AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಹಗರಣ: ಇಡಿಗೆ 500ಕ್ಕೂ ಹೆಚ್ಚು ದಾಖಲೆ ಕೊಟ್ಟು ಬಂದ ಸ್ನೇಹಮಯಿ ಕೃಷ್ಣ ಹೇಳಿದ್ದಿಷ್ಟು

ಮುಡಾದ 14 ಸೈಟ್​​ಗಳ ಅಕ್ರಮ ಹಂಚಿಕೆ ಪ್ರಕರಣ ಸಿದ್ದರಾಮಯ್ಯಗೆ ಉರುಳಾಗಿದೆ. ಈಗಾಗಲೇ ನ್ಯಾಯಾಂಗ ತನಿಖೆ ಜೊತೆಗೆ ಮೈಸೂರು ಲೋಕಾಯುಕ್ತ ಅಧಿಕಾರಿಗಳು ಕೇಸ್​​​ನ ತನಿಖೆ ನಡೆಸುತ್ತಿದ್ದಾರೆ. ಈ ನಡುವೆ ಸ್ನೇಹಮಯಿ ಕೃಷ್ಣ ದೂರು ಆಧರಿಸಿ ಜಾರಿ ನಿರ್ದೇಶನಾಲಯ ಇಂದು ವಿಚಾರಣೆ ಮಾಡಿದೆ. ಈ ವೇಳೆ ಇಡಿಗೆ 500ಕ್ಕೂ ಹೆಚ್ಚು ದಾಖಲೆ ಕೊಟ್ಟಿದ್ದಾರೆ.

ಮುಡಾ ಹಗರಣ: ಇಡಿಗೆ 500ಕ್ಕೂ ಹೆಚ್ಚು ದಾಖಲೆ ಕೊಟ್ಟು ಬಂದ ಸ್ನೇಹಮಯಿ ಕೃಷ್ಣ ಹೇಳಿದ್ದಿಷ್ಟು
ಮುಡಾ ಹಗರಣ: ಇಡಿಗೆ 500ಕ್ಕೂ ಹೆಚ್ಚು ದಾಖಲೆ ಕೊಟ್ಟು ಬಂದ ಸ್ನೇಹಮಯಿ ಕೃಷ್ಣ ಹೇಳಿದ್ದಿಷ್ಟು
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Oct 03, 2024 | 8:24 PM

Share

ಬೆಂಗಳೂರು, ಅಕ್ಟೋಬರ್​ 03: ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ದೂರುದಾರ ಸ್ನೇಹಮಯಿ ಕೃಷ್ಣ ಇಡಿ ಸಮನ್ಸ್​ ನೀಡಿತ್ತು. ದೂರಿಗೆ ಸಂಬಂಧಿಸಿದ ದಾಖಲೆ ಸಲ್ಲಿಸಲು ಇಡಿ ಸೂಚಿಸಿತ್ತು. ಈ ಹಿನ್ನಲ್ಲೆ ಇಂದು ಬೆಂಗಳೂರಿನ ಶಾಂತಿನಗರದ ಇಡಿ ಕಚೇರಿಗೆ ವಿಚಾರಣೆಗೆ ಆಗಮಿಸಿದ್ದರು. ಸದ್ಯ ವಿಚಾರಣೆ ಮುಗಿಸಿ ಹೊರಬಂದ ಸ್ನೇಹಮಯಿ ಕೃಷ್ಣ 500ಕ್ಕೂ ಹೆಚ್ಚು ದಾಖಲೆಗಳನ್ನು ಕೊಟ್ಟಿರುವುದಾಗಿ ಹೇಳಿದ್ದಾರೆ.

ವಿಚಾರಣೆ ಮುಗಿಸಿ ಹೊರಬಂದ ದೂರುದಾರ ಸ್ನೇಹಮಯಿ ಕೃಷ್ಣ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗ್ಗೆಯಿಂದ ಸಂಜೆವರೆಗೂ ಇಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಅಧಿಕಾರಿಗಳಿಗೆ ಯಾವ ಕ್ಲಾರಿಫಿಕೇಷನ್ ಬೇಕೋ ಅದೆಲ್ಲಾ ಕೊಟ್ಟಿದ್ದೀನಿ. ದಾಖಲೆ, ಸಾಕ್ಷಿಗಳ ಬಗ್ಗೆ ಮಾಹಿತಿ ಕೇಳಿದ್ರು, ಅದೆಲ್ಲವನ್ನೂ ಕೊಟ್ಟಿದ್ದೇನೆ. ಇಡಿ ಅಧಿಕಾರಿಗಳು ಮತ್ತೆ ಕರೆದರೆ ವಿಚಾರಣೆಗೆ ಬರುವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮುಡಾ ಕೇಸ್ನಲ್ಲಿ ವಿಚಾರಣೆಗಿಳಿದ ಲೋಕಾಯುಕ್ತ: ಸ್ನೇಹಮಹಿ ಕೃಷ್ಣಗೆ ಮೊದಲ ನೋಟಿಸ್

ಮುಡಾ ಹಗರಣ ಸಂಬಂಧ 500ಕ್ಕೂ ಹೆಚ್ಚು ದಾಖಲೆಗಳನ್ನು ಕೊಟ್ಟಿದ್ದೆ. ನಾನು ನೀಡಿದ್ದ ದಾಖಲೆ ಸಂಬಂಧ ಇಡಿ ಅಧಿಕಾರಿಗಳು ಸ್ಪಷ್ಟನೆ ಕೇಳಿದ್ದರು. ಮುಡಾದಲ್ಲಿ ಸುಮಾರು 5 ಸಾವಿರ ಕೋಟಿಗೂ ಹೆಚ್ಚು ಹಗರಣ ನಡೆದಿದೆ. ಕನ್ನಡದಲ್ಲಿರುವ ದಾಖಲೆಗಳ ಬಗ್ಗೆಯೂ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇನೆ. ಮುಡಾಗೆ ಸೈಟ್ ವಾಪಸ್ ನೀಡಿದರೆ ಅದು ಸಾಕ್ಷಿ ನಾಶ ಬರಲ್ಲ. ವಾಪಸ್ ಕೊಟ್ಟಿರೋದೇ ಸಾಕ್ಷಿ ಆಗುತ್ತೆ. ಮುಡಾದಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ. ಹೀಗಾಗಿ ಇದಕ್ಕೆ ಮನಿ ಲ್ಯಾಂಡರಿಂಗ್‌ ಆ್ಯಕ್ಟ್‌ ಅನ್ವಯವಾಗುತ್ತೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮುಡಾಗೆ 14 ಸೈಟ್ ವಾಪಸ್‌ ಪ್ರಕ್ರಿಯೆ ಪೂರ್ಣ: ಯಾರ ಹೆಸರಿಗೆ ವರ್ಗಾವಣೆಯಾಯ್ತು ವಿವಾದಿತ 14 ಸೈಟ್?

ಈ ನಡುವೆ ಲೋಕಾಯುಕ್ತ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಮುಡಾ ಕಚೇರಿಗೆ ಆಗಮಿಸಿದ ಎಸ್​ಪಿ ಉದೇಶ್ ನೇತೃತ್ವದ ತಂಡ ಇಂದು ಕೆಲ ಕಡತಗಳನ್ನ ಪರಿಶೀಲಿಸಿತು. ಮೊನ್ನೆ ಕೆಸರೆ ಗ್ರಾಮದಲ್ಲಿ ಮಹಜರು ನಡೆಸಿದ್ದ ತಂಡ ಮುಂದೆ ಸಿಎಂ ಪತ್ನಿ ಪಾರ್ವತಿಗೆ ಮಂಜೂರಾಗಿದ್ದ ವಿಜಯನಗರದ ನಿವೇಶನಗಳನ್ನೂ ಪರಿಶೀಲಿಸಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:39 pm, Thu, 3 October 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್