AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gruha Lakshmi Scheme: ಗೃಹ ಲಕ್ಷ್ಮೀ ಯೋಜನೆ; ಷರತ್ತು, ನಿಯಮಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಹಿತಿ

ರಾಜ್ಯದ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡುದಾರರ ಪ್ರತಿಯೊಂದು ಕುಟುಂಬದ ಯಜಮಾನಿಯ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು 2,000 ರೂ. ವರ್ಗಾವಣೆ ಮಾಡಲಾಗುವುದು. ಆಗಸ್ಟ್ 15ರಿಂದ ಈ ಯೋಜನೆ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಘೋಷಿಸಿದರು.

Gruha Lakshmi Scheme: ಗೃಹ ಲಕ್ಷ್ಮೀ ಯೋಜನೆ; ಷರತ್ತು, ನಿಯಮಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಹಿತಿ
ಗೃಹ ಲಕ್ಷ್ಮೀ ಯೋಜನೆ
ಗಣಪತಿ ಶರ್ಮಾ
|

Updated on:Jun 02, 2023 | 3:55 PM

Share

ಬೆಂಗಳೂರು: ರಾಜ್ಯದ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡುದಾರರ (BPL And APL Card) ಪ್ರತಿಯೊಂದು ಕುಟುಂಬದ ಯಜಮಾನಿಯ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು 2,000 ರೂ. ವರ್ಗಾವಣೆ ಮಾಡಲಾಗುವುದು. ಆಗಸ್ಟ್ 15ರಿಂದ ಗೃಹ ಲಕ್ಷ್ಮೀ (Gruha Lakshmi Scheme) ಯೋಜನೆ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಘೋಷಿಸಿದರು. ಸಚಿವ ಸಂಪುಟ ಸಭೆಯ ಬಳಿಕ  ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಯೋಜನೆ ಘೋಷಣೆ ಮಾಡಿದರು. ಗೃಹ ಲಕ್ಷ್ಮೀ ಯೋಜನೆ ಜಾರಿಗೊಳಿಸಲು ನಿರ್ಧರಿಸಲಾಗಿದೆ. ಆದರೆ, ಇದಕ್ಕೆ ಬ್ಯಾಂಕ್ ಖಾತೆ, ಆಧಾರ್ ಕಾರ್ಡ್​ ಒದಗಿಸಬೇಕಾಗುತ್ತದೆ. ಮನೆಯ ಯಜಮಾನಿ ಯಾರು ಎಂಬುದರ ಮಾಹಿತಿಯನ್ನೂ ಒದಗಿಸಬೇಕಾಗುತ್ತದೆ. ಮನೆ ಯಜಮಾನಿಯ ಬ್ಯಾಂಕ್ ಖಾತೆಗೆ ತಿಂಗಳಿಗೆ 2000 ವರ್ಗಾವಣೆ ಮಾಡುತ್ತೇವೆ ಎಂದು ನಾವು ಹೇಳಿದ್ದೆವು. ಹೀಗಾಗಿ ಯಜಮಾನಿಯ ಖಾತೆಗೆ ಹಣ ವರ್ಗಾವಣೆ ಮಾಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದರು.

ಗೃಹ ಲಕ್ಷ್ಮೀ ಯೋಜನೆ ಮುಖ್ಯಾಂಶಗಳು

  • ಜೂನ್ 15ರಿಂದ ಜುಲೈ 15ರ ಒಳಗೆ ಅರ್ಜಿ ನೀಡಬೇಕು.
  • ಆನ್​ಲೈನ್ ಮೂಲಕ ಅರ್ಜಿಗಳನ್ನು ತಲುಪಿಸಬೇಕು.
  • ಜುಲೈ 15ರಿಂದ ಆಗಸ್ಟ್ 15 ರ ಒಳಗೆ ಅರ್ಜಿಗಳನ್ನು ಪರಿಶೀಲಿಸಿ ಆಗಸ್ಟ್ 15ರಂದು ಯೋಜನೆ ಜಾರಿಗೊಳಿಸುತ್ತೇವೆ.
  • ಅರ್ಜಿಯಲ್ಲಿ ಕೊಟ್ಟ ಮಾಹಿತಿಯ ಆಧಾರದಲ್ಲಿ ಯೋಜನೆ ಜಾರಿಗೊಳಿಸಲಾಗುವುದು
  • ಪರಿಶೀಲನೆ ಪ್ರಕ್ರಿಯೆಗೆ ಸಮಯ ತೆಗೆದುಕೊಳ್ಳುವುದರಿಂದ ಈ ತಿಂಗಳಿನಿಂದಲೇ ಜಾರಿಗೆ ತರಲಾಗದು

ಇದನ್ನೂ ಓದಿ: Karnataka Guarantee Schemes: 5 ಗ್ಯಾರಂಟಿ ಜಾರಿ, ಅಧಿಕೃತವಾಗಿ ಘೋಷಿಸಿದ ಸಿಎಂ: ಕಂಡೀಷನ್​ಗಳೇನು? ಇಲ್ಲಿದೆ ವಿವರ

ಕಾಂಗ್ರೆಸ್ ಪಕ್ಷ ಚುನಾವಣೆಗೂ ಮುನ್ನ ನೀಡಿದ ಐದು ಭರವಸೆಗಳಲ್ಲಿ ಗೃಹ ಲಕ್ಷ್ಮೀ ಯೋಜನೆಯೂ ಒಂದು. 2023 ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನು ಗೆದ್ದು ಕಾಂಗ್ರೆಸ್ ಭಾರಿ ಬಹುಮತದೊಂದಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಮರಳಿತು.

5 ಗ್ಯಾರಂಟಿಗಳ ಜಾರಿಗೆ ಯಾವುದೇ ಗೊಂದಲವಿಲ್ಲದಂತೆ ಪರಿಹರಿಸಲು ಪ್ರತ್ಯೇಕ ಮಾರ್ಗಸೂಚಿಯನ್ನು ಸರ್ಕಾರ ಪ್ರಕಟಿಸಲಿದೆ. ಗೃಹಲಕ್ಷ್ಮೀ, ಗೃಹಜ್ಯೋತಿ, ಯುವನಿಧಿ, ಶಕ್ತಿ, ಅನ್ನಭಾಗ್ಯಕ್ಕೆ ಪ್ರತ್ಯೇಕವಾಗಿ ಮಾರ್ಗಸೂಚಿ ಪ್ರಕಟಿಸಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:09 pm, Fri, 2 June 23

Follow Us
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?