AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಷೇತ್ರ ಅಭಿವೃದ್ಧಿಗೆ 2 ಸಾವಿರ ಕೋಟಿ ರೂ. ಅನುದಾನ: ಸಿಎಂ ಭರವಸೆ

ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕ್ಷೇತ್ರದ ಅಭಿವೃದ್ಧಿಗೆ ಪ್ರತಿ ಶಾಸಕರಿಗೂ 10 ಕೋಟಿ ರೂಪಾಯಿಗಳಂತೆ ಸುಮಾರು 2000 ಕೋಟಿ ರೂಪಾಯಿಗಳ ಅನುದಾನ ನೀಡುವ ಭರವಸೆ ನೀಡಿದರು. ರಸ್ತೆ ಅಭಿವೃದ್ಧಿಗೂ ಹಣ ಮೀಸಲಿಡುವುದಾಗಿ ತಿಳಿಸಿದರು. ಆದರೆ, ಅನುದಾನದ ಬಗ್ಗೆ ಚರ್ಚಿಸಲು ಅವಕಾಶ ನೀಡದಿರುವುದರಿಂದ ಕೆಲವು ಶಾಸಕರು ಅಸಮಾಧಾನ ವ್ಯಕ್ತಪಡಿಸಿದರು.

ಕ್ಷೇತ್ರ ಅಭಿವೃದ್ಧಿಗೆ 2 ಸಾವಿರ ಕೋಟಿ ರೂ. ಅನುದಾನ: ಸಿಎಂ ಭರವಸೆ
ಸಿದ್ದರಾಮಯ್ಯ
ಪ್ರಸನ್ನ ಗಾಂವ್ಕರ್​
| Updated By: ವಿವೇಕ ಬಿರಾದಾರ|

Updated on:Dec 18, 2024 | 9:57 AM

Share

ಬೆಳಗಾವಿ, ಡಿಸೆಂಬರ್​ 18: ಕ್ಷೇತ್ರದ ಅಭಿವೃದ್ಧಿ ಕೆಲಸಗಳಿಗೆ ಹಣ ನೀಡುವಂತೆ ಕೇಳಿದ ಶಾಸಕರಿಗೆ 10 ಕೋಟಿಯಂತೆ ಸುಮಾರು 2000 ಕೋಟಿ ರೂ. ಅನುದಾನ ನೀಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಭರವಸೆ ನೀಡಿದರು. ಮಂಗಳವಾರ (ಡಿಸೆಂಬರ್​ 17) ರಂದು ಬೆಳಗಾವಿ ಖಾಸಗಿ ಹೊಟೇಲ್​ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ (CLP) ಮಾತನಾಡಿದ ಅವರು, ರಸ್ತೆ ಅಭಿವೃದ್ಧಿಗೂ ಹಣ ನೀಡುವುದಾಗಿ ಹೇಳಿದರು.

ಸಭೆಯಲ್ಲಿ ಮಾತನಾಡಲು ಬಿಡದಿದ್ದಕ್ಕೆ ಶಾಸಕರು ಗರಂ

ಸಭೆಯಲ್ಲಿ ಮಾತನಾಡಲು ಅವಕಾಶ ನೀಡದಿದ್ದಕ್ಕೆ ಶಾಸಕರು ಗರಂ ಆಗಿದರು. ಶಾಸಕಾಂಗ ಸಭೆ ಕೇವಲ ಭಾಷಣಕ್ಕೆ ಮಾತ್ರ ಸೀಮಿತವಾಯ್ತು ಅಂತ ಅಸಮಾಧಾನ ಹೊರಹಾಕಿದರು. ಅನುದಾನದ ವಿಚಾರವಾಗಿ ಚರ್ಚಿಸಲು ತಯಾರಾಗಿದ್ದ ಶಾಸಕರಿಗೆ ಭಾರೀ ನಿರಾಸೆಯಾಯಿತು. ಅನುದಾನ ಕೇಳಲು ಎದ್ದು ನಿಂತ ಶಾಸರಿಗೆ ಮುಂದೆ ನೋಡೋಣ ಅಂತ ಹೇಳಿ ಸಿಎಂ, ಡಿಸಿಎಂ ಸುದೀರ್ಘ ಭಾಷಣ ಮಾಡಿ ಶಾಸಕಾಂಗ ಸಭೆ ಅಂತ್ಯ ಮಾಡಿದರು.

ಅಧಿವೇಶನದಲ್ಲಿ ಪ್ರಸ್ತಾಪಿಸಲು ವಕ್ಫ್ ಹಾಗೂ ಪಂಚಮಸಾಲಿ ಮೀಸಲಾತಿ ಬಿಟ್ಟರೆ ಬಿಜೆಪಿಯವರಿಗೆ ಬೇರೇನೂ ವಿಚಾರ ಗೊತ್ತಿಲ್ಲ. ವಕ್ಫ್ ವಿಚಾರದಲ್ಲಿ ಸಚಿವ ಜಮೀರ್ ಅಹ್ಮದ್ ಒಳ್ಳೆಯ ಉತ್ತರ ಕೊಟ್ಟಿದ್ದಾರೆ. ದುಡ್ಡಿಲ್ಲ ದುಡ್ಡಿಲ್ಲ ಅಂತ ಹೇಳಬೇಡಿ, ನಮ್ಮ ಬಳಿ ದುಡ್ಡು ಇದೆ. ಬಿಜೆಪಿಯವರು ಸುಮ್ಮನೆ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ದುಡ್ಡು ಇಲ್ಲದೇ ಇದ್ದಿದ್ದರೇ ರೋಣದಲ್ಲಿ 200 ಕೋಟಿ ರೂ. ಕೆಲಸ ಮಾಡಲು ಆಗುತ್ತಿತ್ತಾ, ಸಚಿವ ಜಿ ಪರಮೇಶ್ವರ್ ಅವರ ಕ್ಷೇತ್ರದಲ್ಲಿ ಕೆಲಸ ಮಾಡಲು ಆಗುತ್ತಿತ್ತಾ ಎಂದರು.

ಇದನ್ನೂ ಓದಿ:  ವಿಜಯೇಂದ್ರ ಸೇರಿ ಮೊದಲ ಬಾರಿ ಆಯ್ಕೆಯಾದ 27 ಶಾಸಕರಿಂದ ಸಿಎಂಗೆ ಪತ್ರ: 100 ಕೋಟಿ ರೂ. ಬಿಡುಗಡೆಗೆ ಮನವಿ

ಬಿಜೆಪಿಯವರು ಅನುದಾನ ಇಲ್ಲ ಎಂದು ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ ಮಾಡುತ್ತಿದ್ದಾರೆ.  ಈ ವೇಳೆ ಬಂಗಾರಪೇಟೆ ನಾರಾಯಣಸ್ವಾಮಿ ಏರು ಧ್ವನಿಯಲ್ಲಿ ಅನುದಾನ ಕೇಳಿದರು. “ಏ ನಾರಾಯಣಸ್ವಾಮಿ ಆಮೇಲೆ ಮಾತಾಡುತ್ತೇನೆ” ಎಂದು ಸಿಎಂ ಹೇಳಿದರು.

ಶಾಸಕ ನಾರಾಯಣಸ್ವಾಮಿ ಅನುದಾನ ಕೇಳುತ್ತಿದ್ದಂತೆ ಶಾಸಕ ವಿಜಯಾನಂದ ಕಾಶಪ್ಪನವರ್ ಕೂಡ ಅನುದಾನಕ್ಕೆ ಬೇಡಿಕೆ ಇಟ್ಟರು. ಆಗ ಸಿಎಂ ಸಿದ್ದರಾಮಯ್ಯ “ಕಾಶಪ್ಪನವರ್ ನೀನಾ… ನಾಮ ಹಾಕಿಕೊಂಡು ಬಂದಿಲ್ಲವಲ್ಲ” ಎಂದರು. ಈ ವೇಳೆ ಕೆಲ ಶಾಸಕರು “ಪರವಾಗಿಲ್ಲ, ಸಿಎಂ ನಾಮ ಹಾಕಿಕೊಂಡು ಬಂದಿಲ್ಲ ಎಂದು ಹೇಳುವ ಮೂಲಕ ನಮಗೆಲ್ಲ ನಾಮ ಹಾಕಿದರು” ಎಂದರು.

“ಕಳೆದ ಬಾರಿ ಘೋಷಣೆ ಮಾಡಿದ್ದ 25 ಕೋಟಿ ಅನುದಾನ ಬಂದಿಲ್ಲ ಎಂದು ಕೆಲ ಶಾಸಕರು ಹೇಳಿದರು. ಕೆಲವರಿಗೆ ಬಂದಿದೆ ಕೆಲವರಿಗೆ ಬಂದಿಲ್ಲ ಸರಿ ಹೋಗುತ್ತೆ. ಎಲ್ಲ ಶಾಸಕರಿಗೆ 10 ಕೋಟಿಯಂತೆ ಸುಮಾರು 2000 ಕೋಟಿ ರೂ. ಅನುದಾನ ನೀಡುತ್ತೇವೆ” ಎಂದು ಹೇಳಿದರು.

“ಮನೆ ಕಟ್ಟಲು ಸರ್ಕಾರ ಕೊಡುತ್ತಿರುವ ಅನುದಾನ ಕಡಿಮೆ ಇದೆ. ಈ ಅನುದಾನ ಹೆಚ್ಚಿಸಿ ಎಂದು ಕುಣಿಗಲ್ ಶಾಸಕ ಡಾ. ರಂಗನಾಥ್ ಮನವಿ ಮಾಡಿದರು. ಸಮಾಜ ಕಲ್ಯಾಣ ಇಲಾಖೆಯಲ್ಲಿ 30 ಸಾವಿರ ಕೋಟಿ ರೂ. ಇದೆ” ಎಂದು ಸಚಿವ ಮಹದೇವಪ್ಪ ಉತ್ತರ ನೀಡಿದರು. “ಎಲ್ಲಿದೆ ಸ್ವಿಸ್ ಬ್ಯಾಂಕ್​​ನಲ್ಲಿರಬೇಕು” ಎಂದು ಮತ್ತೊಬ್ಬ ಸಚಿವರು ಕಿಚಾಯಿಸಿದರು.

ಒಟ್ಟಿನಲ್ಲಿ ಅನುದಾನ ವಿಚಾರದ ಬಗ್ಗೆ ಸರ್ಕಾರವನ್ನು ಪ್ರಶ್ನಿಸಲು ತಯಾರಾಗಿದ್ದ ಶಾಸಕರಿಗೆ ಸಿಎಲ್‌ಪಿ ಸಭೆ ಭಾರೀ ನಿರಾಸೆ ಮೂಡಿಸಿತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:00 am, Wed, 18 December 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ