AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರೀಡಾಪಟುಗಳಿಗೆ ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್ ಸಿಹಿಸುದ್ದಿ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ಮಿನಿ ಒಲಿಂಪಿಕ್ಸ್​ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಸಿಎಂ, ರಾಜ್ಯಮಟ್ಟದ ಕ್ರೀಡಾಪಟುಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ.

ಕ್ರೀಡಾಪಟುಗಳಿಗೆ ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್ ಸಿಹಿಸುದ್ದಿ ನೀಡಿದ ಸಿಎಂ ಸಿದ್ದರಾಮಯ್ಯ
Vinayak Hanamant Gurav
| Edited By: |

Updated on: Nov 14, 2024 | 6:53 PM

Share

ಬೆಂಗಳೂರು, (ನವೆಂಬರ್ 14): ರಾಜ್ಯಮಟ್ಟದ ಕ್ರೀಡಾಪಟುಗಳಿಗೆ ಗ್ರೇಸ್ ಮಾರ್ಕ್ಸ್ ನೀಡಲು ಚಿಂತನೆ ಮಾಡುತ್ತೇವೆ. ಶೀಘ್ರವೇ ಪರಿಶೀಲಿಸಿ ಕ್ರೀಡಾಪಟುಗಳಿಗೆ ಗ್ರೇಸ್ ಮಾರ್ಕ್ಸ್ ನೀಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಿಸಿದ್ದಾರೆ. ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಮಿನಿ ಒಲಿಂಪಿಕ್ಸ್​ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಸಿಎಂ. ರಾಜ್ಯಮಟ್ಟದ ಕ್ರೀಡಾಪಟುಗಳಿಗೆ ವಾರ್ಷಿಕ ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್ ನೀಡಲು ಚಿಂತನೆ ನಡೆದಿದೆ. ಶೀಘ್ರವೇ ಇದರ ಬಗ್ಗೆ ಪರಿಶೀಲಿಸಿ ಪ್ರಕಟಿಸುತ್ತೇವೆ ಎಂದು ತಿಳಿಸಿದರು.

ಕ್ರೀಡಾಪಟುಗಳಿಗೆ ಪೊಲೀಸ್ ಇಲಾಖೆಯಲ್ಲಿ 3% ಮೀಸಲಾತಿ ಇದೆ. ಇತರೆ ಇಲಾಖೆಯಲ್ಲಿ 2% ಮೀಸಲಾತಿ ಇದೆ. ರಾಜ್ಯದ ಕ್ರೀಡಾಪಟುಗಳು ಕಾಮನ್​ವೆಲ್ತ್​, ಒಲಿಂಪಿಕ್ಸ್​ನಲ್ಲಿ ಭಾಗವಹಿಸಿ. ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದ ರಾಜ್ಯದ ಕೀಡಾಪಟುಗಳಿಗೆ ಬಹುಮಾನ ನೀಡಲಾಗುತ್ತೆ. ಚಿನ್ನ ಗೆದ್ರೆ 5 ಕೋಟಿ, ಬೆಳ್ಳಿ ಗೆದ್ರೆ 3 ಕೋಟಿ ಬಹುಮಾನ ನೀಡುತ್ತೇವೆ ಎಂದರು.

ಮಿನಿ ಒಲಿಂಪಿಕ್ ಕ್ರೀಡಾಕೂಟ ಇಂದಿನಿಂದ ಪ್ರಾರಂಭ ಆಗ್ತಿದೆ. ಈ‌ ಕ್ರೀಡಾಕೂಟ ಕ್ರೀಡಾ ಇಲಾಖೆಯ ವತಿಯಿಂದ ಏರ್ಪಾಡು ಮಾಡಲಾಗಿದೆ. ಈ ಕ್ರೀಡಾಕೂಟ ವನ್ನ ಅತ್ಯಂತ ಸಂತೋಷ ದಿಂದ‌ ಉದ್ಘಾಟನೆ ಮಾಡಿದ್ದೇನೆ. ರಾಜ್ಯದ ಮೂಲೆ‌ಮೂಲೆ ಗಳಿಂದ‌ ಭಾಗವಹಿಸಿದ್ದಾರೆ. ಸುಮಾರು‌ ಐದು ಸಾವಿರಕ್ಕೂ ಹೆಚ್ಚು ಜನ ಭಾಗವಹಿಸುತ್ತಿದ್ದಾರೆ. ನಿಮ್ಮೆಲ್ಲರಿಗೂ ಶುಭಾಶಯ ಹೇಳುತ್ತೇನೆ. ಕ್ರೀಡಾಂಗಣದಲ್ಲಿ ಭಾಗಿಯಾದ ಎಲ್ಲರೂ ಗೆಲ್ಲೋದಕ್ಕೆ ಸಾಧ್ಯವಿಲ್ಲ. ಆದ್ರೆ ಕ್ರೀಡಾಕೂಟದಲ್ಲಿ ಭಾಗಿಯಾಗೋದು ಮುಖ್ಯ ಎಂದು ಹೇಳಿದರು.

ಮುಂದಿನ ಭರವಸೆಗಳನ್ನು ನಾನು ಇಲ್ಲಿ ನೋಡುತ್ತಿದ್ದೇನೆ . ಒಲಿಂಪಿಕ್ಸ್ ನಲ್ಲಿ ಚಿನ್ನ ಗೆದ್ರೆ ಐದು ಕೋಟಿ, ಬೆಳ್ಳಿ ಗೆದ್ರೆ ಮೂರು ಕೋಟಿ ಕೊಡ್ತಿದ್ದೇವೆ. ನೀವು ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗಿಯಾಗುವಷ್ಟರ ಮಟ್ಟಿಗೆ ಬೆಳೆಯಬೇಕು. ಕಾಮನ್ ವೆಲ್ತ್, ಏಷಿಯನ್ ಗೇಮ್ಸ್, ಒಲಿಂಪಿಕ್ಸ್ ನಂತಹ ದೊಡ್ಡ ದೊಡ್ಡ ವೇದಿಕೆಗೆ ಹೋಗಬೇಕು. ಜೊತೆಗೆ ಭಾರತವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಧಿಸಿದರೆ ಸರ್ಕಾರ ಕೆಲಸ ಕೂಡ ಕೊಡುತ್ತಿದ್ದೇವೆ. ಪೊಲೀಸ್ ಇಲಾಖೆಯಲ್ಲಿ 3% ಮೀಸಲಾತಿ ಇದೆ, ಇತರೆ ಇಲಾಖೆಯಲ್ಲಿ 2% ಮೀಸಲಾತಿ ಇದೆ. ಇದರೆಲ್ಲವುದರ ಸದುಪಯೋಗೆ ಯುವಕ, ಯುವತಿಯರು ಪಡೆದುಕೊಳ್ಳಬೇಕೆಂದು ಸಿಎಂ ಸಿದ್ದರಾಮಯ್ಯ ಕಿವಿ ಮಾತು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Vinayak Hanamant Gurav
Vinayak Hanamant Gurav
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ