AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರೀಡಾಪಟುಗಳಿಗೆ ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್ ಸಿಹಿಸುದ್ದಿ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ಮಿನಿ ಒಲಿಂಪಿಕ್ಸ್​ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಸಿಎಂ, ರಾಜ್ಯಮಟ್ಟದ ಕ್ರೀಡಾಪಟುಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ.

ಕ್ರೀಡಾಪಟುಗಳಿಗೆ ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್ ಸಿಹಿಸುದ್ದಿ ನೀಡಿದ ಸಿಎಂ ಸಿದ್ದರಾಮಯ್ಯ
Vinayak Hanamant Gurav
| Edited By: |

Updated on: Nov 14, 2024 | 6:53 PM

Share

ಬೆಂಗಳೂರು, (ನವೆಂಬರ್ 14): ರಾಜ್ಯಮಟ್ಟದ ಕ್ರೀಡಾಪಟುಗಳಿಗೆ ಗ್ರೇಸ್ ಮಾರ್ಕ್ಸ್ ನೀಡಲು ಚಿಂತನೆ ಮಾಡುತ್ತೇವೆ. ಶೀಘ್ರವೇ ಪರಿಶೀಲಿಸಿ ಕ್ರೀಡಾಪಟುಗಳಿಗೆ ಗ್ರೇಸ್ ಮಾರ್ಕ್ಸ್ ನೀಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಿಸಿದ್ದಾರೆ. ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಮಿನಿ ಒಲಿಂಪಿಕ್ಸ್​ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಸಿಎಂ. ರಾಜ್ಯಮಟ್ಟದ ಕ್ರೀಡಾಪಟುಗಳಿಗೆ ವಾರ್ಷಿಕ ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್ ನೀಡಲು ಚಿಂತನೆ ನಡೆದಿದೆ. ಶೀಘ್ರವೇ ಇದರ ಬಗ್ಗೆ ಪರಿಶೀಲಿಸಿ ಪ್ರಕಟಿಸುತ್ತೇವೆ ಎಂದು ತಿಳಿಸಿದರು.

ಕ್ರೀಡಾಪಟುಗಳಿಗೆ ಪೊಲೀಸ್ ಇಲಾಖೆಯಲ್ಲಿ 3% ಮೀಸಲಾತಿ ಇದೆ. ಇತರೆ ಇಲಾಖೆಯಲ್ಲಿ 2% ಮೀಸಲಾತಿ ಇದೆ. ರಾಜ್ಯದ ಕ್ರೀಡಾಪಟುಗಳು ಕಾಮನ್​ವೆಲ್ತ್​, ಒಲಿಂಪಿಕ್ಸ್​ನಲ್ಲಿ ಭಾಗವಹಿಸಿ. ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದ ರಾಜ್ಯದ ಕೀಡಾಪಟುಗಳಿಗೆ ಬಹುಮಾನ ನೀಡಲಾಗುತ್ತೆ. ಚಿನ್ನ ಗೆದ್ರೆ 5 ಕೋಟಿ, ಬೆಳ್ಳಿ ಗೆದ್ರೆ 3 ಕೋಟಿ ಬಹುಮಾನ ನೀಡುತ್ತೇವೆ ಎಂದರು.

ಮಿನಿ ಒಲಿಂಪಿಕ್ ಕ್ರೀಡಾಕೂಟ ಇಂದಿನಿಂದ ಪ್ರಾರಂಭ ಆಗ್ತಿದೆ. ಈ‌ ಕ್ರೀಡಾಕೂಟ ಕ್ರೀಡಾ ಇಲಾಖೆಯ ವತಿಯಿಂದ ಏರ್ಪಾಡು ಮಾಡಲಾಗಿದೆ. ಈ ಕ್ರೀಡಾಕೂಟ ವನ್ನ ಅತ್ಯಂತ ಸಂತೋಷ ದಿಂದ‌ ಉದ್ಘಾಟನೆ ಮಾಡಿದ್ದೇನೆ. ರಾಜ್ಯದ ಮೂಲೆ‌ಮೂಲೆ ಗಳಿಂದ‌ ಭಾಗವಹಿಸಿದ್ದಾರೆ. ಸುಮಾರು‌ ಐದು ಸಾವಿರಕ್ಕೂ ಹೆಚ್ಚು ಜನ ಭಾಗವಹಿಸುತ್ತಿದ್ದಾರೆ. ನಿಮ್ಮೆಲ್ಲರಿಗೂ ಶುಭಾಶಯ ಹೇಳುತ್ತೇನೆ. ಕ್ರೀಡಾಂಗಣದಲ್ಲಿ ಭಾಗಿಯಾದ ಎಲ್ಲರೂ ಗೆಲ್ಲೋದಕ್ಕೆ ಸಾಧ್ಯವಿಲ್ಲ. ಆದ್ರೆ ಕ್ರೀಡಾಕೂಟದಲ್ಲಿ ಭಾಗಿಯಾಗೋದು ಮುಖ್ಯ ಎಂದು ಹೇಳಿದರು.

ಮುಂದಿನ ಭರವಸೆಗಳನ್ನು ನಾನು ಇಲ್ಲಿ ನೋಡುತ್ತಿದ್ದೇನೆ . ಒಲಿಂಪಿಕ್ಸ್ ನಲ್ಲಿ ಚಿನ್ನ ಗೆದ್ರೆ ಐದು ಕೋಟಿ, ಬೆಳ್ಳಿ ಗೆದ್ರೆ ಮೂರು ಕೋಟಿ ಕೊಡ್ತಿದ್ದೇವೆ. ನೀವು ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗಿಯಾಗುವಷ್ಟರ ಮಟ್ಟಿಗೆ ಬೆಳೆಯಬೇಕು. ಕಾಮನ್ ವೆಲ್ತ್, ಏಷಿಯನ್ ಗೇಮ್ಸ್, ಒಲಿಂಪಿಕ್ಸ್ ನಂತಹ ದೊಡ್ಡ ದೊಡ್ಡ ವೇದಿಕೆಗೆ ಹೋಗಬೇಕು. ಜೊತೆಗೆ ಭಾರತವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಧಿಸಿದರೆ ಸರ್ಕಾರ ಕೆಲಸ ಕೂಡ ಕೊಡುತ್ತಿದ್ದೇವೆ. ಪೊಲೀಸ್ ಇಲಾಖೆಯಲ್ಲಿ 3% ಮೀಸಲಾತಿ ಇದೆ, ಇತರೆ ಇಲಾಖೆಯಲ್ಲಿ 2% ಮೀಸಲಾತಿ ಇದೆ. ಇದರೆಲ್ಲವುದರ ಸದುಪಯೋಗೆ ಯುವಕ, ಯುವತಿಯರು ಪಡೆದುಕೊಳ್ಳಬೇಕೆಂದು ಸಿಎಂ ಸಿದ್ದರಾಮಯ್ಯ ಕಿವಿ ಮಾತು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ