಪತ್ರ ಸಲ್ಲಿಸಲಿದ್ದಾರೆ. ಹೀಗಾಗಿ ಇಂದು ಬಿಜೆಪಿ ನಾಯಕರ ದಂಡು ಬೆಳಗಾವಿಗೆ ಆಗಮಿಸಲಿದೆ. ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಬಹಿರಂಗ ಬಳಿಕ ಮೊದಲ ಬಾರಿ ಬಾಲಚಂದ್ರ ಜಾರಕಿಹೊಳಿ‌ ಬೆಳಗಾವಿಗೆ ಬರಲಿದ್ದಾರೆ. ಸಿಎಂ ಬಿಎಸ್‌ವೈ ಜೊತೆ ಬೆಳಗಾವಿಗೆ ಬಾಲಚಂದ್ರ ಜಾರಕಿಹೊಳಿ‌ಯವರು ಕೂಡ ಬರುವ ಸಾಧ್ಯತೆ ಇದೆ. ಇನ್ನು ಮಂಗಳಾ ಅಂಗಡಿ ನಾಮಪತ್ರ ಸಲ್ಲಿಕೆ ವೇಳೆ ಸಿಎಂ ಬಿಎಸ್‌ವೈ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್, ಡಿಸಿಎಂ ಗೋವಿಂದ ಕಾರಜೋಳ, ಸಚಿವರು, ಹಾಲಿ ಮತ್ತು ಮಾಜಿ ಶಾಸಕರು, ಸಂಸದರು ಭಾಗಿಯಾಗುವ ಸಾಧ್ಯತೆ ಇದೆ.

ಮಧ್ಯಾಹ್ನ 1.30ಕ್ಕೆ ಸಿಎಂ‌ ಬಿ.ಎಸ್‌. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಸಮ್ಮುಖದಲ್ಲಿ ಮಂಗಳಾ ಅಂಗಡಿ ನಾಮಪತ್ರ ಸಲ್ಲಿಸಲಿದ್ದಾರೆ. ಮಂಗಳಾ ಅಂಗಡಿ ನಾಮಪತ್ರ ಸಲ್ಲಿಕೆ ಮುನ್ನ ಟೆಂಪಲ್ ರನ್ ‌ನಡೆಸಲಿದ್ದಾರೆ. ಮಾರುತಿ ದೇವಸ್ಥಾನ, ಗಣಪತಿ ದೇವಸ್ಥಾನ ಸೇರಿ ವಿವಿಧ ದೇಗುಲಗಳಿಗೆ ಭೇಟಿ ‌ನೀಡಿ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ನಗರದ ಸರ್ದಾರ್ ಮೈದಾನಕ್ಕೆ ಬೆಳಗ್ಗೆ 10.30ಕ್ಕೆ ಆಗಮಿಸಿ ಅಲ್ಲಿಂದ ಡಿಸಿ ಕಚೇರಿವರೆಗೆ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ.

ಇದನ್ನೂ ಓದಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಬೈಎಲೆಕ್ಷನ್​: ದಿ.ಸುರೇಶ್ ಅಂಗಡಿ ಪತ್ನಿಗೆ ಬಿಜೆಪಿ ಟಿಕೆಟ್​

Published On - 9:06 am, Tue, 30 March 21

ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್