ಚುನಾವಣೆಗೂ ಮುನ್ನ ಸೋಲೊಪ್ಪಿದರೇ ಸಿದ್ದರಾಮಯ್ಯ? ‘ಇಂಡಿಯಾ’ ಮೈತ್ರಿಕೂಟಕ್ಕೆ ಬಹುಮತ ಅನುಮಾನವೆಂದ ಸಿಎಂ

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಬಹುಮತ ದೊರೆಯುವುದು ಅನುಮಾನ ಎಂದು ಹೇಳಿರುವ ಸಿಎಂ ಸಿದ್ದರಾಮಯ್ಯ, ಮುಖ್ಯಮಂತ್ರಿ ಬದಲಾವಣೆ ಸೇರಿದಂತೆ ರಾಜ್ಯ ಮತ್ತು ರಾಷ್ಟ್ರ ರಾಜಕೀಯಕ್ಕೆ ಸಂಬಂಧಿಸಿದ ಹಲವು ವಿಚಾರಗಳ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ. ಆ ಕುರಿತ ವಿವರ ಇಲ್ಲಿದೆ.

ಚುನಾವಣೆಗೂ ಮುನ್ನ ಸೋಲೊಪ್ಪಿದರೇ ಸಿದ್ದರಾಮಯ್ಯ? ‘ಇಂಡಿಯಾ’ ಮೈತ್ರಿಕೂಟಕ್ಕೆ ಬಹುಮತ ಅನುಮಾನವೆಂದ ಸಿಎಂ
ಸಿದ್ದರಾಮಯ್ಯ
Follow us
|

Updated on:Apr 13, 2024 | 10:49 AM

ಬೆಂಗಳೂರು, ಏಪ್ರಿಲ್ 13: ಲೋಕಸಭೆ ಚುನಾವಣೆಗೂ (Lok Sabha Election) ಮುನ್ನವೇ ಕರ್ನಾಟಕ ಸಿಎಂ ಸಿದ್ದರಾಮಯ್ಯ (Siddaramaiah) ಸೋಲೊಪ್ಪಿಕೊಂಡರೇ ಎಂಬ ಅನುಮಾನ ಇದೀಗ ವ್ಯಕ್ತವಾಗಿದೆ. ಇದಕ್ಕೆ ಕಾರಣ ಅವರು ನೀಡಿರುವ ಮಹತ್ವದ ಹೇಳಿಕೆ. ‘ಇಂಡಿಯಾ’ ಮೈತ್ರಿಕೂಟಕ್ಕೆ (INDIA Alliance) ಲೋಕಸಭೆ ಚುನಾವಣೆಯಲ್ಲಿ ಬಹುಮತ ಸಿಗದೇ ಇರಬಹುದು ಎಂದು ಅವರು ‘ಪಿಟಿಐ’ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

‘ಇಂಡಿಯಾ’ ಮೈತ್ರಿಕೂಟ ಲೋಕಸಭೆ ಚುನಾವಣೆಯಲ್ಲಿ ಸಂಪೂರ್ಣ ಬಹುಮತವನ್ನು ಪಡೆಯದಿರಬಹುದು. ಆದರೆ ಅದೇ ಎನ್​ಡಿಎ ಮೈತ್ರಿಕೂಡ ಕೂಡ ಸಂಪೂರ್ಣ ಬಹುಮತವನ್ನು ಪಡೆಯುವುದಿಲ್ಲ. ಆದ್ದರಿಂದ, ‘ಇಂಡಿಯಾ’ (ಬಣ) ಮೈತ್ರಿಕೂಟವು ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ, ಒಡಿಶಾದ ಸಿಎಂ ನವೀನ್ ಪಟ್ನಾಯಕ್, ಸಿಪಿಐ (ಎಂ) ಮತ್ತು ಇತರ ರಾಜಕೀಯ ಪಕ್ಷಗಳನ್ನು ಅವಲಂಬಿಸಬೇಕಾಗಬಹುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಎನ್‌ಡಿಎ ಹೆಸರಿನಲ್ಲಿ ಬಿಜೆಪಿ ಕೂಡ ಇತರ ರಾಜಕೀಯ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುತ್ತಿದೆ. ಬಿಜೆಪಿಯೊಂದೇ ಬಹುಮತದಿಂದ ಅಧಿಕಾರಕ್ಕೆ ಬಂದಿಲ್ಲ. ಬಿಜೆಪಿ ತನ್ನ ಮತದಾನದ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸಿರಬಹುದು, ಆದರೆ ಅದರ ಅರ್ಥ ಬಿಜೆಪಿ ತಾನಾಗಿ ಅಧಿಕಾರಕ್ಕೆ ಬಂದಿದೆ ಎಂದಲ್ಲ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಸಿಎಂ ಸಿದ್ದರಾಮಯ್ಯ ಸಂದರ್ಶನದ ವಿಡಿಯೋ

ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗ ಸಿದ್ದರಾಮಯ್ಯ ಅವರಿಂದ ಈ ಹೇಳಿಕೆ ಮೂಡಿಬಂದಿದೆ. ಲೋಕಸಭೆಗೆ ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದ್ದು, ಮೊದಲ ಹಂತದ ಮತದಾನ ಏಪ್ರಿಲ್ 19ರಂದು ನಡೆಯಲಿದೆ. ಕರ್ನಾಟಕದಲ್ಲಿ ಏಪ್ರಿಲ್ 26ರಂದು 14 ಕ್ಷೇತ್ರಗಳಿಗೆ ಮತ್ತು ಮೇ 7ರಂದು ಉಳಿದ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಸಿಎಂ ಬದಲಾವಣೆ ಬಗ್ಗೆ ಏನಂದರು ಸಿದ್ದರಾಮಯ್ಯ?

ಕರ್ನಾಟಕ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷಗಳ ನಂತರ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಕುರ್ಚಿ ಬಿಟ್ಟುಕೊಡಬೇಕೇ ಎಂಬ ಊಹಾಪೋಹಗಳ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅದು ಪಕ್ಷದ ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ ಎಂದರು. ಅದೆಲ್ಲಾ ಹೈಕಮಾಂಡ್ ನಿರ್ಧಾರವನ್ನು ಅವಲಂಬಿಸಿರುತ್ತದೆ. ಹೈಕಮಾಂಡ್‌ ನಿರ್ಧರಿಸಿದರೆ ನಾನೇ ಮುಂದುವರಿಯುತ್ತೇನೆ. ಇಲ್ಲವಾದಲ್ಲಿ ಹೈಕಮಾಂಡ್ ನಿರ್ಧಾರದಂತೆ ನಡೆಯುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: ಬೆಂಗಳೂರು ಬ್ಲಾಸ್ಟ್: ಆರೋಪಿಗಳನ್ನು ಹಿಡಿಯಲು ನೆರವಾಗಿದ್ದು ನಮ್ಮ ಪೊಲೀಸ್: ಬಿಜೆಪಿ ವಿರುದ್ದ ಸಿಡಿಗುಟ್ಟಿದ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ನಾಲ್ಕು ವರ್ಷಗಳ ನಂತರ ಚುನಾವಣಾ ರಾಜಕೀಯದಲ್ಲಿ ಉಳಿಯುವುದಿಲ್ಲ. ಆದರೆ ರಾಜಕೀಯದಲ್ಲಿ ಸಕ್ರಿಯವಾಗಿರುತ್ತೇನೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಪುನರುಚ್ಚರಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:36 am, Sat, 13 April 24

ತಾಜಾ ಸುದ್ದಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ