AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈವರೆಗೆ ಯಾರೂ ಮಾಡದ ದಾಖಲೆ ಬರೆಯಲು ಸಿಎಂ ಸಿದ್ದರಾಮಯ್ಯ ಸಿದ್ಧ!

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜೂನ್ 30 ರಂದು ಕೆಆರ್‍ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದು, ಆ ಮೂಲಕ ಹೊಸದೊಂದು ದಾಖಲೆ ಬರೆಯಲಿದ್ದಾರೆ. ಹಾಗಾದರೆ ಏನದು ದಾಖಲೆ? ಸಿದ್ದರಾಮಯ್ಯಗೆ ಇಂಥದ್ದೊಂದು ಅವಕಾಶ ದೊರೆತಿದ್ದು ಹೇಗೆ? ಕೆಆರ್​ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸುವ ಪದ್ಧತಿ ಶುರುವಾಗಿದ್ದು ಯಾವಾಗ? ಎಲ್ಲ ವಿವರಗಳು ಇಲ್ಲಿವೆ.

ಈವರೆಗೆ ಯಾರೂ ಮಾಡದ ದಾಖಲೆ ಬರೆಯಲು ಸಿಎಂ ಸಿದ್ದರಾಮಯ್ಯ ಸಿದ್ಧ!
ಕೆಆರ್​ಎಸ್ ಡ್ಯಾಂ ಹಾಗೂ ಸಿದ್ದರಾಮಯ್ಯ
Ganapathi Sharma
|

Updated on: Jun 28, 2025 | 3:05 PM

Share

ಬೆಂಗಳೂರು, ಜೂನ್ 28: ಕರ್ನಾಟಕದಲ್ಲಿ ಅತಿ ಹೆಚ್ಚು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದವರಲ್ಲಿ ಒಬ್ಬರಾಗಿರುವ ಸಿಎಂ ಸಿದ್ದರಾಮಯ್ಯಗೆ (Siddaramaiah) ಇದೀಗ ಹೊಸದೊಂದು ದಾಖಲೆ ಬರೆಯುವ ಸುವರ್ಣ ಅವಕಾಶ ಒದಗಿ ಬಂದಿದೆ. ಅದನ್ನು ಬಳಸಿಕೊಳ್ಳಲಿರುವ ಅವರು ವಿಶಿಷ್ಟ ದಾಖಲೆಯನ್ನು ತಮ್ಮ ಹೆಸರಿಗೆ ಮಾಡಿಕೊಳ್ಳಲಿದ್ದಾರೆ. ಅಂದಹಾಗೆ ಆ ದಾಖಲೆ ಯಾವುದು? ಯಾಕೆ ಸಿದ್ದರಾಮಯ್ಯಗೆ ಈ ಅವಕಾಶ ಒದಗಿ ಬಂತು? ಹೌದು, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜ ಸಾಗರ ಜಲಾಶಯಕ್ಕೆ (KRS Dam) ಇದೇ ಮೊದಲ ಬಾರಿಗೆ ಮುಖ್ಯಮಂತ್ರಿಯೊಬ್ಬರು ಜೂನ್ ತಿಂಗಳಲ್ಲಿಯೇ ಬಾಗಿನ ಅರ್ಪಿಸಲಿದ್ದಾರೆ. ಇದಕ್ಕೆ ಕಾರಣ ಅವಧಿಪೂರ್ವ ಮುಂಗಾರು ಮಳೆ ಹಾಗೂ ಕಾವೇರಿ ಜಲಾನಯನ ಪ್ರದೇಶದಲ್ಲಿ ಕಳೆದೊಂದು ತಿಂಗಳಿನಿಂದ ಭಾರಿ ಮಳೆಯಾಗುತ್ತಿರುವುದು.

ಜೂನ್ 30ರಂದು, ಅಂದರೆ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಆರ್​ಎಸ್ ಡ್ಯಾಂಗೆ ಬಾಗಿನ ಅರ್ಪಿಸಲಿದ್ದಾರೆ. ಈ ಬಗ್ಗೆ ಈಗಾಗಲೇ ಕೆಆರ್​ಎಸ್ ಡ್ಯಾಂ ಆಡಳಿತ ಮತ್ತು ಮುಖ್ಯಮಂತ್ರಿಗಳ ಕಚೇರಿ ಮಾಹಿತಿ ನೀಡಿವೆ.

ಜೂನ್ ತಿಂಗಳಲ್ಲೇ ಭರ್ತಿಯಾದ ಕೆಆರ್​ಎಸ್ ಡ್ಯಾಂ

ಕೆಆರ್​ಎಸ್ ಡ್ಯಾಂಸಾಮಾನ್ಯವಾಗಿ ಜುಲೈ ಅಥವಾ ಆಗಸ್ಟ್ ತಿಂಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗುತ್ತದೆ. ಆ ನಂತರ ಮುಖ್ಯಮಂತ್ರಿಗಳು ಬಾಗಿನ ಅರ್ಪಿಸುತ್ತಾರೆ. ಆದರೆ, ಈ ವರ್ಷ ಜೂನ್ ಕೊನೆಯ ವಾರದಲ್ಲೇ ಡ್ಯಾಂ ಭರ್ತಿಯಾಗಿದ್ದು, ಸಿದ್ದರಾಮಯ್ಯನವರಿಗೆ ಹೊಸ ಅವಕಾಶ ದೊರೆತಿದೆ.

ಇದನ್ನೂ ಓದಿ
Image
ಹುಲಿಗಳ ಅಸಹಜ ಸಾವು: ಐವರನ್ನು ವಶಕ್ಕೆ ಪಡೆದ ಅರಣ್ಯ ಇಲಾಖೆ
Image
ಕೆಆರ್​ಎಸ್ ಡ್ಯಾಂ ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್​ನಲ್ಲೇ ಭರ್ತಿ!
Image
3ನೇ ಪತ್ನಿಯ ಕೊಲೆ ಮಾಡಿ ಬಸ್ಸಲ್ಲಿ ಲಗೇಜ್ ಎಂದು‌ ಕಳುಹಿಸಿದ್ದವ ಅರೆಸ್ಟ್
Image
ಕರ್ನಾಟಕದ ಪರೀಕ್ಷಾ ಮಾದರಿ ಅನುಸರಿಸಲು ನಿರ್ಧರಿಸಿದ ಸಿಬಿಎಸ್​ಇ!

ಕೆಆರ್​ಎಸ್ ಡ್ಯಾಂ ನೀರಿನ ಮಟ್ಟದ ವಿವರ

ಶನಿವಾರ ಬೆಳಗ್ಗಿನ ಮಾಹಿತಿಯ ಪ್ರಕಾರ, ಕೆಆರ್​​ಎಸ್ ಡ್ಯಾಂ 123.25 ಅಡಿ ಭರ್ತಿಯಾಗಿದೆ. ಅಂದರೆ, 124.80 ಅಡಿ ಗರಿಷ್ಠ ಸಾಮರ್ಥ್ಯವಿರುವ ಕೆಆರ್​ಎಸ್ ಜಲಾಶಯ ಪೂರ್ಣ ಭರ್ತಿಯಾಗಲು ಇನ್ನು ಒಂದು ಅಡಿ ಅಷ್ಟೇ ಬಾಕಿ ಇದೆ. ಅದು ಇಂದೇ ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗಲಿದೆ. ಇದರೊಂದಿಗೆ, 93 ವರ್ಷಗಳ ಬಳಿಕ ಇದೇ ಮೊದಲ ಬಾರಿ ಜೂನ್​ ತಿಂಗಳಲ್ಲೇ ಕೆಆರ್​ಎಸ್ ಡ್ಯಾಂ ಭರ್ತಿಯಾದಂತಾಗಲಿದೆ.

ಕೆಆರ್​ಎಸ್​ಗೆ ಮುಖ್ಯಮಂತ್ರಿಯಿಂದ ಬಾಗಿನ ಅರ್ಪಣೆ ಶುರುವಾಗಿದ್ದು ಯಾವಾಗ?

1979 ರಿಂದ ಕೆಆರ್​ಎಸ್ ಡ್ಯಾಂನಲ್ಲಿ ಕಾವೇರಿಗೆ ಬಾಗಿನ ಅರ್ಪಿಸುವ ಪದ್ದತಿ ಆರಂಭವಾಗಿತ್ತು. ಅಂದಿನ ಮುಖ್ಯಮಂತ್ರಿ ಡಿ. ದೇವರಾಜ ಅರಸ್ ಅವರು ಬಾಗಿನ ಅರ್ಪಿಸುವ ಮೂಲಕ ಆ ಪದ್ದಗೆ ನಾಂದಿ ಹಾಡಿದ್ದರು. ಆದರೆ, ಅಂದಿನಿಂದ ಇಂದಿನವರೆಗೂ ಯಾವೊಬ್ಬ ಮುಖ್ಯಮಂತ್ರಿಗೂ ಜೂನ್ ತಿಂಗಳಲ್ಲೇ ಬಾಗಿನ ಅರ್ಪಿಸುವ ಅವಕಾಶ ಒದಗಿ ಬಂದಿಲ್ಲ.

ಇದನ್ನೂ ಓದಿ: ಕೆಆರ್​ಎಸ್ ಡ್ಯಾಂ ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್​ನಲ್ಲೇ ಭರ್ತಿ!

ಇದೀಗ ಸೋಮವಾರ ಸಿಎಂ ಸಿದ್ದರಾಮಯ್ಯ ಕೆಆರ್​​ಎಸ್​ ಡ್ಯಾಂಗೆ ಬಾಗಿನ ಅರ್ಪಿಸಲಿದ್ದು, ಅದಕ್ಕೆ ಸಿದ್ಧತೆಗಳು ನಡೆಯುತ್ತಿವೆ. ಡ್ಯಾಂ ಅವಧಿಗೂ ಮುನ್ನವೇ ತುಂಬುತ್ತಿರುವುದು ರೈತರ ಮುಖದಲ್ಲೂ ಮಂದಹಾಸ ಮೂಡಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
7 ರನ್​ಗಳ ಅವಶ್ಯಕತೆ: ಪಂದ್ಯದ ಫಲಿತಾಂಶ ಬದಲಿಸಿದ 2 ಅದ್ಭುತ ಕ್ಯಾಚ್​ಗಳು
7 ರನ್​ಗಳ ಅವಶ್ಯಕತೆ: ಪಂದ್ಯದ ಫಲಿತಾಂಶ ಬದಲಿಸಿದ 2 ಅದ್ಭುತ ಕ್ಯಾಚ್​ಗಳು
ಗೂಗಲ್ ಮ್ಯಾಪ್ ನಂಬಿ ಹೋದ ಕಾರು ಸೇತುವೆ ಮೇಲಿಂದ ಬಿತ್ತು, ಮುಂದೇನಾಯ್ತು?
ಗೂಗಲ್ ಮ್ಯಾಪ್ ನಂಬಿ ಹೋದ ಕಾರು ಸೇತುವೆ ಮೇಲಿಂದ ಬಿತ್ತು, ಮುಂದೇನಾಯ್ತು?
ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ, ಆರು ಮಂದಿ ಸಾವು
ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ, ಆರು ಮಂದಿ ಸಾವು
ಮನೆ ಕೌಂಪೌಂಡ್ ಹಾರಿ ಬಂದು ನಾಯಿ ಹೊತ್ತೊಯ್ದ ಚಿರತೆ
ಮನೆ ಕೌಂಪೌಂಡ್ ಹಾರಿ ಬಂದು ನಾಯಿ ಹೊತ್ತೊಯ್ದ ಚಿರತೆ
ಟೇಕ್ ಆಫ್ ಆಗುವಾಗ ಅಮೆರಿಕನ್ ಏರ್​​ಲೈನ್ಸ್ ವಿಮಾನದಲ್ಲಿ ಬೆಂಕಿ
ಟೇಕ್ ಆಫ್ ಆಗುವಾಗ ಅಮೆರಿಕನ್ ಏರ್​​ಲೈನ್ಸ್ ವಿಮಾನದಲ್ಲಿ ಬೆಂಕಿ