AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾರಂಟಿಯಿಂದ ಬೊಕ್ಕಸ ಖಾಲಿ ಹೇಳಿಕೆ: ಅಮಿತ್ ಶಾ ಬಹಿರಂಗ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಸವಾಲು

Siddaramaiah vs Amit Shah: ಕರ್ನಾಟಕ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಗ್ಯಾರಂಟಿ ಯೋಜನೆಗಳ ಬಗ್ಗೆ ನೀಡಿರುವ ಹೇಳಿಕೆ ಸಿಎಂ ಸಿದ್ದರಾಮಯ್ಯ ಅವರನ್ನು ಕೆರಳಿಸಿದೆ. ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ಬಹಿರಂಗ ಚರ್ಚೆಗೆ ಬರುವಂತೆ ಸವಾಲು ಹಾಕಿದ್ದಾರೆ.

ಗ್ಯಾರಂಟಿಯಿಂದ ಬೊಕ್ಕಸ ಖಾಲಿ ಹೇಳಿಕೆ: ಅಮಿತ್ ಶಾ ಬಹಿರಂಗ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಸವಾಲು
ಅಮಿತ್ ಶಾ & ಸಿದ್ದರಾಮಯ್ಯ
Anil Kalkere
| Edited By: |

Updated on: Feb 11, 2024 | 1:11 PM

Share

ಬೆಂಗಳೂರು, ಫೆಬ್ರವರಿ 11: ಕರ್ನಾಟಕ ಸರ್ಕಾರದ (Karnataka Government) ಉಚಿತ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಬೊಕ್ಕಸ ಖಾಲಿಯಾಗುತ್ತಿದೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿಕೆಗೆ ಸಿಎಂ ಸಿದ್ದರಾಮಯ್ಯ (Siddaramaiah) ತಿರುಗೇಟು ನೀಡಿದ್ದಾರೆ. ಈ ವಿಚಾರವಾಗಿ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಗ್ಯಾರಂಟಿಯಿಂದ ಬೊಕ್ಕಸ ಖಾಲಿ ಎಂಬ ಹೇಳಿಕೆ ನಿಜವಾಗಿಯೂ ಅಮಿತ್ ಶಾ ಅವರ ಖಚಿತ ಅಭಿಪ್ರಾಯವಾಗಿದ್ದರೆ ಅವರು ಬಹಿರಂಗ ಚರ್ಚೆಗೆ ಬರಲಿ ಎಂಬ ಸವಾಲು ಹಾಕಿದ್ದಾರೆ.

ಗ್ಯಾರಂಟಿ ಯೋಜನೆಗಳ ಬಗ್ಗೆ ವಿರೋಧವಿದ್ದರೆ ಬಿಜೆಪಿ ನಾಯಕರು ಅದನ್ನು ಕಂತುಗಳಲ್ಲಿ ಹೇಳುವುದನ್ನು ಬಿಟ್ಟು ಒಂದೇ ಬಾರಿ ನೇರವಾಗಿ, ಸ್ಪಷ್ಟವಾಗಿ ಹೇಳಿಬಿಡಬೇಕು. ಅದೇ ರೀತಿ ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ಜಾರಿಯಲ್ಲಿರುವ ಎಲ್ಲ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಾಗಿ ಆ ರಾಜ್ಯಗಳಲ್ಲಿ ಘೋಷಣೆ ಮಾಡಬೇಕು. ಈ ಮೂಲಕ ತಮ್ಮ ದಮ್ಮು, ತಾಕತ್ತು ತೋರಿಸಬೇಕು. ಆಗಾಗ ಗೊಣಗಾಡಿಕೊಂಡರೆ ಏನು ಫಲ? ಇದೀಗ ಕರ್ನಾಟಕಕ್ಕೆ ಆಗಮಿಸಿರುವ ಕೇಂದ್ರ ಗೃಹಸಚಿವ ಅಮಿತ್ ಶಾ, ‘ಗ್ಯಾರಂಟಿ ಯೋಜನೆಗಳಿಂದ ಬೊಕ್ಕಸ ಖಾಲಿಯಾಗಿದೆ’ ಎಂದು ನಮ್ಮ ಸರ್ಕಾರದ ಬಗ್ಗೆ ಇರುವ ಈರ್ಷ್ಯೆಯನ್ನು ಹೊರಹಾಕಿದ್ದಾರೆ. ಇದು ಅಮಿತ್ ಶಾ ಅವರ ಖಚಿತ ಅಭಿಪ್ರಾಯವಾಗಿದ್ದರೆ ಅವರು ನನ್ನ ಜೊತೆ ಬಹಿರಂಗ ಚರ್ಚೆಯಲ್ಲಿ ಪಾಲ್ಗೊಳ್ಳಲಿ. ಗ್ಯಾರಂಟಿ ಯೋಜನೆಗಳಿಂದ ನಮ್ಮ ಖಜಾನೆ ಬರಿದಾಗಿಲ್ಲ ಬದಲಿಗೆ ತೆರಿಗೆ ಹಂಚಿಕೆ ಮತ್ತು ಅನುದಾನ ವಿತರಣೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ ಎನ್ನುವುದನ್ನು ನಾನು ಸಾಬೀತು ಮಾಡಬಲ್ಲೆ. ಇದು ಅಮಿತ್ ಶಾ ಅವರಿಗೆ ನನ್ನ ಸವಾಲು ಕೂಡಾ ಹೌದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕರ್ನಾಟಕದ ಬಗ್ಗೆ ಮಾತನಾಡುವಾಗ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುವ ಬಿಜೆಪಿ ನಾಯಕರು ತಮ್ಮ ಆಳ್ವಿಕೆಯ ರಾಜ್ಯಗಳಲ್ಲಿ ಅದೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಭರವಸೆ ನೀಡುತ್ತಿದ್ದಾರೆ. ನಮ್ಮ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿದ್ದ ಪ್ರಧಾನಿ ನರೇಂದ್ರ ಮೋದಿಯವರು ನಮ್ಮ ಗ್ಯಾರಂಟಿಯ ಯೋಜನೆಗಳನ್ನು ಮಾತ್ರ ಅಲ್ಲ, ಗ್ಯಾರಂಟಿ ಎಂಬ ಹೆಸರನ್ನೂ ಕದ್ದು ಈಗ ಅದೇ ಹೆಸರಲ್ಲಿ ಜಾಹೀರಾತು ನೀಡಿದ್ದಾರೆ. ಇದು ಆ ಪಕ್ಷದ ಬಡಜನ ವಿರೋಧಿ ನಿಲುವು ಮತ್ತು ಬೌದ್ದಿಕ ದಿವಾಳಿತನವನ್ನು ತೋರಿಸುತ್ತದೆ. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಅವರಿಂದ ಹಿಡಿದು ಸ್ಥಳೀಯ ಬಿಜೆಪಿ ನಾಯಕರು ನಿಜವಾಗಿ ವಿರೋಧಿಸುವುದು ಗ್ಯಾರಂಟಿ ಯೋಜನೆಗಳನ್ನಲ್ಲ, ಅವರ ಕೆಂಗಣ್ಣು ಬಿದ್ದಿರುವುದು ಈ ಯೋಜನೆಗಳ ಫಲಾನುಭವಿಗಳಾದ ಬಡವರ ಮೇಲೆ. ಬಡಜನರಿಗಾಗಿ ಯಾವುದೇ ಕಾರ್ಯಕ್ರಮಗಳನ್ನು ಜಾರಿಗೆ ತಂದರೂ ಅವುಗಳನ್ನು ವಿರೋಧಿಸುತ್ತಲೇ ಬಂದಿರುವ ಇತಿಹಾಸ ಬಿಜೆಪಿ ಮತ್ತು ಸಂಘ ಪರಿವಾರಕ್ಕಿದೆ ಎಂದು ಅವರು ಹೇಳಿದ್ದಾರೆ.

ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರು ‘ಗರೀಬಿ ಹಠಾವೋ’ ಎಂದು ಕರೆ ನೀಡಿದಾಗಲೂ ಇದೇ ಪರಿವಾರದವರು ಅದನ್ನು ವಿರೋಧಿಸಿದ್ದರು. ಭೂ ಸುಧಾರಣೆ, ಮೀಸಲಾತಿ ಸೇರಿದಂತೆ ಸಾಮಾಜಿಕ ನ್ಯಾಯದ ಯಾವುದೇ ಕಾರ್ಯಕ್ರಮಗಳಿದ್ದರೂ ಇವರ ವಿರೋಧ ಇದ್ದೇ ಇದೆ. ಇದಕ್ಕೆ ಬಡವರೇ ತಕ್ಕ ಉತ್ತರವನ್ನು ಕೊಡಬೇಕು. ಮುಖ್ಯಮಂತ್ರಿ ಸ್ಥಾನದ ಮೊದಲ ಅವಧಿಯಲ್ಲಿ ನಾನು ಜಾರಿಗೆ ತಂದಿದ್ದ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್ ಮೊದಲಾದ ಬಡವರ ಕಲ್ಯಾಣದ ಕಾರ್ಯಕ್ರಮಗಳ ಬಗ್ಗೆಯೂ ಬಿಜೆಪಿ ನಾಯಕರು ಇದೇ ರೀತಿ ತಮ್ಮ ಅಸಹನೆ ಮತ್ತು ಮತ್ಸರವನ್ನು ಕಾರಿಕೊಂಡಿದ್ದರು ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

ಬಡವರಿಗೆ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆಗೆ ಬೇಕಾದ ಅಕ್ಕಿಯನ್ನು ಕೊಡಲು ನಿರಾಕರಿಸಿದ್ದ ಕೇಂದ್ರ ಸರ್ಕಾರ ಈಗ ‘ಭಾರತ್ ಬ್ರಾಂಡ್​’ನಲ್ಲಿ ಅದೇ ಅಕ್ಕಿಯನ್ನು ಮಾರಾಟ ಮಾಡುತ್ತಿದೆ. ನಾವು ಕಿಲೋಗೆ 33 ರೂ.ನಂತೆ ಅಕ್ಕಿ ಕೇಳಿದಾಗ ನಿರಾಕರಿಸಿದ್ದ ಕೇಂದ್ರ ಸರ್ಕಾರ ಈಗ ಕಿಲೋಗೆ 29 ರೂ.ನಂತೆ ಮಾರಾಟ ಮಾಡುತ್ತಿದೆ. ಒಟ್ಟಿನಲ್ಲಿ ಬಿಜೆಪಿಗೆ ಕರ್ನಾಟಕದ ಬಡವರು, ರೈತರು, ಮಹಿಳೆಯರು, ಕಾರ್ಮಿಕರೆಂದರೆ ಅಸಹನೆ ಎಂದು ಅವರು ಹೇಳಿದ್ದಾರೆ.

ಅಮಿತ್ ಶಾಗೆ ಕನ್ನಡಿಗರೆಂದರೆ ತಾತ್ಸಾರ: ಸಿದ್ದರಾಮಯ್ಯ

ನಮ್ಮ ಗ್ಯಾರಂಟಿ ಯೋಜನೆಗಳ ವಿರುದ್ಧ ಮಾತನಾಡುತ್ತಿರುವ ಗೃಹ ಸಚಿವ ಅಮಿತ್ ಶಾ ಅವರಿಗೆ ಕನ್ನಡಿಗರೆಂದರೆ ತಾತ್ಸಾರ. ಕನ್ನಡ ಧ್ವಜಕ್ಕೆ ವಿರೋಧ, ಹಿಂದಿ ಹೇರಿಕೆಗೆ ಪ್ರಯತ್ನ, ನಂದಿನಿ ಮೇಲೆ ಅಮುಲ್ ಹೇರುವ ಹುನ್ನಾರ ಇವೆಲ್ಲವೂ ಅಮಿತ್ ಶಾ ಸಾಧನೆಗಳು. ಕೇಂದ್ರ ಸರ್ಕಾರ ಬರಪರಿಹಾರ ನೀಡಬೇಕೆಂದರೆ ಗೃಹ ಸಚಿವ ಅಮಿತ್ ಶಾ ಅಧ್ಯಕ್ಷತೆಯ ಉನ್ನತಾಧಿಕಾರ ಸಮಿತಿ ಸಭೆ ನಡೆಸಿ ತೀರ್ಮಾನಿಸಬೇಕು. ಕನ್ನಡಿಗರ ವಿರೋಧಿಯಾಗಿರುವ ಶಾ ಅವರು ಆ ಸಭೆಯನ್ನೇ ಕರೆಯುತ್ತಿಲ್ಲ. ಇಂತಹವರು ರಾಜ್ಯಕ್ಕೆ ಬಂದು ನಮಗೆ ಪಾಠ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮೈಸೂರಿಗೆ ಆಗಮಿಸಿದ ಬಿಜೆಪಿ ಚಾಣಕ್ಯ ಅಮಿತ್ ಶಾ; ರಸ್ತೆ ಮಧ್ಯೆ ಕಾರು ಅಪಘಾತ

ಗ್ಯಾರಂಟಿ ವಿರೋಧಿಗಳಿಗೆ ಯಾವ ರಾಮನ ದಯೆಯೂ ಇರದು: ಸಿದ್ದರಾಮಯ್ಯ

ಬಡವರ ಕಷ್ಟ ಕಡಿಮೆ ಮಾಡುವ ಕಣ್ಣೀರು ಒರೆಸುವ ಕೆಲಸವೇ ನಿಜವಾದ ದೈವ ಭಕ್ತಿ ಎಂದು ತಿಳಿದುಕೊಂಡವನು ನಾನು. ಬಡವರ ಹೊಟ್ಟೆಗೆ ಹೊಡೆಯುವ ಕೆಲಸ ಮಾಡಿ ಎಷ್ಟು ಬಾರಿ ರಾಮನಾಮ ಹೇಳಿದರೂ ಅದು ವ್ಯರ್ಥ. ಬಡವರಿಗೆ ಅನ್ನವನ್ನೂ ನೀಡದೆ ದೇವರಿಗೆ ನೈವೇಧ್ಯ ನೀಡಿ ಏನು ಫಲ? ಬಡವರಿಗೆ ಮನೆ ಕಟ್ಟಿಕೊಡದೆ ದೇವರಿಗೆ ಗುಡಿ ಕೊಟ್ಟು ಏನು ಫಲ? ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುವವರಿಗೆ ಯಾವ ರಾಮನ ದಯೆಯೂ ಇರಲಾರದು. ತಾಯಿ ಚಾಮುಂಡೇಶ್ವರಿಯ ಆಶೀರ್ವಾದವೂ ಇರಲಾರದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ