AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಮಳೆ ಸ್ಥಿತಿಗತಿ ಬಗ್ಗೆ ಮುಖ್ಯಕಾರ್ಯದರ್ಶಿ ಬಳಿ ವರದಿ ಕೇಳಿದ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟದಲ್ಲಾಗುತ್ತಿರುವ ಮಳೆ ಬಗ್ಗೆ ಸರ್ಕಾರದ ಮುಖ್ಯಕಾರ್ಯದರ್ಶಿಯಿಂದ ವರದಿ ಕೇಳಿದ್ದಾರೆ.

ಕರ್ನಾಟಕದಲ್ಲಿ ಮಳೆ ಸ್ಥಿತಿಗತಿ ಬಗ್ಗೆ ಮುಖ್ಯಕಾರ್ಯದರ್ಶಿ ಬಳಿ ವರದಿ ಕೇಳಿದ ಸಿದ್ದರಾಮಯ್ಯ
ರಮೇಶ್ ಬಿ. ಜವಳಗೇರಾ
|

Updated on:Jul 24, 2023 | 2:32 PM

Share

ಬೆಂಗಳೂರು, (ಜುಲೈ 24): ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು (rain), ಹಲವೆಡೆ ಸೇತುವೆ, ಹಳ್ಳ-ಕೊಳ್ಳಗಳು, ಕರೆ-ಕಟ್ಟೆಗಳು ತುಂಬಿ ಹರಿಯುತ್ತಿವೆ. ಅದರಲ್ಲೂ ಮುಖ್ಯವಾಗಿ ಬೆಳಗಾವಿ ಸೇರಿದಂತೆ ಮಲೆನಾಡು, ಕರಾವಳಿ ಭಾಗದಲ್ಲಿ ಜನಜೀವನ ಅಸ್ತವವ್ಯಸ್ತವಾಗಿದೆ. ಇನ್ನು ಈ ಮಳೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಬಳಿ ವರದಿ ಕೇಳಿದ್ದಾರೆ. ಕೆಲವೆಡೆ ಮಳೆಯಾದರೆ ಕೆಲ ಜಿಲ್ಲೆಗಳಲ್ಲಿ ಸರಿಯಾಗಿ ಮಳೆಯಾಗಿಲ್ಲ. ಭಾರಿ ಮಳೆಯಿಂದ ಯಾವ್ಯಾವ ಜಿಲ್ಲೆಗಳಲ್ಲಿ ತೊಂದರೆಯಾಗಿದೆ? ಮಳೆಯಾಗದ ಕ್ಷೇತ್ರಗಳಲ್ಲಿ ಹೇಗಿದೆ ಪರಿಸ್ಥಿತಿ? ಈ ಬಗ್ಗೆ ವರದಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರು ಸಿಎಸ್ ವಂದಿತಾ ಶರ್ಮಾ ಸೂಚಿಸಿದ್ದಾರೆ.

ಇದನ್ನೂ ಓದಿ: Karnataka Breaking Kannada News Live: ಬಾಗಲಕೋಟೆ ಜಿಲ್ಲೆಯ ಶ್ರಮಬಿಂದುಸಾಗರ ಬ್ಯಾರೇಜ್ ಮೇಲೆ ನಿಂತು ಯುವಕರ ಹುಚ್ಚಾಟ

ಒಂದು ಕಡೆ ವಿಪರೀತ ಮಳೆಯಾದ್ರೆ ಇನ್ನೂ ಕೆಲವು ಜಿಲ್ಲೆಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಜಿಲ್ಲೆಗಳಲ್ಲಿ ವಾಸ್ತವಾಂಶದ ಏನಿದೆ? ಮಳೆಯಿಂದ ಎಲ್ಲಿ ಏನು ತೊಂದರೆಯಾಗಿದೆ? ಮಳೆಯಾಗದ ಕ್ಷೇತ್ರಗಳಲ್ಲಿ ಹೇಗಿದೆ ಪರಿಸ್ಥಿತಿ? ಎಷ್ಟು ಪ್ರಮಾಣದಲ್ಲಿ ಬಿತ್ತನೆ ಕಾರ್ಯವಾಗಿದೆ? ಮಳೆಯಾದ ಪ್ರದೇಶ ಮತ್ತು ಮಳೆಯಾಗದ ಪ್ರದೇಶಗಳ ಬಗ್ಗೆ ವರದಿ ಸಂಪೂರ್ಣ ವರದಿ ನಿಡುವಂತೆ ಸೂಚಿಸಿದ್ದಾರೆ.

ನಾಳೆ ಸಿದ್ದರಾಮಯ್ಯ ಹಾವೇರಿ ಜಿಲ್ಲಾ ಪ್ರವಾಸ

ಬೆಂಗಳೂರು: ಸಿದ್ದರಾಮಯ್ಯ ಅವರು ಸಿಎಂ ಆದ ಬಳಿಕ ಮೈಸೂರು ಜಿಲ್ಲೆ ಬಿಟ್ಟರೆ ಇನ್ನುಳಿದ ಜಿಲ್ಲೆಗಳಿಗೆ ಭೇಟಿ ನೀಡಿಲ್ಲ. ಗ್ಯಾರಂಟಿ ಯೋಜನೆಗಳ ಜಾರಿ ಹಾಗೂ ಬಜೆಟ್​ನಲ್ಲಿ ಬ್ಯುಸಿಯಾಗಿದ್ದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಹಾವೇರಿ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಹೌದು…ನಾಳೆ (ಜುಲೈ 25) ಸಿದ್ದರಾಮಯ್ಯ ಅವರು ಹಾವೇರಿಗೆ ಭೇಟಿ ನೀಡಲಿದ್ದು, ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಅಲ್ಲದೇ ಬಸವರಾಜ ಬೊಮ್ಮಾಯಿ ಅವಧಿಯ ಕಾಮಗಾರಿ ಪರಿಶೀಲನೆ ಜೊತೆ ಕೊಟ್ಯಾಂತರ ರೂಪಾಯಿ ವೆಚ್ಚದ ವೈದ್ಯಕೀಯ ಕಾಲೇಜ್ ಕಾಮಗಾರಿ ಸೇರಿದಂತೆ ಜಿಲ್ಲೆಯಲ್ಲಿ ಕೈಗೊಂಡ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಸಭೆ ನಡೆಸಲಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 2:30 pm, Mon, 24 July 23

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ