ಕರ್ನಾಟಕದ 5 ನಗರಗಳಲ್ಲಿ ಸೇಫ್‌ ಸಿಟಿ ಯೋಜನೆ ಜಾರಿಗೆ ಗೃಹ ಸಚಿವ ಅಮಿತ್‌ ಶಾಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಕ್ರವಾರ ರಾತ್ರಿ ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಸೇಫ್ ಸಿಟಿ ಯೋಜನೆ ಸೇರಿದಂತೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕರ್ನಾಟಕಕ್ಕೆ ಸಂಬಂಧಪಟ್ಟ ಹಲವು ಮನವಿಗಳನ್ನು ಕೇಂದ್ರ ಗೃಹ ಸಚಿವರಿಗೆ ಮುಖ್ಯಮಂತ್ರಿಗಳು ಸಲ್ಲಿಕೆ ಮಾಡಿದರು. ಆ ಕುರಿತ ಪೂರ್ಣ ವಿವರ ಇಲ್ಲಿದೆ.

ಕರ್ನಾಟಕದ 5 ನಗರಗಳಲ್ಲಿ ಸೇಫ್‌ ಸಿಟಿ ಯೋಜನೆ ಜಾರಿಗೆ ಗೃಹ ಸಚಿವ ಅಮಿತ್‌ ಶಾಗೆ ಸಿಎಂ ಸಿದ್ದರಾಮಯ್ಯ ಆಗ್ರಹ
ಅಮಿತ್‌ ಶಾ & ಸಿದ್ದರಾಮಯ್ಯImage Credit source: PTI
Follow us
ಹರೀಶ್ ಜಿ.ಆರ್​. ನವದೆಹಲಿ
| Updated By: Ganapathi Sharma

Updated on:Jun 29, 2024 | 9:33 AM

ನವದೆಹಲಿ, ಜೂನ್‌ 29: ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿ ರಾಜ್ಯದ ಪೊಲೀಸ್‌ ಪಡೆಯ ಬಲವರ್ಧನೆಗೆ ಸಂಬಂಧಿಸಿದ ವಿವಿಧ ಪ್ರಸ್ತಾವನೆಗಳ ಮಂಜೂರಾತಿ ಕುರಿತಂತೆ ಗಮನ ಸೆಳೆದರು. ಕರ್ನಾಟಕ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡಲು ಮತ್ತು ಸಾರ್ವಜನಿಕರ ಸುರಕ್ಷತೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರದಿಂದ ಅಗತ್ಯವಿರುವ ನೆರವಿನ ಕುರಿತ ಹಲವು ಪ್ರಸ್ತಾವನೆಗಳಿಗೆ ಅನುಮೋದನೆ ನೀಡುವಂತೆ ಮನವಿ ಮಾಡಿದರು.

ಭಾರತ ಸರ್ಕಾರವು 80 ಕೋಟಿ ರೂ. ವೆಚ್ಚದಲ್ಲಿ ಇಂಡಿಯಾ ರಿವರ್ಸ್ ಬೆಟಾಲಿಯನ್ (India Reserve Battalion) ಸ್ಥಾಪನೆಗೆ ಅನುಮೋದನೆ ನೀಡಿದ್ದು, ಹೆಚ್ಚುವರಿಯಾಗಿ ಬಳ್ಳಾರಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಎರಡು ಬೆಟಾಲಿಯನ್‌ ಸ್ಥಾಪನೆಗೆ ಅನುಮೋದನೆ ನೀಡುವಂತೆ ಕೋರಿದರು.

ಈ ಐದು ನಗರಗಳಲ್ಲಿ ಸೇಫ್‌ ಸಿಟಿ ಯೋಜನೆ

ನಿರ್ಭಯಾ ನಿಧಿಯಡಿಯಲ್ಲಿ ಬೆಂಗಳೂರು ನಗರದಂತೆಯೇ ಮೈಸೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಮಂಗಳೂರು ಹಾಗೂ ಕಲಬುರಗಿ ನಗರಗಳಲ್ಲಿ ಸೇಫ್‌ ಸಿಟಿ ಯೋಜನೆಯನ್ನು ತಲಾ 200 ಕೋಟಿ ರೂ. ಗಳಂತೆ ಒಟ್ಟು 1000 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಕ್ಕೆ ಅನುಮೋದನೆ ನೀಡಬೇಕೆಂದು ಶಾ ಬಳಿ ಸಿದ್ದರಾಮಯ್ಯ ಆಗ್ರಹಿಸಿದರು.

ಹೈಕೋರ್ಟಿನ ಆದೇಶದಂತೆ ಬಂಧಿಸುವ ಅಧಿಕಾರ ಹೊಂದಿರುವ ಸಿಬ್ಬಂದಿಗೆ Body worn camera ಕಡ್ಡಾಯವಾಗಿರುವುದರಿಂದ ರಾಜ್ಯದಲ್ಲಿ ಇನ್ನೂ 175 ಕೋಟಿ ರೂ. ವೆಚ್ಚದಲ್ಲಿ 58,546 ಬಾಡಿ ವೋರ್ನ್ ಕ್ಯಾಮರಾ ಖರೀದಿಸುವ ಅಗತ್ಯವಿದ್ದು, 100 ಕೋಟಿ ರೂ. ನೆರವು ನೀಡುವಂತೆ ಮನವಿ ಸಲ್ಲಿಸಿರು.

ಪ್ರಸಕ್ತ ಸಾಲಿನಲ್ಲಿ ಬಾಡಿಗೆ ಕಟ್ಟದಲ್ಲಿರುವ ಹಾಗೂ ಶಿಥಿಲಾವಸ್ಥೆಯಲ್ಲಿರುವ 100 ಪೊಲೀಸ್‌ ಠಾಣೆಗಳಿಗೆ ಹೊಸ ಕಟ್ಟಡವನ್ನು ತಲಾ 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ 300 ಕೋಟಿ ರೂ. ಅಗತ್ಯವಿದೆ. ಇದಕ್ಕೆ ನೆರವು ಒದಗಿಸುವಂತೆಯೂ ಗೃಹ ಸಚಿವ ಅಮಿತ್‌ ಶಾ ಬಳಿ ಸಿದ್ದರಾಮಯ್ಯ ಕೋರಿದರು.

ಇದನ್ನೂ ಓದಿ: ಬಸನಗೌಡ ಪಾಟೀಲ್​ ಯತ್ನಾಳ್​ ಪತ್ರಕ್ಕೆ ಅಮಿತ್ ಶಾ ಸ್ಪಂದನೆ, ಹಲವರಿಗೆ ಶುರುವಾಯ್ತು ನಡುಕ!

ಪೊಲೀಸ್‌ ಕ್ಯಾಂಟೀನ್‌ ಸೌಲಭ್ಯ ಮಾದರಿಯಲ್ಲಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿಗೂ ಕ್ಯಾಂಟೀನ್‌ ಸ್ಥಾಪನೆಗೆ ಅಗತ್ಯ ಅನುಮತಿಗಳನ್ನು ಒದಗಿಸುವುದು, ಪೊಲೀಸ್‌ ವಸತಿ ಗೃಹಗಳ ನಿರ್ಮಾಣಕ್ಕೆ ನೆರವು, ವಿಧಿವಿಜ್ಞಾನ ಪ್ರಯೋಗಾಲಯಗಳ ಆಧುನೀಕರಣಕ್ಕೆ ನೆರವು ಮತ್ತಿತರ ವಿಷಯಗಳ ಕುರಿತು ಸಹ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯದ ಗೃಹ ಸಚಿವ ಡಾ. ಜಿ. ಪರಮೇಶ್ವರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮೊದಲಾದವರು ಉಪಸ್ಥಿತರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:33 am, Sat, 29 June 24

ಬಿಗ್ ಬಾಸ್​ನಿಂದ 50 ಲಕ್ಷ ಇನ್ನೂ ಬಂದಿಲ್ಲ: ವೇದಿಕೆಯಲ್ಲೇ ಹೇಳಿದ ಹನುಮಂತ
ಬಿಗ್ ಬಾಸ್​ನಿಂದ 50 ಲಕ್ಷ ಇನ್ನೂ ಬಂದಿಲ್ಲ: ವೇದಿಕೆಯಲ್ಲೇ ಹೇಳಿದ ಹನುಮಂತ
ಗುಡ್ಡದ ತುತ್ತ ತುದಿಯಲ್ಲಿ ಕಾಡ್ಗಿಚ್ಚು: ಡ್ರೋನ್​ನಲ್ಲಿ ಕಂಡಿದ್ದು ಹೀಗೆ
ಗುಡ್ಡದ ತುತ್ತ ತುದಿಯಲ್ಲಿ ಕಾಡ್ಗಿಚ್ಚು: ಡ್ರೋನ್​ನಲ್ಲಿ ಕಂಡಿದ್ದು ಹೀಗೆ
ಜಮ್ಮು-ಕಾಶ್ಮೀರದ ಸೋನಾಮಾರ್ಗ್​ ಮಾರುಕಟ್ಟೆಯಲ್ಲಿ ಭೀಕರ ಅಗ್ನಿ ಅವಘಡ
ಜಮ್ಮು-ಕಾಶ್ಮೀರದ ಸೋನಾಮಾರ್ಗ್​ ಮಾರುಕಟ್ಟೆಯಲ್ಲಿ ಭೀಕರ ಅಗ್ನಿ ಅವಘಡ
Weekly Horoscope: ಫೆಬ್ರವರಿ 10 ರಿಂದ 16ರವರೆಗಿನ ವಾರ ಭವಿಷ್ಯ
Weekly Horoscope: ಫೆಬ್ರವರಿ 10 ರಿಂದ 16ರವರೆಗಿನ ವಾರ ಭವಿಷ್ಯ
Daily Devotional: ಗುರು ನೇರ ಸಂಚಾರ ಈ ರಾಶಿಯವರಿಗೆ ಅದೃಷ್ಟ
Daily Devotional: ಗುರು ನೇರ ಸಂಚಾರ ಈ ರಾಶಿಯವರಿಗೆ ಅದೃಷ್ಟ
Daily Horoscope: ಈ ರಾಶಿಯವರಿಗೆ ಆರ್ಥಿಕ ವಿಚಾರದಲ್ಲಿ ಕಲಹ ಸಾಧ್ಯತೆ
Daily Horoscope: ಈ ರಾಶಿಯವರಿಗೆ ಆರ್ಥಿಕ ವಿಚಾರದಲ್ಲಿ ಕಲಹ ಸಾಧ್ಯತೆ
ಸೆಲೆಬ್ರಿಟಿ ಕ್ರಿಕೆಟ್ ಲೀಗ್: ಕಿಚ್ಚ ಸುದೀಪ್ ನಾಯಕತ್ವದ ಪಡೆ ಹೇಗಿದೆ ನೋಡಿ
ಸೆಲೆಬ್ರಿಟಿ ಕ್ರಿಕೆಟ್ ಲೀಗ್: ಕಿಚ್ಚ ಸುದೀಪ್ ನಾಯಕತ್ವದ ಪಡೆ ಹೇಗಿದೆ ನೋಡಿ
ಟಿವಿ9 ಜೊತೆ ಕನ್ನಡದಲ್ಲೇ ಮಾತು ಆರಂಭಿಸಿದ ಚಾಹಲ್; ವಿಡಿಯೋ ನೋಡಿ
ಟಿವಿ9 ಜೊತೆ ಕನ್ನಡದಲ್ಲೇ ಮಾತು ಆರಂಭಿಸಿದ ಚಾಹಲ್; ವಿಡಿಯೋ ನೋಡಿ
ಗೆಳತಿ ರಕ್ಷಿತಾಗೆ ಕೊಟ್ಟ ಮಾತಿನಂತೆ ರಾಣಾ ಆರತಕ್ಷತೆಗೆ ಆಗಮಿಸಿದ ನಟ ದರ್ಶನ್
ಗೆಳತಿ ರಕ್ಷಿತಾಗೆ ಕೊಟ್ಟ ಮಾತಿನಂತೆ ರಾಣಾ ಆರತಕ್ಷತೆಗೆ ಆಗಮಿಸಿದ ನಟ ದರ್ಶನ್
ಕಾಂಗ್ರೆಸ್ ತನ್ನ ಮಿತ್ರಪಕ್ಷಗಳನ್ನು ಒಂದೊಂದಾಗಿ ಮುಗಿಸುತ್ತಿದೆ; ಮೋದಿ ಲೇವಡಿ
ಕಾಂಗ್ರೆಸ್ ತನ್ನ ಮಿತ್ರಪಕ್ಷಗಳನ್ನು ಒಂದೊಂದಾಗಿ ಮುಗಿಸುತ್ತಿದೆ; ಮೋದಿ ಲೇವಡಿ