AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ವರ್ಷ 4 ಲಕ್ಷ 25 ಸಾವಿರ ಕೋಟಿ ರೂ ಮೊತ್ತದ ಬಜೆಟ್ ಮಂಡಿಸುವೆ: ಸಿಎಂ ಸಿದ್ದರಾಮಯ್ಯ

600 ಕೋಟಿ ರೂ. ವೆಚ್ಚದಲ್ಲಿ ಹೊಸಕೋಟೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ, ಶಿಲಾನ್ಯಾಸ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ ಚಾಲನೆ ನೀಡಿದ್ದಾರೆ. ಚನ್ನಭೈರೇಗೌಡ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಮಾಡಲಾಗಿದೆ. ಸಚಿವರಾದ ಜಾರ್ಜ್, ಮುನಿಯಪ್ಪ, ಶಾಸಕ ಶರತ್ ಬಚ್ಚೇಗೌಡ ಉಪಸ್ಥಿತರಿದ್ದರು.

ಮುಂದಿನ ವರ್ಷ 4 ಲಕ್ಷ 25 ಸಾವಿರ ಕೋಟಿ ರೂ ಮೊತ್ತದ ಬಜೆಟ್ ಮಂಡಿಸುವೆ: ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
ನವೀನ್ ಕುಮಾರ್ ಟಿ
| Edited By: |

Updated on:Mar 10, 2024 | 7:05 PM

Share

ದೇವನಹಳ್ಳಿ, ಮಾರ್ಚ್​​ 10: 600 ಕೋಟಿ ರೂ. ವೆಚ್ಚದಲ್ಲಿ ಹೊಸಕೋಟೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ, ಶಿಲಾನ್ಯಾಸ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ (Siddaramaiah) ಮತ್ತು ಡಿಸಿಎಂ ಡಿಕೆ ಶಿವಕುಮಾರ್​ ಚಾಲನೆ ನೀಡಿದ್ದಾರೆ. ಚನ್ನಭೈರೇಗೌಡ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯಗೆ ಶರತ್ ಬಚ್ಚೇಗೌಡ ಬೆಳ್ಳಿ ಕಿರೀಟ ಹಾಕಿ ಸನ್ಮಾನಿಸಿದರು. ಡಿಸಿಎಂ ಡಿ.ಕೆ.ಶಿವಕುಮಾರ್​ಗೂ ಬೆಳ್ಳಿ ಕಿರೀಟ್ ಗಿಫ್ಟ್ ನೀಡಿದ್ದಾರೆ. ಸಚಿವರಾದ ಜಾರ್ಜ್, ಮುನಿಯಪ್ಪ, ಶಾಸಕ ಶರತ್ ಬಚ್ಚೇಗೌಡ ಉಪಸ್ಥಿತರಿದ್ದರು.

ಬಿಜೆಪಿಯವರ ಮನೆ ದೇವರು ಸುಳ್ಳು: ಸಿಎಂ ಸಿದ್ದರಾಮಯ್ಯ 

ಕಾಮಗಾರಿಗೆ ಚಾಲನೆ ನೀಡಿ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮುಂದಿನ ವರ್ಷ 4,25,000 ಕೋಟಿ ಮೊತ್ತದ ಬಜೆಟ್ ಮಂಡಿಸುವೆ ಎಂದಿದ್ದಾರೆ. ಜೆಡಿಎಸ್ ಅವರು ಪದೇ ಪದೇ ಹೇಳುತ್ತಾರೆ. ಅಭಿವೃದ್ಧಿ ಕೆಲಸ ಮಾಡಲು ಸರ್ಕಾರದಲ್ಲಿ ದುಡಿಲ್ಲ ಖಜಾನೆ ಖಾಲಿಯಾಗಿದೆ ಅಂತಾರೆ. ಆ ಮೂಲಕ ತಪ್ಪು ಮಾಹಿತಿಯನ್ನ ಕೊಡುತ್ತಾರೆ. ಇಂದು ನೀವೆಲ್ಲ ಸಾಕ್ಷಿ. ಶರತ್ ಬಚ್ಚೇಗೌಡ ಮಾಯಮಂತ್ರ ಮಾಡಿಲ್ಲ. 600 ಕೋಟಿ ರೂ. ಅಭಿವೃದ್ಧಿ ಕಾರ್ಯಕ್ರಮಗಳನ್ನ ಮಾಡಿಸಿದ್ದಾರೆ.

ಇದನ್ನೂ ಓದಿ: ಕೊನೆಗೂ ಸತ್ಯ ಕಕ್ಕಿದ ಸುಳ್ಳುರಾಮಯ್ಯ ಬಿರುದಾಂಕಿತ ಸಿದ್ದರಾಮಯ್ಯ: ಕುಮಾರಸ್ವಾಮಿ ವಾಗ್ದಾಳಿ

ಖಜಾನೆ ಖಾಲಿಯಾಗಿದ್ದರೆ ಈ ಕೆಲಸ ಆಗುತ್ತಿತ್ತಾ. ನಾನು ಅದಕ್ಕೆ ಹೇಳುತ್ತೇನೆ. ಬಿಜೆಪಿಯವರ ಮನೆ ದೇವರು ಸುಳ್ಳು. 24-25 ರ ಬಜೆಟ್​ನಲ್ಲಿ ಗ್ಯಾರಂಟಿ ಯೋಜನೆ ಸೇರಿ 1 ಲಕ್ಷ 25 ಸಾವಿರ ಕೋಟಿ ರೂ. ಇಟ್ಟಿದ್ದೇವೆ. ನಿಮಗೆ ಸತ್ಯ ಗೋತ್ತಾಗಬೇಕು ಅಂದರೆ ಒಂದೆ ವೇದಿಕೆ ಬನ್ನಿ. ನಾವು ನಮ್ಮ ಸಚಿವರು ಸಿದ್ದರಿದ್ದೇವೆ ಬನ್ನಿ. ಜನರ ಮುಂದೆ ಚರ್ಚೆ ಮಾಡೋಣ. ಯಾಕೆ ಜನರಿಗೆ ಸುಳ್ಳನ್ನ ಹೇಳುತ್ತಿದ್ದೀರಾ ಎಂದು ವಾಗ್ದಾಳಿ ಮಾಡಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಿಷ್ಟು 

ಸಮಾವೇಶದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿ, 2004ರಲ್ಲಿ ದಳ ಬೇಡ ಕಾಂಗ್ರೆಸ್​ಗೆ ಬನ್ನಿ ಎಂದು ಬಚ್ಚೇಗೌಡರನ್ನು ಕರೆದೆ. ಬಚ್ಚೇಗೌಡ ಬರದಿದ್ದರಿಂದ ಎಂಟಿಬಿ ನಾಗರಾಜ್ ಕರೆತಂದು ಬೆಳೆಸಿದ್ದೆವು. ಹೊಸಕೋಟೆಯಲ್ಲಿ ನಾಗರಾಜ್ ಬೆಳೆಸಿದರೂ ಸರಿಯಾಗಿ ಫಲ ಕೊಡಲಿಲ್ಲ. ಈಗ ಶರತ್ ನಮ್ಮ ಜತೆಗಿದ್ದಾರೆ, ಇದೇ ಕೊನೆ, ಬೇರೆಯವರು ಬರುವುದಿಲ್ಲ. ಶರತ್ ಬಚ್ಚೇಗೌಡ ನನ್ನಂತೆ 10 ಬಾರಿ ಹೊಸಕೋಟೆ ಕ್ಷೇತ್ರದಿಂದ ಗೆಲ್ಲುತ್ತಾರೆ. ಶರತ್ ಬಚ್ಚೇಗೌಡನನ್ನು ಗೆಲ್ಲಿಸಿದ ನಿಮಗೆಲ್ಲರಿಗೂ ಧನ್ಯವಾದ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಶಂಕಿತ ಉಗ್ರ ಮದರಸದಲ್ಲಿ ತಲೆಮರೆಸಿಕೊಂಡಿರುವ ಶಂಕೆ: VHP

ಎಂಟಿಬಿಯನ್ನು ಹೊಸಕೋಟೆಯಲ್ಲಿ ಭೇಟಿಯಾಗುತ್ತೇನೆ ಅಂತಾ ಹೇಳಿದ್ದೆ. ಹೀಗಾಗಿ ಎಂಟಿಬಿ ನಾಗರಾಜ್ ಭೇಟಿಯಾಗಲು ಬಂದೆ, ಆದರೆ ಅವರಿಲ್ಲ ಎಂದು ಪರೋಕ್ಷವಾಗಿ ಎಂಟಿಬಿ ನಾಗರಾಜ್ ಕಾಲೆಳೆದರು. ವಿಧಾನಸೌಧದಲ್ಲಿ ಎಂಟಿಬಿಗೆ ಅಖಾಡದಲ್ಲಿ ಭೇಟಿಯಾಗೋಣ ಅಂದಿದ್ದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:02 pm, Sun, 10 March 24

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು