AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gruha Lakshmi Scheme: ಗೃಹ ಲಕ್ಷ್ಮೀ ಯೋಜನೆ; ಷರತ್ತು, ನಿಯಮಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಹಿತಿ

ರಾಜ್ಯದ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡುದಾರರ ಪ್ರತಿಯೊಂದು ಕುಟುಂಬದ ಯಜಮಾನಿಯ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು 2,000 ರೂ. ವರ್ಗಾವಣೆ ಮಾಡಲಾಗುವುದು. ಆಗಸ್ಟ್ 15ರಿಂದ ಈ ಯೋಜನೆ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಘೋಷಿಸಿದರು.

Gruha Lakshmi Scheme: ಗೃಹ ಲಕ್ಷ್ಮೀ ಯೋಜನೆ; ಷರತ್ತು, ನಿಯಮಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಹಿತಿ
ಗೃಹ ಲಕ್ಷ್ಮೀ ಯೋಜನೆ
Ganapathi Sharma
|

Updated on:Jun 02, 2023 | 3:55 PM

Share

ಬೆಂಗಳೂರು: ರಾಜ್ಯದ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡುದಾರರ (BPL And APL Card) ಪ್ರತಿಯೊಂದು ಕುಟುಂಬದ ಯಜಮಾನಿಯ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು 2,000 ರೂ. ವರ್ಗಾವಣೆ ಮಾಡಲಾಗುವುದು. ಆಗಸ್ಟ್ 15ರಿಂದ ಗೃಹ ಲಕ್ಷ್ಮೀ (Gruha Lakshmi Scheme) ಯೋಜನೆ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಘೋಷಿಸಿದರು. ಸಚಿವ ಸಂಪುಟ ಸಭೆಯ ಬಳಿಕ  ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಯೋಜನೆ ಘೋಷಣೆ ಮಾಡಿದರು. ಗೃಹ ಲಕ್ಷ್ಮೀ ಯೋಜನೆ ಜಾರಿಗೊಳಿಸಲು ನಿರ್ಧರಿಸಲಾಗಿದೆ. ಆದರೆ, ಇದಕ್ಕೆ ಬ್ಯಾಂಕ್ ಖಾತೆ, ಆಧಾರ್ ಕಾರ್ಡ್​ ಒದಗಿಸಬೇಕಾಗುತ್ತದೆ. ಮನೆಯ ಯಜಮಾನಿ ಯಾರು ಎಂಬುದರ ಮಾಹಿತಿಯನ್ನೂ ಒದಗಿಸಬೇಕಾಗುತ್ತದೆ. ಮನೆ ಯಜಮಾನಿಯ ಬ್ಯಾಂಕ್ ಖಾತೆಗೆ ತಿಂಗಳಿಗೆ 2000 ವರ್ಗಾವಣೆ ಮಾಡುತ್ತೇವೆ ಎಂದು ನಾವು ಹೇಳಿದ್ದೆವು. ಹೀಗಾಗಿ ಯಜಮಾನಿಯ ಖಾತೆಗೆ ಹಣ ವರ್ಗಾವಣೆ ಮಾಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದರು.

ಗೃಹ ಲಕ್ಷ್ಮೀ ಯೋಜನೆ ಮುಖ್ಯಾಂಶಗಳು

  • ಜೂನ್ 15ರಿಂದ ಜುಲೈ 15ರ ಒಳಗೆ ಅರ್ಜಿ ನೀಡಬೇಕು.
  • ಆನ್​ಲೈನ್ ಮೂಲಕ ಅರ್ಜಿಗಳನ್ನು ತಲುಪಿಸಬೇಕು.
  • ಜುಲೈ 15ರಿಂದ ಆಗಸ್ಟ್ 15 ರ ಒಳಗೆ ಅರ್ಜಿಗಳನ್ನು ಪರಿಶೀಲಿಸಿ ಆಗಸ್ಟ್ 15ರಂದು ಯೋಜನೆ ಜಾರಿಗೊಳಿಸುತ್ತೇವೆ.
  • ಅರ್ಜಿಯಲ್ಲಿ ಕೊಟ್ಟ ಮಾಹಿತಿಯ ಆಧಾರದಲ್ಲಿ ಯೋಜನೆ ಜಾರಿಗೊಳಿಸಲಾಗುವುದು
  • ಪರಿಶೀಲನೆ ಪ್ರಕ್ರಿಯೆಗೆ ಸಮಯ ತೆಗೆದುಕೊಳ್ಳುವುದರಿಂದ ಈ ತಿಂಗಳಿನಿಂದಲೇ ಜಾರಿಗೆ ತರಲಾಗದು

ಇದನ್ನೂ ಓದಿ: Karnataka Guarantee Schemes: 5 ಗ್ಯಾರಂಟಿ ಜಾರಿ, ಅಧಿಕೃತವಾಗಿ ಘೋಷಿಸಿದ ಸಿಎಂ: ಕಂಡೀಷನ್​ಗಳೇನು? ಇಲ್ಲಿದೆ ವಿವರ

ಕಾಂಗ್ರೆಸ್ ಪಕ್ಷ ಚುನಾವಣೆಗೂ ಮುನ್ನ ನೀಡಿದ ಐದು ಭರವಸೆಗಳಲ್ಲಿ ಗೃಹ ಲಕ್ಷ್ಮೀ ಯೋಜನೆಯೂ ಒಂದು. 2023 ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನು ಗೆದ್ದು ಕಾಂಗ್ರೆಸ್ ಭಾರಿ ಬಹುಮತದೊಂದಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಮರಳಿತು.

5 ಗ್ಯಾರಂಟಿಗಳ ಜಾರಿಗೆ ಯಾವುದೇ ಗೊಂದಲವಿಲ್ಲದಂತೆ ಪರಿಹರಿಸಲು ಪ್ರತ್ಯೇಕ ಮಾರ್ಗಸೂಚಿಯನ್ನು ಸರ್ಕಾರ ಪ್ರಕಟಿಸಲಿದೆ. ಗೃಹಲಕ್ಷ್ಮೀ, ಗೃಹಜ್ಯೋತಿ, ಯುವನಿಧಿ, ಶಕ್ತಿ, ಅನ್ನಭಾಗ್ಯಕ್ಕೆ ಪ್ರತ್ಯೇಕವಾಗಿ ಮಾರ್ಗಸೂಚಿ ಪ್ರಕಟಿಸಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:09 pm, Fri, 2 June 23

ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್