AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಗನವಾಡಿ ಕಾರ್ಯಕರ್ತೆಯರು, ವಿಕಲಚೇತನರಿಗೆ ಮಹತ್ವದ ಭರವಸೆ ನೀಡಿದ ಸಿಎಂ

ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಮತ್ತು ವಿಕಲ ಚೇತನರ ಸಂಘಟನೆಗಳ ನಿಯೋಗದವರು ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದ್ದಾರೆ. ಹಂತ ಹಂತವಾಗಿ ಬೇಡಿಕೆ ಈಡೇರಿಕೆಯ ಪ್ರಯತ್ನ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರು, ವಿಕಲಚೇತನರಿಗೆ ಮಹತ್ವದ ಭರವಸೆ ನೀಡಿದ ಸಿಎಂ
ಸಿಎಂ ಸಭೆ
Anil Kalkere
| Edited By: |

Updated on: Mar 11, 2024 | 8:10 PM

Share

ಬೆಂಗಳೂರು, ಮಾರ್ಚ್​​ 11: ಅಂಗನವಾಡಿ ಕಾರ್ಯಕರ್ತೆಯರು ಮತ್ತು ವಿಕಲಚೇತನರ ಸಂಘಟನೆಗಳ ನಿಯೋಗದ ಜೊತೆ ಸಿಎಂ ಸಿದ್ದರಾಮಯ್ಯ (Siddaramaiah) ವಿಧಾನಸೌಧದಲ್ಲಿ ಸಭೆ ಮಾಡಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರು-ಸಹಾಯಕಿಯರು, ಆಶಾ ಕಾರ್ಯಕರ್ತೆಯರ, ವಿಕಲ ಚೇತನರ ಬೇಡಿಕೆಗಳಿಗೆ ಸಿಎಂ ಸ್ಪಂದನೆ ಮಾಡಿದ್ದಾರೆ. ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ತಮ್ಮ‌ ಕುಟುಂಬಗಳಿಗೆ, ತಮ್ಮ ಸಮುದಾಯಕ್ಕೆ ಆಗಿರುವ ಅನುಕೂಲಗಳನ್ನು ಕಾರ್ಯಕರ್ತೆಯರು ವಿವರಿಸಿದ್ದಾರೆ. ಹಂತ ಹಂತವಾಗಿ ಬೇಡಿಕೆ ಈಡೇರಿಕೆಯ ಪ್ರಯತ್ನ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಈ ಕುರಿತಾಗಿ ಟ್ವೀಟ್​ ಮಾಡಿರುವ ಸಿಎಂ ಸಿದ್ದರಾಮಯ್ಯ, ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಮತ್ತು ವಿಕಲ ಚೇತನರ ಸಂಘಟನೆಗಳ ನಿಯೋಗದವರು ಅವರನ್ನು ಭೇಟಿಯಾಗಿ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮಾತುಗಳು.

ಸಿಎಂ ಸಿದ್ದರಾಮಯ್ಯ ಟ್ವೀಟ್​​

ತಮ್ಮೆಲ್ಲರ ನ್ಯಾಯಯುತ ಬೇಡಿಕೆಗಳನ್ನು ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಈಡೇರಿಸಲು ಪ್ರಯತ್ನಿಸಲಾಗುವುದು. ಅಂಗನವಾಡಿ ಕಾರ್ಯಕರ್ತೆಯರಿಗೆ ₹11,500, ₹10,000 ಹಾಗೂ ಸಹಾಯಕಿಯರಿಗೆ ₹6,000 ರೂ.ಗಳು ಸದ್ಯ ದೊರಕುತ್ತಿದೆ. ಗೌರವ ಧನವನ್ನು ಹೆಚ್ಚಿಸಬೇಕೆಂಬ ಮನವಿ ಇದೆ. ಕೇಂದ್ರದಿಂದ ಬರಬೇಕಾದ ಅನುದಾನ ಬರುತ್ತಿಲ್ಲವಾದ್ದರಿಂದ ತಕ್ಷಣಕ್ಕೆ ಬೇಡಿಕೆ ಈಡೇರಿಸುವುದು ಕಷ್ಟಸಾಧ್ಯ ಎಂದಿದ್ದಾರೆ.

ಇದನ್ನೂ ಓದಿ: ಮನೆ ಕಟ್ಟುವವರಿಗೆ ‘ನಂಬಿಕೆ ರಕ್ಷೆ’ ವಿತರಣೆ: ಬಿಬಿಎಂಪಿ ಹೊಸ ಆಸ್ತಿ ತೆರಿಗೆ ಪದ್ಧತಿ ಜಾರಿ

ಈಗಾಗಲೇ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಘೋಷಿಸಲಾಗಿದೆ. ಅದೇ ರೀತಿ ಅಂಗನವಾಡಿ ಕೇಂದ್ರಗಳಿಗೆ ಉಚಿತ ವಿದ್ಯುತ್ ನೀಡುವ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಸಹಾಯಧನವನ್ನು 1,000 ರೂ. ಹೆಚ್ಚಿಸುವ ಬಗ್ಗೆ ಮುಂದಿನ ದಿನಗಳಲ್ಲಿ ಸಕಾರಾತ್ಮಕ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಗೃಹಲಕ್ಷ್ಮೀ ಯೋಜನೆಯಡಿ 2,000 ರೂ.ಗಳನ್ನು ಮನೆ ಯಜಮಾನಿಯಾಗಿರುವ ಅಂಗನವಾಡಿ ಕಾರ್ಯಕರ್ತೆಯರಿಗೂ ಒದಗಿಸಲಾಗುತ್ತಿದೆ. ಶೇ.60 ಅಂಗನವಾಡಿಯಲ್ಲಿ‌ ಕೆಲಸ ಮಾಡುವ ಮಹಿಳೆಯರಿಗೆ ಗೃಹ ಲಕ್ಷ್ಮೀ ಯೋಜನೆಯಡಿ ಹಣ ದೊರೆಯುತ್ತಿದೆ.

ಇದನ್ನೂ ಓದಿ: ಚುನಾವಣೆಯಲ್ಲಿ ನನ್ನ ಸ್ಪರ್ಧೆ ನಿಶ್ಚಿತ ಎಂದ ಶೋಭಾ; ಎರಡೂ ಬಾರಿ ಗೆಲ್ಲಿಸಿದ್ದು ಮೋದಿ ಮುಖ ನೋಡಿ ಎಂದ ಸಿಟಿ ರವಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ಅವರೊಂದಿಗೆ ಸುಮಾರು 20ಕ್ಕೂ ಹೆಚ್ಚು ವಿವಿಧ ಸಂಘಟನೆಗಳ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
Anil Kalkere
Anil Kalkere
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ