ಅಗಲಿದ ಡಿಬಿ ಚಂದ್ರೇಗೌಡರಿಗೆ ಅಂತಿಮ ನಮನ ಸಲ್ಲಿಸುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾವುಕರಾದರು

ಅರುಣ್​ ಕುಮಾರ್​ ಬೆಳ್ಳಿ

Updated on: Nov 08, 2023 | 3:06 PM

ಪೂಜೆ ಮಾಡುವ ಮೊದಲು ಮತ್ತು ಮಾಡುವಾಗಲೂ ಸಿದ್ದರಾಮಯ್ಯ ಗತಿಸಿದ ನಾಯಕನ ಮುಖವನ್ನು ತದೇಕದೃಷ್ಟಿಯಿಂದ ನೋಡುತ್ತಾರೆ. ಸಿದ್ದರಾಮಯ್ಯ ಮತ್ತು ಚಂದ್ರೇಗೌಡ ಸಮಕಾಲೀನರಾದರೂ ದಿವಂಗತರು ಮುಖ್ಯಮಂತ್ರಿಯವರಿಗಿಂತ ಸುಮಾರು ಹತ್ತು ವರ್ಷಗಳಷ್ಟು ದೊಡ್ಡವರು.

ಚಿಕ್ಕಮಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಇಂದು ಚಿಕ್ಕಮಗಳೂರಿಗೆ ತೆರಳಿ ನಿನ್ನೆ ಬೆಳಗಿನ ಜಾವ ನಿಧನರಾದ ಡಿಬಿ ಚಂದ್ರೇಗೌಡ (DB Chandre Gowda) ಅವರಿಗೆ ಅಂತಿಮ ನಮನ ಸಲ್ಲಿಸಿದರು. ಜನತಾ ಪಾರ್ಟಿಯ (Janata Party) ಸದಸ್ಯರಾಗಿದ್ದಾಗ ಸಿದ್ದರಾಮಯ್ಯ ಮತ್ತು ಚಂದ್ರೇಗೌಡ ನಡುವೆ ಬೆಳೆದ ಗೆಳೆತನ, ಸಲುಗೆ, ಆತ್ಮೀಯತೆ ಕೊನೆಯವರೆಗೂ ಇತ್ತು. ಚಂದ್ರೇಗೌಡರ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸುವಾಗ ಸಿದ್ದರಾಮಯ್ಯ ಭಾವುಕರಾಗುವುದನ್ನು ದೃಶ್ಯಗಳಲ್ಲಿ ಗಮನಿಸಬಹುದು. ಚಂದ್ರೇಗೌಡರ ದೇಹವಿದ್ದ ಪೆಟ್ಟಿಗೆ ಮೇಲೆ ಹೂಮಾಲೆ ಹಾಕಿದ ಬಳಿಕ ಸಿದ್ದರಾಮಯ್ಯ ಪಾರ್ಥೀವ ಶರೀರಕ್ಕೆ ಪೂಜೆ ಮಾಡುತ್ತಾರೆ. ಪೂಜೆ ಮಾಡುವ ಮೊದಲು ಮತ್ತು ಮಾಡುವಾಗಲೂ ಸಿದ್ದರಾಮಯ್ಯ ಗತಿಸಿದ ನಾಯಕನ ಮುಖವನ್ನು ತದೇಕದೃಷ್ಟಿಯಿಂದ ನೋಡುತ್ತಾರೆ. ಸಿದ್ದರಾಮಯ್ಯ ಮತ್ತು ಚಂದ್ರೇಗೌಡ ಸಮಕಾಲೀನರಾದರೂ ದಿವಂಗತರು ಮುಖ್ಯಮಂತ್ರಿಯವರಿಗಿಂತ ಸುಮಾರು ಹತ್ತು ವರ್ಷಗಳಷ್ಟು ದೊಡ್ಡವರು. ಅಂತಿಮ ನಮನ ಸಲ್ಲಿಸಿದ ಬಳಿಕ ಸಿದ್ದರಾಮಯ್ಯ ಚಂದ್ರೇಗೌಡರ ಪತ್ನಿ, ಪುತ್ರಿಯರು ಹಾಗೂ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.