AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ ಲೋಕಸಭಾ ಟಿಕೆಟ್​ಗಾಗಿ ತಿಕ್ಕಾಟ: ಸುಮಲತಾಗೆ ಮೈತ್ರಿ ಟಿಕೆಟ್ ಕೊಡಬೇಕಾ? ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಮಂಡ್ಯದಲ್ಲಿ ಆಯೋಜನೆ ಮಾಡಿದ್ದ ಕಾಂಗ್ರೆಸ್​ ಗ್ಯಾರಂಟಿ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿ, 2019ರಲ್ಲಿ ಸುಮಲತಾ ಗೆದ್ದಿದ್ದು ಕಾಂಗ್ರೆಸ್ ಮತಗಳಿಂದ. ಗೆದ್ದ ಮೇಲೆ ಸುಮಲತಾ ಬಿಜೆಪಿಗೆ ಸಹಕಾರ ಕೊಟ್ಟರು. ಈಗ ಟಿಕೆಟ್​ಗಾಗಿ ತಿಕ್ಕಾಟ ಶುರುವಾಗಿದೆ. ಯಾರೇ ಅಭ್ಯರ್ಥಿಯಾದರು ಕಾಂಗ್ರೆಸ್​​ನವರೇ ಗೆಲ್ಲೋದು. ಅಪವಿತ್ರ ಮೈತ್ರಿಯನ್ನ ಜನರು ಒಪ್ಪಲ್ಲ ಎಂದು ಹೇಳಿದ್ದಾರೆ.

ಮಂಡ್ಯ ಲೋಕಸಭಾ ಟಿಕೆಟ್​ಗಾಗಿ ತಿಕ್ಕಾಟ: ಸುಮಲತಾಗೆ ಮೈತ್ರಿ ಟಿಕೆಟ್ ಕೊಡಬೇಕಾ? ಸಿಎಂ ಸಿದ್ದರಾಮಯ್ಯ ಪ್ರಶ್ನೆ
ಸಿದ್ದರಾಮಯ್ಯ, ಸುಮಲತಾ
ಪ್ರಶಾಂತ್​ ಬಿ.
| Edited By: |

Updated on: Mar 10, 2024 | 3:21 PM

Share

ಮಂಡ್ಯ, ಮಾರ್ಚ್​ 10: ಸಂಸದೆ ಸುಮಲತಾ ಬಿಜೆಪಿಯಿಂದ ಗೆದ್ದಿದ್ದಲ್ಲ, ಕಾಂಗ್ರೆಸ್ ಓಟ್​ನಿಂದ ಅವರು ಗೆದ್ದಿದ್ದು. ಈಗ ಬಿಜೆಪಿ-ಜೆಡಿಎಸ್ ನಡುವೆ ತಿಕ್ಕಾಟ ಶುರುವಾಗಿದೆ. ಸುಮಲತಾಗೆ ಮೈತ್ರಿ ಟಿಕೆಟ್ ಕೊಡಬೇಕಾ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಪ್ರಶ್ನೆ ಮಾಡಿದ್ದಾರೆ. ಗ್ಯಾರಂಟಿ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದ ಅವರು, ಜೆಡಿಎಸ್​ಗೆ ಟಿಕೆಟ್ ಕೊಡಬೇಕಾ ಅಂತಾ ತಿಕ್ಕಾಟ ಶುರುವಾಗಿದೆ. ಯಾರಿಗೆ ಕೊಟ್ಟರೂ ಈ ಬಾರಿ ಬಿಜೆಪಿ-ಜೆಡಿಎಸ್ ಗೆಲ್ಲಲ್ಲ. ಅಪವಿತ್ರ ಮೈತ್ರಿಯನ್ನ ಜನರು ಒಪ್ಪಲ್ಲ. ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರರನ್ನ ಗೆಲ್ಲಿಸಿ ಎಂದು ಮನವಿ ಮಾಡಿದ್ದಾರೆ.

ಬಿಜೆಪಿ ಅಧಿಕಾರಕ್ಕೆ ಬರಬಾರದೆಂದು ಹೆಚ್.ಡಿ.ಕುಮಾರಸ್ವಾಮಿಗೆ ನಾವು ಅಧಿಕಾರ ಕೊಟ್ಟಿದ್ದೆವು. ಆದರೆ ತಾಜ್ ವೆಸ್ಟೆಂಡ್ ಹೋಟೆಲ್​ನಲ್ಲಿ ಕುಳಿತು ಅಧಿಕಾರ ಕಳೆದುಕೊಂಡರು. ಸಮ್ಮಿಶ್ರ ಸರ್ಕಾರ ಕೆಡವಿದ ಯಡಿಯೂರಪ್ಪ ಜತೆ ಕೈಜೋಡಿಸಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ಜೆಡಿಎಸ್​-ಬಿಜೆಪಿ ಅಪವಿತ್ರ ಮೈತ್ರಿ ಮಾಡಿಕೊಂಡಿವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ನುಡಿದಂತೆ ನಡೆದವರನ್ನು ಬೆಂಬಲಿಸಿದರೆ ಅಭಿವೃದ್ಧಿ ಆಗುತ್ತೆ. ಕೊಟ್ಟ ಮಾತಿನಂತೆ ನಡೆಯುವವರನ್ನು ಬೆಂಬಲಿಸಬೇಕು. ನಾವು ಪ್ರಮುಖವಾಗಿ 5 ಗ್ಯಾರಂಟಿಗಳನ್ನು ಕೊಟ್ಟಿದ್ದೆವು. ಅಧಿಕಾರಕ್ಕೆ ಬಂದ ತಕ್ಷಣವೇ ಅನುಷ್ಠಾನಗೊಳಿಸಿದ್ದೇವೆ. ಪ್ರತಿನಿತ್ಯ 50-60 ಲಕ್ಷ ಮಹಿಳೆಯರು ಫ್ರೀ ಪ್ರಯಾಣ ಮಾಡುತ್ತಿದ್ದಾರೆ. ನಾನು ಈ ಹಿಂದೆ 7 ಕೆಜಿ ಅಕ್ಕಿ ಫ್ರೀಯಾಗಿ ಕೊಡುತ್ತಿದ್ದೆ ಎಂದಿದ್ದಾರೆ.

ಮೈಶುಗರ್ ಕಾರ್ಖಾನೆ ನಷ್ಟದಲ್ಲಿ ಇದೆ ಎಂದು ಚಲುವರಾಯಸ್ವಾಮಿ ಹೇಳಿದ್ದರು. ಕೂಡಲೇ 50 ಕೋಟಿ ರೂ. ಬಿಡುಗಡೆ ಮಾಡಿದೆ. ಅವರು 25 ಕೋಟಿ ರೂ. ಕೇಳಿದ್ದರು. ನಾನು 50 ಕೋಟಿ ರೂ. ನೀಡಿದೆ. ಹೊಸ ಕಾರ್ಖಾನೆ ಮಾಡಲು ಘೋಷಣೆ ಮಾಡಿದ್ದೇನೆ. ಮಣ್ಣಿನ ಮಕ್ಕಳು ಇದೇಲ್ಲಾ ಮಾಡಿದ್ರಾ? ಏನು ಮಾಡದೇ ಇದ್ದರು ಅವರು ಮಣ್ಣಿನ ಮಕ್ಕಳಾ ಎಂದು ಜೆಡಿಎಸ್‌‌ ನಾಯಕರಿಗೆ ಟಾಂಗ್ ನೀಡಿದರು.

ಇದನ್ನೂ ಓದಿ: ಸಂಸದ ಪ್ರತಾಪ್ ಸಿಂಹಗೆ ಟಿಕೆಟ್ ಕೈ ತಪ್ಪುತ್ತದೆ ಎಂಬುವುದು ಊಹಾಪೋಹ: ಪ್ರಹ್ಲಾದ್​ ಜೋಶಿ

ಮಂಡ್ಯ ಗಂಡು ಮೆಟ್ಟಿನ ನೆಲ ಎಂದು ಚಲುವರಾಯಸ್ವಾಮಿಗೆ ಕೃಷಿ ಸಚಿವ ಸ್ಥಾನ ನೀಡಿದ್ದೇವೆ. ಚಲುವರಾಯಸ್ವಾಮಿ ಮೇಲೆ ರೈತರ ಮಕ್ಕಳು ಗೂಬೆ ಕೂರಿಸಲು ಹೋದರು. ಆದರೆ ಅದೇನು ಸಹ ಆಗಲಿಲ್ಲ. ರಾಜ್ಯದಲ್ಲಿ ಬರ ನಿರ್ವಹಣೆಗೆ ನಾವು ಕೆಲಸ ಮಾಡುತ್ತಿದ್ದೇವೆ. ಬಿಜೆಪಿಯವರ ಮೇಲೆ ಇದ್ದಕ್ಕಿದ್ದಂತೆ ಜೆಡಿಎಸ್‌ ಅವರಿಗೆ ಪ್ರೀತಿ ಬಂದಿದೆ. ಬಿಜೆಪಿ ಅವರು ಹೇಳುತ್ತಾರೆ ಜೆಡಿಎಸ್‌ ಅವರು ತಾಳ ಹಾಕುತ್ತಾರೆ. ನಮ್ಮ ಗ್ಯಾರಂಟಿ ಬಗ್ಗೆ ಬಿಜೆಪಿ ಟೀಕೆ ಮಾಡುತ್ತಾರೆ. ಜೆಡಿಎಸ್‌ ಅವರು ಚಪ್ಪಾಳೆ ತಟ್ಟುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು