AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರೀಡಾಪಟುಗಳಿಗೆ ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್ ಸಿಹಿಸುದ್ದಿ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ಮಿನಿ ಒಲಿಂಪಿಕ್ಸ್​ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಸಿಎಂ, ರಾಜ್ಯಮಟ್ಟದ ಕ್ರೀಡಾಪಟುಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ.

ಕ್ರೀಡಾಪಟುಗಳಿಗೆ ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್ ಸಿಹಿಸುದ್ದಿ ನೀಡಿದ ಸಿಎಂ ಸಿದ್ದರಾಮಯ್ಯ
Vinayak Hanamant Gurav
| Edited By: |

Updated on: Nov 14, 2024 | 6:53 PM

Share

ಬೆಂಗಳೂರು, (ನವೆಂಬರ್ 14): ರಾಜ್ಯಮಟ್ಟದ ಕ್ರೀಡಾಪಟುಗಳಿಗೆ ಗ್ರೇಸ್ ಮಾರ್ಕ್ಸ್ ನೀಡಲು ಚಿಂತನೆ ಮಾಡುತ್ತೇವೆ. ಶೀಘ್ರವೇ ಪರಿಶೀಲಿಸಿ ಕ್ರೀಡಾಪಟುಗಳಿಗೆ ಗ್ರೇಸ್ ಮಾರ್ಕ್ಸ್ ನೀಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಿಸಿದ್ದಾರೆ. ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಮಿನಿ ಒಲಿಂಪಿಕ್ಸ್​ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಸಿಎಂ. ರಾಜ್ಯಮಟ್ಟದ ಕ್ರೀಡಾಪಟುಗಳಿಗೆ ವಾರ್ಷಿಕ ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್ ನೀಡಲು ಚಿಂತನೆ ನಡೆದಿದೆ. ಶೀಘ್ರವೇ ಇದರ ಬಗ್ಗೆ ಪರಿಶೀಲಿಸಿ ಪ್ರಕಟಿಸುತ್ತೇವೆ ಎಂದು ತಿಳಿಸಿದರು.

ಕ್ರೀಡಾಪಟುಗಳಿಗೆ ಪೊಲೀಸ್ ಇಲಾಖೆಯಲ್ಲಿ 3% ಮೀಸಲಾತಿ ಇದೆ. ಇತರೆ ಇಲಾಖೆಯಲ್ಲಿ 2% ಮೀಸಲಾತಿ ಇದೆ. ರಾಜ್ಯದ ಕ್ರೀಡಾಪಟುಗಳು ಕಾಮನ್​ವೆಲ್ತ್​, ಒಲಿಂಪಿಕ್ಸ್​ನಲ್ಲಿ ಭಾಗವಹಿಸಿ. ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದ ರಾಜ್ಯದ ಕೀಡಾಪಟುಗಳಿಗೆ ಬಹುಮಾನ ನೀಡಲಾಗುತ್ತೆ. ಚಿನ್ನ ಗೆದ್ರೆ 5 ಕೋಟಿ, ಬೆಳ್ಳಿ ಗೆದ್ರೆ 3 ಕೋಟಿ ಬಹುಮಾನ ನೀಡುತ್ತೇವೆ ಎಂದರು.

ಮಿನಿ ಒಲಿಂಪಿಕ್ ಕ್ರೀಡಾಕೂಟ ಇಂದಿನಿಂದ ಪ್ರಾರಂಭ ಆಗ್ತಿದೆ. ಈ‌ ಕ್ರೀಡಾಕೂಟ ಕ್ರೀಡಾ ಇಲಾಖೆಯ ವತಿಯಿಂದ ಏರ್ಪಾಡು ಮಾಡಲಾಗಿದೆ. ಈ ಕ್ರೀಡಾಕೂಟ ವನ್ನ ಅತ್ಯಂತ ಸಂತೋಷ ದಿಂದ‌ ಉದ್ಘಾಟನೆ ಮಾಡಿದ್ದೇನೆ. ರಾಜ್ಯದ ಮೂಲೆ‌ಮೂಲೆ ಗಳಿಂದ‌ ಭಾಗವಹಿಸಿದ್ದಾರೆ. ಸುಮಾರು‌ ಐದು ಸಾವಿರಕ್ಕೂ ಹೆಚ್ಚು ಜನ ಭಾಗವಹಿಸುತ್ತಿದ್ದಾರೆ. ನಿಮ್ಮೆಲ್ಲರಿಗೂ ಶುಭಾಶಯ ಹೇಳುತ್ತೇನೆ. ಕ್ರೀಡಾಂಗಣದಲ್ಲಿ ಭಾಗಿಯಾದ ಎಲ್ಲರೂ ಗೆಲ್ಲೋದಕ್ಕೆ ಸಾಧ್ಯವಿಲ್ಲ. ಆದ್ರೆ ಕ್ರೀಡಾಕೂಟದಲ್ಲಿ ಭಾಗಿಯಾಗೋದು ಮುಖ್ಯ ಎಂದು ಹೇಳಿದರು.

ಮುಂದಿನ ಭರವಸೆಗಳನ್ನು ನಾನು ಇಲ್ಲಿ ನೋಡುತ್ತಿದ್ದೇನೆ . ಒಲಿಂಪಿಕ್ಸ್ ನಲ್ಲಿ ಚಿನ್ನ ಗೆದ್ರೆ ಐದು ಕೋಟಿ, ಬೆಳ್ಳಿ ಗೆದ್ರೆ ಮೂರು ಕೋಟಿ ಕೊಡ್ತಿದ್ದೇವೆ. ನೀವು ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗಿಯಾಗುವಷ್ಟರ ಮಟ್ಟಿಗೆ ಬೆಳೆಯಬೇಕು. ಕಾಮನ್ ವೆಲ್ತ್, ಏಷಿಯನ್ ಗೇಮ್ಸ್, ಒಲಿಂಪಿಕ್ಸ್ ನಂತಹ ದೊಡ್ಡ ದೊಡ್ಡ ವೇದಿಕೆಗೆ ಹೋಗಬೇಕು. ಜೊತೆಗೆ ಭಾರತವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಧಿಸಿದರೆ ಸರ್ಕಾರ ಕೆಲಸ ಕೂಡ ಕೊಡುತ್ತಿದ್ದೇವೆ. ಪೊಲೀಸ್ ಇಲಾಖೆಯಲ್ಲಿ 3% ಮೀಸಲಾತಿ ಇದೆ, ಇತರೆ ಇಲಾಖೆಯಲ್ಲಿ 2% ಮೀಸಲಾತಿ ಇದೆ. ಇದರೆಲ್ಲವುದರ ಸದುಪಯೋಗೆ ಯುವಕ, ಯುವತಿಯರು ಪಡೆದುಕೊಳ್ಳಬೇಕೆಂದು ಸಿಎಂ ಸಿದ್ದರಾಮಯ್ಯ ಕಿವಿ ಮಾತು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು