ದೇವೇಗೌಡ್ರು ಬೇಕಿದ್ರೆ ಕೋರ್ಟ್‌ಗೆ ಹೋಗಲಿ, ಉಪವಾಸ ಮಾಡ್ಲಿ: ನೈಸ್‌ʼ ಪತ್ರಕ್ಕೆ ಡಿಕೆಶಿ ತಿರುಗೇಟು

ಬೆಂಗಳೂರಿನ ನೈಸ್ ರಸ್ತೆ ಟೋಲ್ ವಿಚಾರವಾಗಿ ರಾಜಕೀಯ ನಾಯಕರ ನಡುವೆ ಆರೋಪ ಪ್ರತ್ಯಾರೋಪಗಳು ನಡೆದಿವೆ. ಯಾರು ನೈಸ್ ರಸ್ತೆಯಲ್ಲಿ ಟೋಲ್ ಕಟ್ಟಬೇಡಿ ಎಂದು ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ ಕರೆ ಕೊಟ್ಟಿದ್ದಾರೆ. ಇದರ ಬೆನ್ನಲ್ಲೇ ಸಾರ್ವಜನಿಕರು ಟೋಲ್ ಕಟ್ಟಲು ಹಿಂದೇಟು ಹಾಕುತ್ತಿದ್ದು, ಇದರಿಂದ ಟೋಲ್ ಸಿಬ್ಬಂದಿ ಜನರ ನಡುವೆ ಗಲಾಟೆಗಳು ನಡೆಯುತ್ತಿವೆ. ಇದರ ಮಧ್ಯೆ ಇದೀಗ ಎಂಟ್ರಿ ಕೊಟ್ಟಿರುವ ದೇವೇಗೌಡ್ರಿಗೆ ಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ದೇವೇಗೌಡ್ರು ಬೇಕಿದ್ರೆ ಕೋರ್ಟ್‌ಗೆ ಹೋಗಲಿ, ಉಪವಾಸ ಮಾಡ್ಲಿ: ನೈಸ್‌ʼ ಪತ್ರಕ್ಕೆ ಡಿಕೆಶಿ ತಿರುಗೇಟು
HD Devegowda And Dk Shivakumar
Edited By:

Updated on: Sep 07, 2026 | 7:24 PM

ಬೆಂಗಳೂರು, (ಸೆಪ್ಟೆಂಬರ್ 07): ನೈಸ್ ರಸ್ತೆಯಲ್ಲಿ ಟೋಲ್ ಸಂಗ್ರಹದ ವಿಚಾರಕ್ಕೆ ಸಂಬಂಧಿಸಿದಂತೆ, ದಳಪತಿಗಳು ಮತ್ತು ಸರ್ಕಾರದ ನಡುವೆ ವಾಕ್ಸಮರ ನಡೆಯುತ್ತಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ್ರು, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಪತ್ರವನ್ನು ಬರೆದಿದ್ದಾರೆ. ಇನ್ನು ಇದೀಗ ದೇವೇಗೌಡರ ಪತ್ರಕ್ಕೆ ಪ್ರತಿಕ್ರಿಯಿಸಿರುವ ಡಿಕೆ ಶಿವಕುಮಾರ್, ನೈಸ್‌ ಯೋಜನೆ ವಿಚಾರದಲ್ಲಿ ಕಾನೂನು ಚೌಕಟ್ಟಿನಲ್ಲೇ ಕೆಲಸ ಮಾಡುತ್ತಿದ್ದೇವೆ. ಈ ವಿಚಾರದಲ್ಲಿ ಕಾನೂನು ಅಭಿಪ್ರಾಯವನ್ನೂ ಪಡೆದುಕೊಂಡಿದ್ದೇವೆ. ಬೇಕಾದ್ರೆ ದೇವೇಗೌಡರು ಕೊರ್ಟ್‌ಗೆ ಹೋಲಿ, ಉಪವಾಸ ಆದ್ರೂ ಮಾಡಲಿ ಎಂದು ತಿರುಗೇಟು ನೀಡಿದ್ದಾರೆ.

ʻನೈಸ್‌ʼ ಪ್ರಾಜೆಕ್ಟ್‌ ವಿಚಾರದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಬರೆದಿರುವ ಪತ್ರ ಸಂಬಂಧ ದೇವನಹಳ್ಳಿ ಮಾತನಾಡಿದ ಡಿಕೆ ಶಿವಕುಮಾರ್, ನಾವು ಏನೆ ಮಾಡಿದರು ಕಾನೂನು ಚೌಕಟ್ಟಿನಲ್ಲಿ ಕಾನೂನು ಅಭಿಪ್ರಾಯ ತೆಗೆದುಕೊಂಡಿದ್ದೇವೆ. ಕಾನೂನು ಬಿಟ್ಟು ಏನು ಮಾಡಲ್ಲ ಯಾರು ತಲೆಕೆಡಸಿಕೊಳ್ಳುವ ಅವಶ್ಯಕತೆಯಿಲ್ಲ. ಬೇಕಾದ್ರೆ ಕೋರ್ಟ್ ಇದೆ ಕಾನೂನು ಇದೆ ಉಪವಾಸ ಬೇಕಾದರೆ ಮಾಡಲಿ. ನನಗೂ ಪ್ರಜ್ನೆ ಇದೆ ಬೇಸಿಕ್ ಕಾಮನಸೆನ್ಸ್ ಇದೆ ಎಂದಿದ್ದಾರೆ.

ಇದನ್ನೂ ಓದಿ: ನೈಸ್ ಅಕ್ರಮ ನಿವೇಷನ ಹಂಚಿಕೆ: ಸಿಎಂ ಡಿ.ಕೆ. ಶಿವಕುಮಾರ್‌ಗೆ ದೇವೇಗೌಡರ ಸುದೀರ್ಘ ಪತ್ರ

ಕಾನೂನು ಬಿಟ್ಟು ಯಾವುದೇ ಕೆಲಸ ಮಾಡುವುದಿಲ್ಲ. ಹೀಗಾಗಿ ಯಾರೂ ತಲೆಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ. ಬೇಕಾದ್ರೆ ಕಾನೂನು ಇದೆ, ಕೋರ್ಟ್ ಇದೆ. ಉಪವಾಸ ಮಾಡಬೇಕಾದ್ರೆ ಮಾಡಲಿ. ನನಗೂ ಪ್ರಜ್ಞೆ ಇದೆ, ಬೇಸಿಕ್ ಕಾಮನ್ ಸೆನ್ಸ್ ಇದೆ. ನಿಮ್ಮ ವೈಯಕ್ತಿಕ ಅಭಿಪ್ರಾಯಗಳು ಹಾಗೂ ಚರ್ಚೆಗಳನ್ನ ನಾನು ಮೊದಲಿನಿಂದಲೂ ನೋಡಿದ್ದೇನೆ. ಯಾವ ಅಗ್ರಿಮೆಂಟ್‌ಗೆ ಸಹಿ ಹಾಕಲಾಗಿದೆಯೋ, ಅದೇ ಹಾದಿಯಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಯಾರು ಆಸ್ತಿ ಕಳೆದುಕೊಂಡಿದ್ದಾರೋ ಅವರನ್ನು ರಕ್ಷಣೆ ಮಾಡಬೇಕು ಅಲ್ಲವೇ? ಈ ವಿಚಾರಕ್ಕೆ ಸಂಬಂಧಿಸಿದಂತೆ ಈ ಹಿಂದೆ ಸರ್ಕಾರಗಳು ಮಾಡಿಕೊಂಡಿರುವ ಅಗ್ರಿಮೆಂಟ್‌ಗಳನ್ನೆಲ್ಲ ತಾನು ಪರಿಶೀಲಿಸಿದ್ದೇನೆ. ಎಲ್ಲವನ್ನೂ ಕಾನೂನು ಚೌಕಟ್ಟಿನಲ್ಲೇ ಮುಂದುವರಿಸಲಾಗುವುದು ಎಂದು ಸಿಎಂ ಸ್ಪಷ್ಟಪಡಿಸಿದರು. ಈ ಮೂಲಕ ದೇವೇಗೌಡರ ಪತ್ರಕ್ಕೆ ತಿರುಗೇಟು ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us