AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shakti Scheme: ಜೂನ್ 11ರಿಂದ ಮಹಿಳೆಯರಿಗೆ ಉಚಿತ ಪ್ರಯಾಣ; ಸಿದ್ದರಾಮಯ್ಯ ಘೋಷಣೆ, ಯಾವೆಲ್ಲ ಬಸ್​​ಗಳಲ್ಲಿ?

ವಿದ್ಯಾರ್ಥಿನಿಯರು ಸೇರಿ ಎಲ್ಲಾ ಮಹಿಳೆಯರಿಗೆ ‘ಶಕ್ತಿ’ ಯೋಜನೆ ಅನ್ವಯವಾಗಲಿದೆ. ರಾಜ್ಯಾದ್ಯಂತ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಎಂದು ಸಿದ್ದರಾಮಯ್ಯ ಹೇಳಿದರು.

Shakti Scheme: ಜೂನ್ 11ರಿಂದ ಮಹಿಳೆಯರಿಗೆ ಉಚಿತ ಪ್ರಯಾಣ; ಸಿದ್ದರಾಮಯ್ಯ ಘೋಷಣೆ, ಯಾವೆಲ್ಲ ಬಸ್​​ಗಳಲ್ಲಿ?
ಕೆಎಸ್​ಆರ್​ಟಿಸಿ ಬಸ್​
ಗಣಪತಿ ಶರ್ಮಾ
|

Updated on:Jun 02, 2023 | 8:44 PM

Share

ಬೆಂಗಳೂರು: ಈಗಾಗಲೇ ತಿಳಿಸಿರುವಂತೆ ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ (KSRTC Bus) ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡುವ ‘ಶಕ್ತಿ’ ಯೋಜನೆಯನ್ನು (Shakti Scheme) ಜೂನ್ 11ರಿಂದ ಆರಂಭ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಘೋಷಿಸಿದರು. ಸಚಿವ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ವಿದ್ಯಾರ್ಥಿನಿಯರು ಸೇರಿ ಎಲ್ಲಾ ಮಹಿಳೆಯರಿಗೆ ‘ಶಕ್ತಿ’ ಯೋಜನೆ ಅನ್ವಯವಾಗಲಿದೆ. ರಾಜ್ಯಾದ್ಯಂತ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಎಂದು ಹೇಳಿದರು.

ಶಕ್ತಿ ಯೋಜನೆಯಡಿ ಎಲ್ಲಾ ಮಹಿಳೆಯರು ಮತ್ತು ವಿದ್ಯಾರ್ಥಿನಿಯರು ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಎಲ್ಲಾ ಮಹಿಳೆಯರು ರಾಜ್ಯದೊಳಗೆ ಉಚಿತವಾಗಿ ಪ್ರಯಾಣಿಸಬಹುದು. ಹವಾನಿಯಂತ್ರಿತ (AC) ಬಸ್‌ಗಳು ಮತ್ತು ಅಂತರರಾಜ್ಯ ಬಸ್‌ಗಳಲ್ಲಿ ಮಾತ್ರ ಉಚಿತ ಪ್ರಯಾಣ ಸೌಲಭ್ಯ ಇರುವುದಿಲ್ಲ. ಎಕ್ಸ್‌ಪ್ರೆಸ್ ಬಸ್‌ಗಳು ಸೇರಿದಂತೆ ಎಲ್ಲಾ ಇತರ ಬಸ್‌ಗಳಲ್ಲಿ ಎಲ್ಲಾ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಎಂದು ಅವರು ತಿಳಿಸಿದ್ದಾರೆ.

ಯಾವೆಲ್ಲ ಬಸ್​ಗಳಲ್ಲಿ ಉಚಿತ ಪ್ರಯಾಣ?

  • ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳಲ್ಲಿ ಉಚಿತ ಪ್ರಯಾಣ
  • ಎಸಿ, ನಾನ್​ ಎಸಿ ಸ್ಲೀಪರ್​ ಬಸ್​ಗಳಲ್ಲಿ ಉಚಿತ ಪ್ರಯಾಣವಿಲ್ಲ
  • ಎಸಿ ಮತ್ತು ಐಷಾರಾಮಿ ಬಸ್​ಗಳಲ್ಲಿ ಉಚಿತ ಪ್ರಯಾಣವಿಲ್ಲ
  • ಅಂತಾರಾಜ್ಯ ಪ್ರಯಾಣಕ್ಕಿಲ್ಲ ಉಚಿತ ಸೌಲಭ್ಯ
  • KSRTC ಬಸ್​ಗಳಲ್ಲಿ ಶೇ 50ರಷ್ಟು ಸೀಟ್ ಪುರುಷರಿಗೆ ಮೀಸಲು
  • ಬಿಎಂಟಿಸಿ ಬಸ್​ಗಳಲ್ಲಿ ಯಾವುದೇ ಸೀಟ್ ಮೀಸಲು ಇರುವುದಿಲ್ಲ

ಇದನ್ನೂ ಓದಿ: Karnataka Guarantee Schemes: 5 ಗ್ಯಾರಂಟಿ ಜಾರಿ, ಅಧಿಕೃತವಾಗಿ ಘೋಷಿಸಿದ ಸಿಎಂ: ಕಂಡೀಷನ್​ಗಳೇನು? ಇಲ್ಲಿದೆ ವಿವರ

ಕಾಂಗ್ರೆಸ್ ಪಕ್ಷ ಚುನಾವಣೆಗೂ ಮುನ್ನ ನೀಡಿದ ಐದು ಭರವಸೆಗಳಲ್ಲಿ ಉಚಿತ ಬಸ್ ಪ್ರಯಾಣವೂ ಒಂದು. 2023 ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನು ಗೆದ್ದು ಕಾಂಗ್ರೆಸ್ ಭಾರಿ ಬಹುಮತದೊಂದಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಮರಳಿತು.

5 ಗ್ಯಾರಂಟಿಗಳ ಜಾರಿಗೆ ಯಾವುದೇ ಗೊಂದಲವಿಲ್ಲದಂತೆ ಪರಿಹರಿಸಲು ಪ್ರತ್ಯೇಕ ಮಾರ್ಗಸೂಚಿಯನ್ನು ಸರ್ಕಾರ ಪ್ರಕಟಿಸಲಿದೆ. ಗೃಹಲಕ್ಷ್ಮೀ, ಗೃಹಜ್ಯೋತಿ, ಯುವನಿಧಿ, ಶಕ್ತಿ, ಅನ್ನಭಾಗ್ಯಕ್ಕೆ ಪ್ರತ್ಯೇಕವಾಗಿ ಮಾರ್ಗಸೂಚಿ ಪ್ರಕಟಿಸಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:23 pm, Fri, 2 June 23

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು