AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳ ಮನಸ್ಸಿಗೆ ವಿಷ ತುಂಬುವ ಪಠ್ಯ, ಪಾಠಗಳಿಗೆ ಅವಕಾಶ ಕೊಡುವುದಿಲ್ಲ; ಸಿಎಂ ಸಿದ್ದರಾಮಯ್ಯ

ಮಕ್ಕಳ ಮನಸ್ಸಿಗೆ ವಿಷ ತುಂಬುವ ಪಠ್ಯ ಮತ್ತು ಪಾಠಗಳಿಗೆ ಅವಕಾಶ ಕೊಡುವುದಿಲ್ಲ. ಭಯದ ವಾತಾವರಣ ಅಳಿಸಿ ನೆಮ್ಮದಿಯ ವಾತಾವರಣ ಸೃಷ್ಟಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೇಳಿದರು.

ಮಕ್ಕಳ ಮನಸ್ಸಿಗೆ ವಿಷ ತುಂಬುವ ಪಠ್ಯ, ಪಾಠಗಳಿಗೆ ಅವಕಾಶ ಕೊಡುವುದಿಲ್ಲ; ಸಿಎಂ ಸಿದ್ದರಾಮಯ್ಯ
ಸಿದ್ದರಾಮಯ್ಯ
ಗಣಪತಿ ಶರ್ಮಾ
|

Updated on:May 29, 2023 | 8:50 PM

Share

ಬೆಂಗಳೂರು: ಮಕ್ಕಳ ಮನಸ್ಸಿಗೆ ವಿಷ ತುಂಬುವ ಪಠ್ಯ ಮತ್ತು ಪಾಠಗಳಿಗೆ ಅವಕಾಶ ಕೊಡುವುದಿಲ್ಲ. ಭಯದ ವಾತಾವರಣ ಅಳಿಸಿ ನೆಮ್ಮದಿಯ ವಾತಾವರಣ ಸೃಷ್ಟಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಭರವಸೆ ಹೇಳಿದರು. ಗೃಹ ಕಚೇರಿ ಕೃಷ್ಣದಲ್ಲಿ ಸೋಮವಾರ ಸುಮಾರು 40 ಕ್ಕೂ ಹೆಚ್ಚು ಮಂದಿ ಸಾಹಿತಿ ಬರಹಗಾರರು ಹಾಗೂ ನಾನಾ ಜನಪರ ಸಂಘಟನೆಗಳ ಮುಖ್ಯಸ್ಥರ ಜತೆಗೆ ನಡೆದ ಸಭೆಯಲ್ಲಿ ಈ ಭರವಸೆ ನೀಡಿದರು. ಕನ್ನಡ ನಾಡಿನ ಸೌಹಾರ್ದ ಮತ್ತು ಜಾತ್ಯತೀತ ಪರಂಪರೆಯ ರಕ್ಷಣೆ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ದ್ವೇಷ ರಾಜಕಾರಣವನ್ನು ಬಲಿ ಹಾಕಿ, ಭಯದ ವಾತಾವರಣ ಅಳಿಸಲಾಗುವುದು ಎಂದು ಅವರು ತಿಳಿಸಿದರು.

ದೇಶವನ್ನು ಅಪಾಯದ ಸುಳಿಗೆ ದೂಡುತ್ತಾ, ಈ‌ ಮಣ್ಣಿನ ಬಹುತ್ವವನ್ನು ನಾಶ ಮಾಡುತ್ತಿರುವ ಬಿಜೆಪಿ ಪರಿವಾರದ ವಿರುದ್ಧ ಖಚಿತ ನಿಲುವು ತೆಗೆದುಕೊಂಡು ಸ್ವಯಂಪ್ರೇರಿತವಾಗಿ ಈ ಚುನಾವಣೆಯಲ್ಲಿ ಜನರನ್ನು ಎಚ್ಚರಿಸುವ ಕೆಲಸ ಮಾಡಿದ್ದಕ್ಕಾಗಿ ಸಾಹಿತಿ-ಬರಹಗಾರರಿಗೆ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದರು.

ಸುಳ್ಳು ಮೊಕದ್ದಮೆ ವಾಪಸ್

ಸಾಹಿತಿ, ಬರಹಗಾರ, ಕನ್ನಡ ಹೋರಾಟಗಾರರು, ದಲಿತ ಚಳವಳಿಗಳ ಹೋರಾಟಗಾರರು, ರೈತ-ಕಾರ್ಮಿಕರ ಮೇಲೆ ಹಾಕಿದ್ದ ಸುಳ್ಳು ಮೊಕದ್ದಮೆಗಳನ್ನು ಹಿಂದಕ್ಕೆ ಪಡೆಯಲಾಗುವುದು. ಮಕ್ಕಳ ಮನಸ್ಸನ್ನು ಕಲುಷಿತಗೊಳಿಸಲು ನಡೆಸಿರುವ ಕೃತ್ಯವನ್ನು ಕ್ಷಮಿಸಲು ಸಾಧ್ಯವಿಲ್ಲ. ಶೈಕ್ಷಣಿಕ ವರ್ಷ ಆರಂಭ ಆಗಿರುವುದರಿಂದ ಮಕ್ಕಳ ಶಿಕ್ಷಣಕ್ಕೆ ತೊಂದರೆ ಆಗದಂತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಹೊಸ ಶಿಕ್ಷಣ ನೀತಿ ಹೆಸರಲ್ಲಿ ಶಿಕ್ಷಣ ಕ್ಷೇತ್ರವನ್ನು ಗಬ್ಬೆಬ್ಬಿಸಲು ಅವಕಾಶ ಕೊಡುವುದಿಲ್ಲ. ಈ ಬಗ್ಗೆ ಮತ್ತೊಮ್ಮೆ ಪ್ರತ್ಯೇಕವಾದ ಸಭೆ ಚರ್ಚಿಸಿ ನಿಷ್ಠುರ ತೀರ್ಮಾನ ತೆಗೆದುಕೊಳ್ಳಲಾಗುವುದು. ಅನೈತಿಕ ಪೊಲೀಸ್ ಗಿರಿ, ದ್ವೇಷದ ರಾಜಕಾರಣ, ತೇಜೋವಧೆ ಮಾಡುವ ಟ್ರೋಲ್ ಗಳು, ಸಾಹಿತಿಗಳಿಗೆ ಬೆದರಿಕೆ ಹಾಕುವವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ಈ ಬಗ್ಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಖಡಕ್ ಸೂಚನೆ ನೀಡಿದ್ದೇನೆ. ಬರಹಗಾರರು ನೀಡಿರುವ ಮನವಿ ಪತ್ರದಲ್ಲಿನ ಸಂಗತಿಗಳನ್ನು ಗಂಭೀರವಾಗಿ ಪರಿಗಣಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.

ಸಿಎಂ ಸಿದ್ದರಾಮಯ್ಯ ನೀಡಿದ ಭರವಸೆಗಳು

  • ಪಠ್ಯ ಮತ್ತು ಪಾಠಗಳ ಮೂಲಕ ಮಕ್ಕಳ ಮನಸ್ಸನ್ನು ಕಲುಷಿತಗೊಳಿಸಲು ನಡೆಸಿರುವ ಕೃತ್ಯವನ್ನು ಕ್ಷಮಿಸಲು ಸಾಧ್ಯವಿಲ್ಲ. ಶೈಕ್ಷಣಿಕ ವರ್ಷ ಆರಂಭ ಆಗಿರುವುದರಿಂದ ಮಕ್ಕಳ ಶಿಕ್ಷಣಕ್ಕೆ ತೊಂದರೆ ಆಗದಂತೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ.
  • ಕನ್ನಡ ಹೋರಾಟಗಾರರು, ರೈತ-ಕಾರ್ಮಿಕ-ದಲಿತ ಚಳವಳಿಗಳ ಹೋರಾಟಗಾರರು ಮತ್ತು ಸಾಹಿತಿ, ಬರಹಗಾರರ ಮೇಲೆ ಹಾಕಿರುವ ಸುಳ್ಳು ಮೊಕದ್ದಮೆಗಳನ್ನು ಹಿಂದಕ್ಕೆ ಪಡೆಯಲಾಗುವುದು.
  • ಹೊಸ ಶಿಕ್ಷಣ ನೀತಿ ಹೆಸರಲ್ಲಿ ಶಿಕ್ಷಣ ಕ್ಷೇತ್ರವನ್ನು ಗಬ್ಬೆಬ್ಬಿಸಲು ಅವಕಾಶ ಕೊಡುವುದಿಲ್ಲ. ಈ ಬಗ್ಗೆ ಮತ್ತೊಮ್ಮೆ ಪ್ರತ್ಯೇಕವಾದ ಸಭೆ ಕರೆದು ಸಮಗ್ರವಾಗಿ ಚರ್ಚಿಸಿ ನಿಷ್ಠುರವಾದ ಮತ್ತು ಖಚಿತವಾದ ತೀರ್ಮಾನಗಳನ್ನು ತೆಗೆದುಕೊಳ್ಳಲಾಗುವುದು.
  • ಅನೈತಿಕ ಪೊಲೀಸ್ ಗಿರಿ, ದ್ವೇಷದ ರಾಜಕಾರಣ, ತೇಜೋವಧೆ ಮಾಡುವ ಟ್ರೋಲ್ ಗಳು ಮತ್ತು ಸಾಹಿತಿಗಳಿಗೆ ಬೆದರಿಕೆ ಹಾಕುವವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಈಗಾಗಲೇ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಖಡಕ್ ಸೂಚನೆ ನೀಡಿದ್ದೇನೆ.
  • ಉಳಿದಂತೆ ಸಾಹಿತಿ ಬರಹಗಾರರು ನೀಡಿರುವ ಮನವಿ ಪತ್ರದಲ್ಲಿನ ಸಂಗತಿಗಳನ್ನು ಗಂಭೀರವಾಗಿ ಪರಿಗಣಿಸುತ್ತೇನೆ. ಅಗತ್ಯಕ್ಕೆ ತಕ್ಕಂತೆ ನಮ್ಮ ಸರ್ಕಾರ ಕ್ರಮ ಕೈಗೊಳ್ಳಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:50 pm, Mon, 29 May 23

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್