AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಾದ್ಯಂತ ಡೆಂಗ್ಯೂ ಉಲ್ಬಣ: ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಡೆಂಗ್ಯೂ ಕ್ಷಿಪ್ರಗತಿಯಲ್ಲಿ ವ್ಯಾಪಿಸುತ್ತಿರುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾತನಾಡಿ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ರಾಜ್ಯಾದ್ಯಂತ ಡೆಂಗ್ಯೂ ಉಲ್ಬಣ: ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಸಿಎಂ ಸಿದ್ದರಾಮಯ್ಯ
Anil Kalkere
| Edited By: ವಿವೇಕ ಬಿರಾದಾರ|

Updated on: Sep 11, 2023 | 11:04 AM

Share

ಬೆಂಗಳೂರು: ರಾಜ್ಯಾದ್ಯಂತ ಡೆಂಗ್ಯೂ (Dengue) ರೋಗ ಪ್ರಕರಣ ಹೆಚ್ಚಳವಾದ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಆರೋಗ್ಯ ಇಲಾಖೆಗೆ ಸೂಚಿಸಿದ್ದಾರೆ. ರಾಜ್ಯಾದ್ಯಂತ ಕಳೆದ ಕೆಲವು ದಿನಗಳ ಅವಧಿಯಲ್ಲಿ ಸುಮಾರು ಏಳು ಸಾವಿರಕ್ಕೂ ಅಧಿಕ ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ ನಾಲ್ಕು ಸಾವಿರಕ್ಕೂ ಅಧಿಕ ಪ್ರಕರಣಗಳು ಬೆಂಗಳೂರು ನಗರವೊಂದರಲ್ಲೇ ಕಂಡುಬಂದಿದೆ. ಡೆಂಗ್ಯೂ ಕ್ಷಿಪ್ರಗತಿಯಲ್ಲಿ ವ್ಯಾಪಿಸುತ್ತಿರುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾತನಾಡಿ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸೊಳ್ಳೆ ನಿಯಂತ್ರಣಕ್ಕೆ ಔಷಧ ಸಿಂಪಡಣೆ, ನೀರು ಶೇಖರಣೆಯಾಗುವ ಸ್ಥಳಗಳನ್ನು ಗುರುತಿಸಿ ಸ್ವಚ್ಚಗೊಳಿಸುವುದು ಸೇರಿದಂತೆ ಸೊಳ್ಳೆ ನಿಯಂತ್ರಣಕ್ಕೆ ಪರಿಣಾಮಕಾರಿ ಮಾರ್ಗಗಳನ್ನು ಅನುಸರಿಸಲಾಗುತ್ತಿದೆ. ಮನೆ ಸುತ್ತಮುತ್ತಲಿನ ಪರಿಸರದ ಸ್ವಚ್ಚತೆಗೆ ಆದ್ಯತೆ ನೀಡಿ. ಸೊಳ್ಳೆ ಕಡಿತದ ಬಗ್ಗೆ ಎಚ್ಚರಿಕೆ ವಹಿಸಿ. ಡೆಂಗ್ಯೂ ಬಗ್ಗೆ ಭಯ ಬೇಡ, ಜಾಗೃತೆಯಿರಲಿ ಎಂದರು.

ಡೆಂಗ್ಯೂ ರೋಗಕ್ಕೆ 7 ಜನ ಸಾವು

ಡೆಂಗ್ಯೂ ರೋಗದಿಂದ ಕಳೆದ ಮೂರು ತಿಂಗಳಲ್ಲಿ ನಗರದಲ್ಲಿ ಏಳು ಜನ ಮೃತಪಟ್ಟಿದ್ದರು. ಕಳೆದ ಮೂರು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಸಾವು ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದರು. ಕಳೆದ ಒಂದು ತಿಂಗಳಿನಿಂದ ನಗರದಲ್ಲಿ ಡೆಂಗ್ಯೂ ರೋಗ ಆತಂಕಕಾರಿಯಾಗಿ ಏರಿಕೆ ಕಂಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಅಧಿಕಾರಿಗಳ ಪ್ರಕಾರ, ನಗರದಲ್ಲಿ ಈ ವರ್ಷ ಸೆ.08ರವರೆಗೆ 5,000 ಡೆಂಗ್ಯೂ ರೋಗ ಪ್ರಕರಣಗಳು ವರದಿಯಾಗಿದ್ದವು. ಆಗಸ್ಟ್‌ನಲ್ಲಿ 2,374 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದವು.

ಇದನ್ನೂ ಓದಿ: ಡೆಂಗ್ಯೂ ಪ್ರಕರಣ ಹೆಚ್ಚಾದರು ಅಧಿಕಾರಿಗಳ ನಿರ್ಲಕ್ಷ್ಯ: ಬೆಂಗಳೂರಿನ ಪ್ರತಿಷ್ಠಿತ ಏರಿಯಾ ಜನರ ಗೋಳು ಕೇಳೋರಿಲ್ಲ

ಡೆಂಗ್ಯೂ ಪ್ರಕರಣಗಳ ನಿಯಂತ್ರಣ ಕುರಿತು ಬಿಬಿಪಿಎಂ ಅಧಿಕಾರಿಗಳ ಜೊತೆ ಸೆ.7 ರಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಸಭೆ ನಡೆಸಿ ಸೆಪ್ಟೆಂಬರ್​​ನಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಈ ವೇಳೆ ಡೆಂಗ್ಯೂ ರೋಗ ಉಲ್ಬಣಗೊಳ್ಳದಂತೆ ನೋಡಿಕೊಳ್ಳಿ ಎಂದು ಸೂಚನೆ ನೀಡಿದ್ದರು.

ಡೆಂಗ್ಯೂ ಮುಖ್ಯವಾಗಿ ಮಳೆಗೆ ಸಂಬಂಧಿಸಿದೆ. ಮಳೆ ಹೆಚ್ಚಾದಾಗ ಪ್ರಕರಣಗಳು ಹೆಚ್ಚಾಗುತ್ತವೆ. 2022ರ ಸೆಪ್ಟೆಂಬರ್, ಅಕ್ಟೋಬರ್ ಮತ್ತು ನವೆಂಬರ್‌ ತಿಂಗಳಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗಿದ್ದವು. ಈ ವರ್ಷ ಜುಲೈ ಮತ್ತು ಆಗಸ್ಟ್‌ ತಿಂಗಳಿನಲ್ಲೇ ಹೆಚ್ಚು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಸೂಕ್ತ ಮುಂಜಾಗ್ರತಾ ಕ್ರಮ ಹಾಗೂ ಟೆಸ್ಟಿಂಗ್ ಸ್ಯಾಂಪಲ್ಸ್ ಹೆಚ್ಚಿಸುವಂತೆ ಸೂಚಿಸಿದ್ದರು.

ಹೆಚ್ಚಾಗಿ ಮಡಕೆಗಳು, ಮೀನಿನ ತೊಟ್ಟಿಗಳು, ಅಂಗಳದಲ್ಲಿ ನಿಂತ ನೀರು ಮತ್ತು ಉದ್ಯಾನವನದ ಕೊಳಗಳಲ್ಲಿ ಡೆಂಗ್ಯೋ ಸೊಳ್ಳೆ ವಾಸಿಸುತ್ತವೆ. ಈ ಹಿಂದೆ ಮಹದೇವಪುರ, ಬೊಮ್ಮನಹಳ್ಳಿ ಮತ್ತು ಪೂರ್ವ ವಲಯದ ಪ್ರದೇಶಗಳು ಡೆಂಗ್ಯೂ ಹಾಟ್‌ಸ್ಪಾಟ್‌ಗಳಾಗಿದ್ದವು. ಆದರೆ ಈ ವರ್ಷ ದಕ್ಷಿಣ ವಲಯದಲ್ಲಿ ಹೆಚ್ಚು ಸಂಖ್ಯೆಯ ಪ್ರಕರಣಗಳು ವರದಿಯಾಗಿದ್ದು, ಬೆಚ್ಚಿಬೀಳಿಸಿದೆ.

ಆರೋಗ್ಯ ಕಾರ್ಯಕರ್ತರ ಕೊರತೆ

ಬೆಂಗಳೂರಿನಾದ್ಯಂತ ಆರೋಗ್ಯ ಕಾರ್ಯಕರ್ತರ ಕೊರತೆ ಇದೆ. 1.3 ಕೋಟಿ ಜನಸಂಖ್ಯೆಯ ನಗರಕ್ಕೆ, ಕೇವಲ 1,000 ಆಶಾ ಕಾರ್ಯಕರ್ತೆಯರು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಹೆಚ್ಚಿನ ಆಶಾ ಕಾರ್ಯಕರ್ತೆಯರನ್ನು ನೇಮಿಸುವಂತೆ ನಾವು ಸರ್ಕಾರಕ್ಕೆ ಪತ್ರ ಬರೆದಿದ್ದೇವೆ ಎಂದು ಬಿಬಿಎಂಪಿ ಅಧಿಕಾರಿ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Anil Kalkere
Anil Kalkere
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ