AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಹುದ್ದೆಯನ್ನೇ ನನಗೆ ಮೀಸಲಿಟ್ಟಿರಬಹುದು: ಆರ್ ವಿ ದೇಶಪಾಂಡೆ

ಹಿರಿಯ ಶಾಸಕರಾದರೂ ಸಚಿವ ಸ್ಥಾನ ನೀಡದಿರಲು ಕಾರಣ ಏನು? ಎಂಬ ಪತ್ರಕರ್ತರ ಪ್ರಶ್ನೆಗೆ ಶಾಸಕ ಆರ್​​.ವಿ ದೇಶಪಾಂಡೆ ಹಾಸ್ಯಭರಿತವಾಗಿ ಅಚ್ಚರಿ ಉತ್ತರ ನೀಡಿದ್ದಾರೆ.

ಸಿಎಂ ಹುದ್ದೆಯನ್ನೇ ನನಗೆ ಮೀಸಲಿಟ್ಟಿರಬಹುದು: ಆರ್ ವಿ ದೇಶಪಾಂಡೆ
ಶಾಸಕ ಆರ್​ ವಿ ದೇಶಪಾಂಡೆ
ವಿನಾಯಕ ಬಡಿಗೇರ್​, ಉತ್ತರ ಕನ್ನಡ
| Updated By: ವಿವೇಕ ಬಿರಾದಾರ|

Updated on: Jul 15, 2023 | 4:36 PM

Share

ಕಾರವಾರ ಜು.15: ಮುಖ್ಯಮಂತ್ರಿ (Chief Minister) ಹುದ್ದೆಯನ್ನೇ ನನಗೆ ಮೀಸಲಿಟ್ಟಿರಬಹುದು. ಆ ಕಾರಣಕ್ಕೆ ಸಚಿವ ಸ್ಥಾನ ನೀಡಿಲ್ಲ ಎಂದು ಹಳಿಯಾಳ ಶಾಸಕ ಆರ್​​.ವಿ ದೇಶಪಾಂಡೆ (RV Deshapande) ಹಾಸ್ಯಭರಿತವಾಗಿ ಹೇಳಿದರು. ಹಿರಿಯ ಶಾಸಕರಾದರೂ ಸಚಿವ ಸ್ಥಾನ ನೀಡದಿರಲು ಕಾರಣ ಏನು? ಎಂಬ ಪತ್ರಕರ್ತರ ಪ್ರಶ್ನೆಗೆ ಹೀಗೆ ಉತ್ತರಿಸಿದರು. ಇಂದು (ಜು.15) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ರಾಜ್ಯದಲ್ಲಿ ಗ್ಯಾರಂಟಿಗಳ ಮೂಲಕವೇ ಬಿಜೆಪಿಯನ್ನು (BJP) ಸೋಲಿಸಿದ್ದೇವೆ. ರಾಜ್ಯ ಸರ್ಕಾರ 5 ಗ್ಯಾರಂಟಿಗಳನ್ನು ಜಾರಿಗೊಳಿಸುತ್ತಿದೆ. ವಿರೋಧ ಪಕ್ಷದವರು ಇದನ್ನೆಲ್ಲ ಮೆಚ್ಚಬೇಕು, ಟೀಕೆ ಮಾಡಬಾರದು ಎಂದರು.

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅವೈಜ್ಞಾನಿಕ ಕಾಮಗಾರಿ ವಿಚಾರವಾಗಿ ಮಾತನಾಡಿದ ಅವರು ಕಾಮಗಾರಿ ಪೂರ್ಣಗೊಳಿಸದೆ ಟೋಲ್ ಸಂಗ್ರಹಿಸುತ್ತಿರುವುದು ತಪ್ಪು. ಕಾಮಗಾರಿ ಪೂರ್ಣಗೊಳ್ಳುವವರೆಗೆ ಟೋಲ್ ಸಂಗ್ರಹಿಸಬಾರದು. ಈ ಬಗ್ಗೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೂ ಪತ್ರ ಬರೆಯುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ: ಆಷಾಢ ಮುಗಿಯುತ್ತಿದ್ದಂತೆಯೇ ಮನೆ ಬದಲಿಸಲಿರುವ ಸಿದ್ದರಾಮಯ್ಯ, ಸಿಎಂ ಅದೃಷ್ಟ ನಿವಾಸಕ್ಕೆ ಡಿಕೆ ಶಿವಕುಮಾರ್

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಅಭೂತಪೂರ್ವ ಗೆಲುವು ಸಾಧಿಸಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ ಸಂಭವ್ಯ ಪಟ್ಟಿಯಲ್ಲಿ ಆರ್​​. ವಿ ದೇಶಪಾಂಡೆಯವರ ಹೆಸರೂ ಇತ್ತು. ಅಲ್ಲದೇ ಆರ್​. ವಿ ದೇಶಪಾಂಡೆ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು. ಆದರೆ ಯಾವಾಗ ಸಚಿವ ಸ್ಥಾನ ಸಿಗಲ್ಲ ಎಂದು ಖಾತರಿಯಾಯಿತು, ಸ್ಪೀಕರ್​​ ಸ್ಥಾನಕ್ಕೆ ಹೆಸರು ಕೇಳಿ ಬರುತ್ತಿತ್ತು. ಆದರೆ ದೇಶಪಾಂಡೆ ಪರೋಕ್ಷವಾಗಿ ಸ್ಪೀಕರ್ ಆಗಲು ತಯಾರಿಲ್ಲ ಎಂದು ಹೇಳಿಕೆ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ