AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Lockdown: ಲಾಕ್​ಡೌನ್ ಮಾರ್ಗಸೂಚಿಗೆ ಕ್ಷಣಗಣನೆ: ಶೀಘ್ರದಲ್ಲೇ ಮುಖ್ಯಮಂತ್ರಿಯಿಂದ ವಿವರ ಪ್ರಕಟ

Karnataka Lockdown News: ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸುದ್ದಿಗೋಷ್ಠಿ ನಡೆಸಿ ಕರ್ನಾಟಕದಲ್ಲಿ ಲಾಕ್​ಡೌನ್ ಹೇಗಿರಲಿದೆ ಎಂಬುದನ್ನು ವಿವರಿಸಿಲಿದ್ದಾರೆ.

Karnataka Lockdown: ಲಾಕ್​ಡೌನ್ ಮಾರ್ಗಸೂಚಿಗೆ ಕ್ಷಣಗಣನೆ: ಶೀಘ್ರದಲ್ಲೇ ಮುಖ್ಯಮಂತ್ರಿಯಿಂದ ವಿವರ ಪ್ರಕಟ
ಡಿಸಿಎಂ ಅಶ್ವತ್ಥನಾರಾಯಣ
guruganesh bhat
|

Updated on:May 07, 2021 | 6:26 PM

Share

ಬೆಂಗಳೂರು: ಇನ್ನೇನು ಕೆಲವೇ ಹೊತ್ತಿನಲ್ಲಿ ಹೊಸ ಮಾರ್ಗಸೂಚಿ ಬಿಡುಗಡೆಯಾಗಲಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾರ್ಗಸೂಚಿ ಪ್ರಕಟಿಸಲಿದ್ದಾರೆ ಎಂದು ವಿಧಾನಸೌಧದಲ್ಲಿ ಡಿಸಿಎಂ ಡಾ.ಅಶ್ವತ್ಥ್ ನಾರಾಯಣ ತಿಳಿಸಿದರು. ಸಿಎಂ ಯಡಿಯೂರಪ್ಪ ಎಲ್ಲಾ ಸಚಿವರ ಅಭಿಪ್ರಾಯ ಪಡೆದಿದ್ದಾರೆ. ಅವರೇ ಲಾಕ್​ಡೌನ್ ಬಗ್ಗೆ ಅಧಿಕೃತ ಘೋಷಣೆ ಮಾಡಲಿದ್ದಾರೆ. ಕೊರೊನಾ ಸೋಂಕಿತರಿಗೆ ಚಿಕಿತ್ಸೆ ಬಗ್ಗೆ ಚರ್ಚೆ ನಡೆಸಿದ್ದೇವೆ. ಏನೆಲ್ಲ ಸುಧಾರಣೆ ಮಾಡಬೇಕು ಎಂಬುದರ ಬಗ್ಗೆ ಚರ್ಚಿಸಿದ್ದೇವೆ ಎಂದು ಅವರು ತಿಳಿಸಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸುದ್ದಿಗೋಷ್ಠಿ ನಡೆಸಿ ಕರ್ನಾಟಕದಲ್ಲಿ ಲಾಕ್​ಡೌನ್ ಹೇಗಿರಲಿದೆ ಎಂಬುದನ್ನು ವಿವರಿಸಿಲಿದ್ದಾರೆ. ಸುದ್ದಿಗೋಷ್ಠಿಗೆ ಇನ್ನೇನು ಕೆಲವೇ ಕ್ಷಣಗಳಿವೆ. ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಯಡಿಯೂರಪ್ಪ ಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದು ಹೇಳಲಾಗಿದೆ.

ಲಾಕ್​ಡೌನ್ ಮಾರ್ಗಸೂಚಿ ಸಮೇತ ಸಿಎಂ ಯಡಿಯೂರಪ್ಪ ಅವರ ಮನೆಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಮತ್ತು ಹಿರಿಯ ಅಧಿಕಾರಿಗಳು ಆಗಮಿಸಿದ್ದಾರೆ. ಇನ್ನೇನು ಕೆಲ ಹೊತ್ತಿನಲ್ಲಿ ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿ ನಡೆಸಿ ಲಾಕ್​ಡೌನ ಮತ್ತು ನಿಯಮಾವಳಿ ಪ್ರಕಟಿಸುವ ಸಾಧ್ಯತೆಗಳು ಹೆಚ್ಚಿವೆ.

ಆಕ್ಸಿಜನ್ ಪ್ರಮಾಣ 90ರಷ್ಟು ಕಡಿಮೆ ಇದ್ದರೆ ಮಾತ್ರ ಆಸ್ಪತ್ರೆಗೆ ದಾಖಲು ಮಾಡಬೇಕು. ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾದ ತಕ್ಷಣ ಅವರನ್ನು ಕೋವಿಡ್ ಕೇರ್ ಸೆಂಟರ್ ಗೆ ಕಳುಹಿಸುವ ಬಗ್ಗೆ ತೀರ್ಮಾನ ಮಾಡಲಾಗಿದೆ. ಗುಣಮಟ್ಟದ ಚಿಕಿತ್ಸೆ ನೀಡದಿರುವ ಬಗ್ಗೆ ದೂರುಗಳು ಬರುತ್ತಿವೆ. ಗುಣಮಟ್ಟದ ಚಿಕಿತ್ಸೆ ನೀಡಲು ಮಾನಿಟರಿಂಗ್, ಆಡಿಟ್ ಮಾಡಲು ಸೂಚನೆ ನೀಡಲಾಗಿದೆ. ರಿಮೋಟ್ ಐಸಿಯೂ ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ. ಸಾವಿನ ಪ್ರಮಾಣ ಕಡಿಮೆ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದು ಅವರು ವಿವರಿಸಿದರು.

ಮನೆಯಲ್ಲಿ ಐಸೋಲೇಷನ್ ಇರುವವರಿಗೆ ಸೂಕ್ತ ಚಿಕಿತ್ಸೆ ಕೊಡಿಸಲು ಕ್ರಮ ತೆಗೆದುಕೊಳ್ಳಲಾಗಿದೆ. ಪ್ರಾಥಮಿಕ ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆ ನಡೆಸಲು ಸೂಚನೆ ನೀಡಿದ್ದೇವೆ ಎಂದ ಅವರು, ಕರೊನಾ ಸೋಂಕಿತರಿಗೆ ಪದೇ ಪದೇ ಸಿ.ಟಿ.ಸ್ಕ್ಯಾನ್ ಮಾಡುವುದರಿಂದ ಕ್ಯಾನ್ಸರ್ ಸಾಧ್ಯತೆಯ ಬಗ್ಗೆ ಎಚ್ಚರಿಕೆ ನೀಡಿರುವ ಏಮ್ಸ್ ನಿರ್ದೇಶಕರ ವಿಚಾರವನ್ನೂ ಪ್ರಸ್ತಾಪಿಸಿದರು. ಆರ್​ಟಿಪಿಸಿಆರ್ ನೆಗೆಟಿವ್ ಬಂದವರಿಗೆ ಸಿ.ಟಿ.ಸ್ಕ್ಯಾನ್ ಮಾಡಲಾಗುತ್ತಿದೆ. ಸಿ.ಟಿ. ಸ್ಕ್ಯಾನ್ ಬದಲು ರಕ್ತ ಪರೀಕ್ಷೆ ಕೂಡ ಮಾಡಬಹುದು. ಅದರಿಂದಲೂ ವರದಿ ಪಡೆಯಬಹುದು. ಕೇಂದ್ 2 ಲಕ್ಷ 62 ಸಾವಿರ ರೆಮ್​ಡೆಸಿವಿರ್ ಲಸಿಕೆಯನ್ನು ಕರ್ನಾಟಕಕ್ಕೆ ನೀಡಿದೆ. ಈ ಲೆಕ್ಕದಲ್ಲಿ ಪ್ರತಿದಿನ 37 ಸಾವಿರ ಡೋಸ್ ಸಿಗುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ: Shankanada Aravind: ಕನ್ನಡದ ಹಿರಿಯ ನಟ ಶಂಖನಾದ ಅರವಿಂದ್​​ ಕೊವಿಡ್​ಗೆ ಬಲಿ

ಬಳ್ಳಾರಿಯ ವಿವಿಯಿಂದ ಕೊವಿಡ್ ಕೇರ್ ಸೆಂಟರ್; ಕೊರೊನಾ ಸೋಂಕಿತರ ನೆರವಿಗೆ ನಿಂತ ವಿಶ್ವವಿದ್ಯಾಲಯ

(CM BS Yediyurappa will announce lockdown soon says DCM Dr Ashwath Narayan)

Published On - 6:15 pm, Fri, 7 May 21

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್