AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಷೇತ್ರ ಅಭಿವೃದ್ಧಿಗೆ 2 ಸಾವಿರ ಕೋಟಿ ರೂ. ಅನುದಾನ: ಸಿಎಂ ಭರವಸೆ

ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕ್ಷೇತ್ರದ ಅಭಿವೃದ್ಧಿಗೆ ಪ್ರತಿ ಶಾಸಕರಿಗೂ 10 ಕೋಟಿ ರೂಪಾಯಿಗಳಂತೆ ಸುಮಾರು 2000 ಕೋಟಿ ರೂಪಾಯಿಗಳ ಅನುದಾನ ನೀಡುವ ಭರವಸೆ ನೀಡಿದರು. ರಸ್ತೆ ಅಭಿವೃದ್ಧಿಗೂ ಹಣ ಮೀಸಲಿಡುವುದಾಗಿ ತಿಳಿಸಿದರು. ಆದರೆ, ಅನುದಾನದ ಬಗ್ಗೆ ಚರ್ಚಿಸಲು ಅವಕಾಶ ನೀಡದಿರುವುದರಿಂದ ಕೆಲವು ಶಾಸಕರು ಅಸಮಾಧಾನ ವ್ಯಕ್ತಪಡಿಸಿದರು.

ಕ್ಷೇತ್ರ ಅಭಿವೃದ್ಧಿಗೆ 2 ಸಾವಿರ ಕೋಟಿ ರೂ. ಅನುದಾನ: ಸಿಎಂ ಭರವಸೆ
ಸಿದ್ದರಾಮಯ್ಯ
ಪ್ರಸನ್ನ ಗಾಂವ್ಕರ್​
| Edited By: |

Updated on:Dec 18, 2024 | 9:57 AM

Share

ಬೆಳಗಾವಿ, ಡಿಸೆಂಬರ್​ 18: ಕ್ಷೇತ್ರದ ಅಭಿವೃದ್ಧಿ ಕೆಲಸಗಳಿಗೆ ಹಣ ನೀಡುವಂತೆ ಕೇಳಿದ ಶಾಸಕರಿಗೆ 10 ಕೋಟಿಯಂತೆ ಸುಮಾರು 2000 ಕೋಟಿ ರೂ. ಅನುದಾನ ನೀಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಭರವಸೆ ನೀಡಿದರು. ಮಂಗಳವಾರ (ಡಿಸೆಂಬರ್​ 17) ರಂದು ಬೆಳಗಾವಿ ಖಾಸಗಿ ಹೊಟೇಲ್​ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ (CLP) ಮಾತನಾಡಿದ ಅವರು, ರಸ್ತೆ ಅಭಿವೃದ್ಧಿಗೂ ಹಣ ನೀಡುವುದಾಗಿ ಹೇಳಿದರು.

ಸಭೆಯಲ್ಲಿ ಮಾತನಾಡಲು ಬಿಡದಿದ್ದಕ್ಕೆ ಶಾಸಕರು ಗರಂ

ಸಭೆಯಲ್ಲಿ ಮಾತನಾಡಲು ಅವಕಾಶ ನೀಡದಿದ್ದಕ್ಕೆ ಶಾಸಕರು ಗರಂ ಆಗಿದರು. ಶಾಸಕಾಂಗ ಸಭೆ ಕೇವಲ ಭಾಷಣಕ್ಕೆ ಮಾತ್ರ ಸೀಮಿತವಾಯ್ತು ಅಂತ ಅಸಮಾಧಾನ ಹೊರಹಾಕಿದರು. ಅನುದಾನದ ವಿಚಾರವಾಗಿ ಚರ್ಚಿಸಲು ತಯಾರಾಗಿದ್ದ ಶಾಸಕರಿಗೆ ಭಾರೀ ನಿರಾಸೆಯಾಯಿತು. ಅನುದಾನ ಕೇಳಲು ಎದ್ದು ನಿಂತ ಶಾಸರಿಗೆ ಮುಂದೆ ನೋಡೋಣ ಅಂತ ಹೇಳಿ ಸಿಎಂ, ಡಿಸಿಎಂ ಸುದೀರ್ಘ ಭಾಷಣ ಮಾಡಿ ಶಾಸಕಾಂಗ ಸಭೆ ಅಂತ್ಯ ಮಾಡಿದರು.

ಅಧಿವೇಶನದಲ್ಲಿ ಪ್ರಸ್ತಾಪಿಸಲು ವಕ್ಫ್ ಹಾಗೂ ಪಂಚಮಸಾಲಿ ಮೀಸಲಾತಿ ಬಿಟ್ಟರೆ ಬಿಜೆಪಿಯವರಿಗೆ ಬೇರೇನೂ ವಿಚಾರ ಗೊತ್ತಿಲ್ಲ. ವಕ್ಫ್ ವಿಚಾರದಲ್ಲಿ ಸಚಿವ ಜಮೀರ್ ಅಹ್ಮದ್ ಒಳ್ಳೆಯ ಉತ್ತರ ಕೊಟ್ಟಿದ್ದಾರೆ. ದುಡ್ಡಿಲ್ಲ ದುಡ್ಡಿಲ್ಲ ಅಂತ ಹೇಳಬೇಡಿ, ನಮ್ಮ ಬಳಿ ದುಡ್ಡು ಇದೆ. ಬಿಜೆಪಿಯವರು ಸುಮ್ಮನೆ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ದುಡ್ಡು ಇಲ್ಲದೇ ಇದ್ದಿದ್ದರೇ ರೋಣದಲ್ಲಿ 200 ಕೋಟಿ ರೂ. ಕೆಲಸ ಮಾಡಲು ಆಗುತ್ತಿತ್ತಾ, ಸಚಿವ ಜಿ ಪರಮೇಶ್ವರ್ ಅವರ ಕ್ಷೇತ್ರದಲ್ಲಿ ಕೆಲಸ ಮಾಡಲು ಆಗುತ್ತಿತ್ತಾ ಎಂದರು.

ಇದನ್ನೂ ಓದಿ:  ವಿಜಯೇಂದ್ರ ಸೇರಿ ಮೊದಲ ಬಾರಿ ಆಯ್ಕೆಯಾದ 27 ಶಾಸಕರಿಂದ ಸಿಎಂಗೆ ಪತ್ರ: 100 ಕೋಟಿ ರೂ. ಬಿಡುಗಡೆಗೆ ಮನವಿ

ಬಿಜೆಪಿಯವರು ಅನುದಾನ ಇಲ್ಲ ಎಂದು ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ ಮಾಡುತ್ತಿದ್ದಾರೆ.  ಈ ವೇಳೆ ಬಂಗಾರಪೇಟೆ ನಾರಾಯಣಸ್ವಾಮಿ ಏರು ಧ್ವನಿಯಲ್ಲಿ ಅನುದಾನ ಕೇಳಿದರು. “ಏ ನಾರಾಯಣಸ್ವಾಮಿ ಆಮೇಲೆ ಮಾತಾಡುತ್ತೇನೆ” ಎಂದು ಸಿಎಂ ಹೇಳಿದರು.

ಶಾಸಕ ನಾರಾಯಣಸ್ವಾಮಿ ಅನುದಾನ ಕೇಳುತ್ತಿದ್ದಂತೆ ಶಾಸಕ ವಿಜಯಾನಂದ ಕಾಶಪ್ಪನವರ್ ಕೂಡ ಅನುದಾನಕ್ಕೆ ಬೇಡಿಕೆ ಇಟ್ಟರು. ಆಗ ಸಿಎಂ ಸಿದ್ದರಾಮಯ್ಯ “ಕಾಶಪ್ಪನವರ್ ನೀನಾ… ನಾಮ ಹಾಕಿಕೊಂಡು ಬಂದಿಲ್ಲವಲ್ಲ” ಎಂದರು. ಈ ವೇಳೆ ಕೆಲ ಶಾಸಕರು “ಪರವಾಗಿಲ್ಲ, ಸಿಎಂ ನಾಮ ಹಾಕಿಕೊಂಡು ಬಂದಿಲ್ಲ ಎಂದು ಹೇಳುವ ಮೂಲಕ ನಮಗೆಲ್ಲ ನಾಮ ಹಾಕಿದರು” ಎಂದರು.

“ಕಳೆದ ಬಾರಿ ಘೋಷಣೆ ಮಾಡಿದ್ದ 25 ಕೋಟಿ ಅನುದಾನ ಬಂದಿಲ್ಲ ಎಂದು ಕೆಲ ಶಾಸಕರು ಹೇಳಿದರು. ಕೆಲವರಿಗೆ ಬಂದಿದೆ ಕೆಲವರಿಗೆ ಬಂದಿಲ್ಲ ಸರಿ ಹೋಗುತ್ತೆ. ಎಲ್ಲ ಶಾಸಕರಿಗೆ 10 ಕೋಟಿಯಂತೆ ಸುಮಾರು 2000 ಕೋಟಿ ರೂ. ಅನುದಾನ ನೀಡುತ್ತೇವೆ” ಎಂದು ಹೇಳಿದರು.

“ಮನೆ ಕಟ್ಟಲು ಸರ್ಕಾರ ಕೊಡುತ್ತಿರುವ ಅನುದಾನ ಕಡಿಮೆ ಇದೆ. ಈ ಅನುದಾನ ಹೆಚ್ಚಿಸಿ ಎಂದು ಕುಣಿಗಲ್ ಶಾಸಕ ಡಾ. ರಂಗನಾಥ್ ಮನವಿ ಮಾಡಿದರು. ಸಮಾಜ ಕಲ್ಯಾಣ ಇಲಾಖೆಯಲ್ಲಿ 30 ಸಾವಿರ ಕೋಟಿ ರೂ. ಇದೆ” ಎಂದು ಸಚಿವ ಮಹದೇವಪ್ಪ ಉತ್ತರ ನೀಡಿದರು. “ಎಲ್ಲಿದೆ ಸ್ವಿಸ್ ಬ್ಯಾಂಕ್​​ನಲ್ಲಿರಬೇಕು” ಎಂದು ಮತ್ತೊಬ್ಬ ಸಚಿವರು ಕಿಚಾಯಿಸಿದರು.

ಒಟ್ಟಿನಲ್ಲಿ ಅನುದಾನ ವಿಚಾರದ ಬಗ್ಗೆ ಸರ್ಕಾರವನ್ನು ಪ್ರಶ್ನಿಸಲು ತಯಾರಾಗಿದ್ದ ಶಾಸಕರಿಗೆ ಸಿಎಲ್‌ಪಿ ಸಭೆ ಭಾರೀ ನಿರಾಸೆ ಮೂಡಿಸಿತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:00 am, Wed, 18 December 24

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?