AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲಿ ಶಿಷ್ಟಾಚಾರ ಪಕ್ಕಕ್ಕಿಟ್ಟು ಹೆಚ್ ಡಿ ರೇವಣ್ಣಗೆ ಪಕ್ಕ ಕೂಡಿಸಿಕೊಂಡು, ಸಭೆ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ

BS Yediyurappa: ಹಾಸನ ಏರ್​ಪೋರ್ಟ್​ ಕಾಮಗಾರಿ ಬೇಗ ಶುರು ಮಾಡ್ತೇವೆ. ಇದರ ಬಗ್ಗೆ ಹೆಚ್.ಡಿ. ದೇವೇಗೌಡರ ಜತೆ ಚರ್ಚಿಸಿ ತೀರ್ಮಾನ ಮಾಡ್ತೇವೆ. ಏರ್​ಪೋರ್ಟ್​ ನಿರ್ಮಾಣ ಕಾಮಗಾರಿಗೆ ಹಣದ ಕೊರತೆಯಿಲ್ಲ. ಹಾಗಾಗಿ ಶೀಘ್ರದಲ್ಲೇ ಕೆಲಸ ಆರಂಭಿಸಲು ಆದ್ಯತೆ ನೀಡುತ್ತೇವೆ ಎಂದು ಹಾಸನ ಜಿಲ್ಲಾಡಳಿತದ ಜತೆ ಸಭೆ ಬಳಿಕ ಸಿಎಂ ಯಡಿಯೂರಪ್ಪ ಹೇಳಿದರು.

ಹಾಸನದಲ್ಲಿ ಶಿಷ್ಟಾಚಾರ ಪಕ್ಕಕ್ಕಿಟ್ಟು ಹೆಚ್ ಡಿ ರೇವಣ್ಣಗೆ ಪಕ್ಕ ಕೂಡಿಸಿಕೊಂಡು, ಸಭೆ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ
ಶಿಷ್ಟಾಚಾರ ಪಕ್ಕಕ್ಕಿಟ್ಟು ಹೆಚ್ ಡಿ ರೇವಣ್ಣಗೆ ಪಕ್ಕ ಕೂಡಿಸಿಕೊಂಡು, ಸಭೆ ನಡೆಸಿದ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jun 11, 2021 | 1:00 PM

ಹಾಸನ: ರಾಜ್ಯದ ಮುಖ್ಯಮಂತ್ರಿಯ ಶಿಷ್ಟಾಚಾರವನ್ನು ಲೆಕ್ಕಿಸದೆ ಜೆಡಿಎಸ್ ನಾಯಕನನ್ನು ಜೊತೆಯಲ್ಲಿಯೇ ಕೂರಿಸಿಕೊಂಡು ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಇಂದು ಮೀಟಿಂಗ್​ ನಡೆಸಿದರು. ಹಾಸನದ ಜಿಲ್ಲಾ ಪಂ‌ಚಾಯತ್​ ಹೊಯ್ಸಳ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾಜಿ ಸಚಿವ, ಸ್ಥಳೀಯ ಪ್ರಭಾವೀ ನಾಯಕ ಹೆಚ್ ಡಿ​ ರೇವಣ್ಣರನ್ನ ಜೊತೆಯಲ್ಲಿ ಕೂರಿಸಿಕೊಂಡು ಅಧಿಕಾರಿಗಳ ಮೀಟಿಂಗ್​ ನಡೆಸಿದರು. ಹಿರಿಯ ಶಾಸಕ ಅನ್ನೋ ಕಾರಣಕ್ಕೆ ವೇದಿಕೆ ಮೇಲೆ ಕರೆಸಿದ ಸಿಎಂ ಯಡಿಯೂರಪ್ಪ ಅವರು ಶಿಷ್ಟಾಚಾರ ಪಕ್ಕಕ್ಕಿಟ್ಟು ರೇವಣ್ಣಗೆ ಗೌರವ ನೀಡಿದರು. ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ ಗೋಪಾಲಯ್ಯ, ಅರೋಗ್ಯ ಸಚಿವ ಸುಧಾಕರ್‌ ಜೊತೆಗೆ ಮಾಜಿ ಸಚಿವ ರೇವಣ್ಣಗೂ ವೇದಿಕೆಯಲ್ಲಿ ಸ್ಥಾನ ಕಲ್ಪಿಸಲಾಗಿತ್ತು.

ಸಭೆಯ ಬಳಿಕ ಮಾತನಾಡಿದ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಹಾಸನ ಜಿಲ್ಲೆಯಲ್ಲಿ ಇನ್ನೂ ಸಾಕಷ್ಟು ಕೆಲಸ ಆಗಬೇಕಿದೆ. ರೇವಣ್ಣರ ಜೊತೆ ಚರ್ಚೆ ಮಾಡಿ ಹಂತ ಹಂತವಾಗಿ ಎಲ್ಲಾ ಕೆಲಸವನ್ನು ಮಾಡುತ್ತೇವೆ ಎಂದು ಹೇಳಿದರು.

ಹಾಸನ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಹಾಸನಕ್ಕೆ ಭೇಟಿ ನೀಡಿದರು. ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳ ಜತೆ ಸಭೆ ನಡೆಸಿ, ಕೊರೊನಾ ನಿಯಂತ್ರಣ ಕ್ರಮಗಳ ಬಗ್ಗೆ ಚರ್ಚಿಸಿದರು. ಬಳಿಕ ಹೆಲಿಕಾಪ್ಟರ್ ಮೂಲಕ ಶಿಕಾರಿಪುರಕ್ಕೆ ಹೊರಟರು. ನಾಳೆ ಶಿವಮೊಗ್ಗ ಜಿಲ್ಲಾಡಳಿತದ ಜೊತೆ ಸಭೆ ನಡೆಸುತ್ತೇನೆ ಎಂದು ಇದೇ ವೇಳೆ ಸಿಎಂ ಯಡಿಯೂರಪ್ಪ ತಿಳಿಸಿದರು.

ಇತ್ತೀಚಿನ ದಿನಗಳಲ್ಲಿ ಮೊದಲ ಬಾರಿಗೆ ಜಿಲ್ಲಾ ಪ್ರಗತಿ ಪರಿಶೀಲನೆ ಸಭೆ ಬಳಿಕ ಮಾತನಾಡಿದ ಸಿಎಂ ಯಡಿಯೂರಪ್ಪ, ಹಾಸನ ಜಿಲ್ಲೆಯ ಎಲ್ಲಾ ಶಾಸಕರು ಸಲಹೆ ನೀಡಿದ್ದಾರೆ. ಶೀಘ್ರದಲ್ಲೇ ಕೊವಿಡ್ ರೇಟ್ ಶೇಕಡಾ 5ಕ್ಕೆ ಇಳಿಸಲು ಶ್ರಮ ವಹಿಸಲಿದ್ದಾರೆ. ಹಾಸನ ಏರ್​ಪೋರ್ಟ್​ ಕಾಮಗಾರಿ ಬೇಗ ಶುರು ಮಾಡ್ತೇವೆ. ಇದರ ಬಗ್ಗೆ ಹೆಚ್.ಡಿ. ದೇವೇಗೌಡರ ಜತೆ ಚರ್ಚಿಸಿ ತೀರ್ಮಾನ ಮಾಡ್ತೇವೆ. ಯಾರಿಂದ ಕೆಲಸ ಆಗಬೇಕೆಂದು ತೀರ್ಮಾನ ಮಾಡುತ್ತೇವೆ. ಏರ್​ಪೋರ್ಟ್​ ನಿರ್ಮಾಣ ಕಾಮಗಾರಿಗೆ ಹಣದ ಕೊರತೆಯಿಲ್ಲ. ಹಾಗಾಗಿ ಶೀಘ್ರದಲ್ಲೇ ಕೆಲಸ ಆರಂಭಿಸಲು ಆದ್ಯತೆ ನೀಡುತ್ತೇವೆ ಎಂದು ಹಾಸನ ಜಿಲ್ಲಾಡಳಿತದ ಜತೆ ಸಭೆ ಬಳಿಕ ಹೇಳಿದರು.

(CM BS Yediyurappa visits hassan conducts district meeting at zp hall along with hd revanna)

ಯಡಿಯೂರಪ್ಪ ಎ1 ಆರೋಪಿ; ನೀರಾವರಿ ಇಲಾಖೆಯೊಂದರಲ್ಲೇ ಕೋಟಿ ಕೋಟಿ ಲೂಟಿ: ಮಾಜಿ ಸಚಿವ ಹೆಚ್‌.ಡಿ.ರೇವಣ್ಣ

Published On - 12:56 pm, Fri, 11 June 21

ವೇಗದ ಶತಕ ಸಿಡಿಸಿ ಹೆಡ್ ದಾಖಲೆ ಮುರಿದ ಕ್ಲಾಸೆನ್
ವೇಗದ ಶತಕ ಸಿಡಿಸಿ ಹೆಡ್ ದಾಖಲೆ ಮುರಿದ ಕ್ಲಾಸೆನ್
ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ