AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gruha Lakshmi Scheme: ಗೃಹ ಲಕ್ಷ್ಮೀ ಯೋಜನೆ; ಷರತ್ತು, ನಿಯಮಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಹಿತಿ

ರಾಜ್ಯದ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡುದಾರರ ಪ್ರತಿಯೊಂದು ಕುಟುಂಬದ ಯಜಮಾನಿಯ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು 2,000 ರೂ. ವರ್ಗಾವಣೆ ಮಾಡಲಾಗುವುದು. ಆಗಸ್ಟ್ 15ರಿಂದ ಈ ಯೋಜನೆ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಘೋಷಿಸಿದರು.

Gruha Lakshmi Scheme: ಗೃಹ ಲಕ್ಷ್ಮೀ ಯೋಜನೆ; ಷರತ್ತು, ನಿಯಮಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಹಿತಿ
ಗೃಹ ಲಕ್ಷ್ಮೀ ಯೋಜನೆ
ಗಣಪತಿ ಶರ್ಮಾ
|

Updated on:Jun 02, 2023 | 3:55 PM

Share

ಬೆಂಗಳೂರು: ರಾಜ್ಯದ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡುದಾರರ (BPL And APL Card) ಪ್ರತಿಯೊಂದು ಕುಟುಂಬದ ಯಜಮಾನಿಯ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು 2,000 ರೂ. ವರ್ಗಾವಣೆ ಮಾಡಲಾಗುವುದು. ಆಗಸ್ಟ್ 15ರಿಂದ ಗೃಹ ಲಕ್ಷ್ಮೀ (Gruha Lakshmi Scheme) ಯೋಜನೆ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಘೋಷಿಸಿದರು. ಸಚಿವ ಸಂಪುಟ ಸಭೆಯ ಬಳಿಕ  ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಯೋಜನೆ ಘೋಷಣೆ ಮಾಡಿದರು. ಗೃಹ ಲಕ್ಷ್ಮೀ ಯೋಜನೆ ಜಾರಿಗೊಳಿಸಲು ನಿರ್ಧರಿಸಲಾಗಿದೆ. ಆದರೆ, ಇದಕ್ಕೆ ಬ್ಯಾಂಕ್ ಖಾತೆ, ಆಧಾರ್ ಕಾರ್ಡ್​ ಒದಗಿಸಬೇಕಾಗುತ್ತದೆ. ಮನೆಯ ಯಜಮಾನಿ ಯಾರು ಎಂಬುದರ ಮಾಹಿತಿಯನ್ನೂ ಒದಗಿಸಬೇಕಾಗುತ್ತದೆ. ಮನೆ ಯಜಮಾನಿಯ ಬ್ಯಾಂಕ್ ಖಾತೆಗೆ ತಿಂಗಳಿಗೆ 2000 ವರ್ಗಾವಣೆ ಮಾಡುತ್ತೇವೆ ಎಂದು ನಾವು ಹೇಳಿದ್ದೆವು. ಹೀಗಾಗಿ ಯಜಮಾನಿಯ ಖಾತೆಗೆ ಹಣ ವರ್ಗಾವಣೆ ಮಾಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದರು.

ಗೃಹ ಲಕ್ಷ್ಮೀ ಯೋಜನೆ ಮುಖ್ಯಾಂಶಗಳು

  • ಜೂನ್ 15ರಿಂದ ಜುಲೈ 15ರ ಒಳಗೆ ಅರ್ಜಿ ನೀಡಬೇಕು.
  • ಆನ್​ಲೈನ್ ಮೂಲಕ ಅರ್ಜಿಗಳನ್ನು ತಲುಪಿಸಬೇಕು.
  • ಜುಲೈ 15ರಿಂದ ಆಗಸ್ಟ್ 15 ರ ಒಳಗೆ ಅರ್ಜಿಗಳನ್ನು ಪರಿಶೀಲಿಸಿ ಆಗಸ್ಟ್ 15ರಂದು ಯೋಜನೆ ಜಾರಿಗೊಳಿಸುತ್ತೇವೆ.
  • ಅರ್ಜಿಯಲ್ಲಿ ಕೊಟ್ಟ ಮಾಹಿತಿಯ ಆಧಾರದಲ್ಲಿ ಯೋಜನೆ ಜಾರಿಗೊಳಿಸಲಾಗುವುದು
  • ಪರಿಶೀಲನೆ ಪ್ರಕ್ರಿಯೆಗೆ ಸಮಯ ತೆಗೆದುಕೊಳ್ಳುವುದರಿಂದ ಈ ತಿಂಗಳಿನಿಂದಲೇ ಜಾರಿಗೆ ತರಲಾಗದು

ಇದನ್ನೂ ಓದಿ: Karnataka Guarantee Schemes: 5 ಗ್ಯಾರಂಟಿ ಜಾರಿ, ಅಧಿಕೃತವಾಗಿ ಘೋಷಿಸಿದ ಸಿಎಂ: ಕಂಡೀಷನ್​ಗಳೇನು? ಇಲ್ಲಿದೆ ವಿವರ

ಕಾಂಗ್ರೆಸ್ ಪಕ್ಷ ಚುನಾವಣೆಗೂ ಮುನ್ನ ನೀಡಿದ ಐದು ಭರವಸೆಗಳಲ್ಲಿ ಗೃಹ ಲಕ್ಷ್ಮೀ ಯೋಜನೆಯೂ ಒಂದು. 2023 ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನು ಗೆದ್ದು ಕಾಂಗ್ರೆಸ್ ಭಾರಿ ಬಹುಮತದೊಂದಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಮರಳಿತು.

5 ಗ್ಯಾರಂಟಿಗಳ ಜಾರಿಗೆ ಯಾವುದೇ ಗೊಂದಲವಿಲ್ಲದಂತೆ ಪರಿಹರಿಸಲು ಪ್ರತ್ಯೇಕ ಮಾರ್ಗಸೂಚಿಯನ್ನು ಸರ್ಕಾರ ಪ್ರಕಟಿಸಲಿದೆ. ಗೃಹಲಕ್ಷ್ಮೀ, ಗೃಹಜ್ಯೋತಿ, ಯುವನಿಧಿ, ಶಕ್ತಿ, ಅನ್ನಭಾಗ್ಯಕ್ಕೆ ಪ್ರತ್ಯೇಕವಾಗಿ ಮಾರ್ಗಸೂಚಿ ಪ್ರಕಟಿಸಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:09 pm, Fri, 2 June 23

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ