AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏನು ಗೂಂಡಾಗಿರಿ ಮಾಡ್ತೀರಾ ಎಂದ ಸಿಎಂ: ಸದನದಲ್ಲಿ ಭುಗಿಲೆದ್ದ ‘ಗೂಂಡಾಗಿರಿ’ ಗದ್ದಲ!

ವಿಧಾನಪರಿಷತ್​ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ಸಿಎಂ ಸಿದ್ದರಾಮಯ್ಯ ಉತ್ತರಿಸುವಾಗ ಗದಲ್ಲ ಉಂಟಾಗಿದೆ. ಈ ವೇಳೆ ಗರಂ ಆದ ಸಿಎಂ ಸಿದ್ದರಾಮಯ್ಯ, ಏನು ಗೂಂಡಾಗಿರಿ ಮಾಡ್ತೀರಾ? ನಾನು ಯಾವುದಕ್ಕೂ ಹೆದರಲ್ಲ, 7 ಕೋಟಿ ಜನರು ನೋಡ್ತಾ ಇದ್ದಾರೆ. ಜನ ಇವರಿಗೆ ಛೀ.. ಥೂ... ಅಂತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ಮಾಡಿದ್ದಾರೆ.

Sunil MH
| Edited By: |

Updated on: Feb 15, 2024 | 3:17 PM

Share

ವಿಧಾನಪರಿಷತ್, ಫೆಬ್ರವರಿ 15: ಏನು ಗೂಂಡಾಗಿರಿ ಮಾಡ್ತೀರಾ? ನಾನು ಯಾವುದಕ್ಕೂ ಹೆದರಲ್ಲ, 7 ಕೋಟಿ ಜನರು ನೋಡ್ತಾ ಇದ್ದಾರೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ವಿಧಾನಪರಿಷತ್​ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ಉತ್ತರಿಸುವಾಗ ಸಿಎಂ ಸಿದ್ದರಾಮಯ್ಯ ಗೂಂಡಾಗಿರಿ ಪದವನ್ನು ಬಳಕೆ ಮಾಡಿದ್ದಾರೆ. ಎದ್ದು ನಿಂತಿದ್ದಾರೆ ಅಂದರೆ ಅವರು ತಪ್ಪು ಮಾಡಿದ್ದಾರೆ ಅಂತಾ ಅರ್ಥ ಎಂದಿದ್ದಾರೆ. ಈ ವೇಳೆ ಮಧ್ಯೆ ಪ್ರವೇಶಿಸಿದ ಕೋಟ ಶ್ರೀನಿವಾಸ ಪೂಜಾರಿ, ವಿಧಾನಸೌಧದಲ್ಲಿ ತೊಡೆ ತಟ್ಟಿದ್ದು ನೀವಾ, ನಾವಾ ಎಂದು ಸಿದ್ದರಾಮಯ್ಯಗೆ ಪ್ರಶ್ನೆ ಮಾಡಿದ್ದಾರೆ. ನಮಗೆ ಗೂಂಡಾಗಿರಿ ಅಂತೀರಲ್ಲ, ಆಗ ತೊಡೆ ತಟ್ಟಿದ್ದು ಯಾರು? ನೀವು ಗೂಂಡಾಗಳು, ನಿಮ್ಮ ಗೂಂಡಾಗಿರಿಗೆ ನಾವು ಹೆದರುವುದಿಲ್ಲ ಎಂದರು. ಜನ ಇವರಿಗೆ ಛೀ.. ಥೂ… ಅಂತಿದ್ದಾರೆ ಎಂದ ಸಿದ್ದರಾಮಯ್ಯ, ಪರಿಷತ್​ನಲ್ಲಿ ವಿಪಕ್ಷ ಸದಸ್ಯರು ಗೂಂಡಾ ಸರ್ಕಾರಕ್ಕೆ ಧಿಕ್ಕಾರ ಕೂಗಿದ್ದಾರೆ.

ಫ್ಯಾಕ್ಟ್ ಈಸ್ ಫ್ಯಾಕ್ಟ್ ಎಂದ ಸಿಎಂ

ನಾನು ಫ್ಯಾಕ್ಟ್ ಹೇಳುತ್ತಿದ್ದೇನೆ, ಫ್ಯಾಕ್ಟ್ ಈಸ್ ಫ್ಯಾಕ್ಟ್. ವಿಪಕ್ಷಗಳ ಈ ನಡೆ ಸಹಿಸಲ್ಲ, ನಾನು ಉತ್ತರ ಕೊಡಲ್ಲ. ಪ್ರಶ್ನೆ ಕೇಳಿದವರು ಸುಮ್ಮನಿರುವಾಗ ವಿಪಕ್ಷದ್ದವರದ್ದೇನು ಮಾತು. ಈ ವೇಳೆ ಸಭಾಪತಿ ಬಸವರಾಜ ಹೊರಟ್ಟಿ ಸದಸ್ಯರ ಮನವೊಲಿಕೆ ಮಾಡಿದರು. ನಮ್ಮ ಫ್ಯಾಕ್ಟ್ ಉತ್ತರ ಸಹಿಸಲಾಗ್ತಿಲ್ಲ, ನೀವು ಕೂಗಾಡಿದರೂ ಅದು ಸತ್ಯವೇ ಎಂದಿದ್ದಾರೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ: ಸಿಎಂ ಸಿದ್ದರಾಮಯ್ಯ ಕಟ್ಟಿಹಾಕಲು ಬಿಜೆಪಿ ತಂತ್ರ, ಮೈಸೂರಿನಲ್ಲಿ ಚುರುಕಾದ ಬಿಜೆಪಿ

ನಿರ್ಮಲಾ ಸೀತಾರಾಮನ್​ ಕೂಡ ವಿರೋಧಿ ಧೋರಣೆ ತೋರಿಸಿದ್ದಾರೆ. ಇದೇ ವೇಳೆ ಸಿಎಂ ಉತ್ತರ ಬೇಡ ಎಂದು ಬಿಜೆಪಿ ಸದಸ್ಯರ ಘೋಷಣೆ ಮಾಡಿದರು. ಬಿಜೆಪಿ ಸದಸ್ಯರ ಘೋಷಣೆ ನಡುವೆ ಸಿಎಂ ಉತ್ತರ ಮುಂದುವರಿಕೆ ಆಗಿದೆ. ಅವರೇ ಬಜೆಟ್ ಒಪ್ಪಿಕೊಂಡಿದ್ದ 5300 ಕೋಟಿ ರೂ. ಬಿಡುಗಡೆ ಮಾಡಿಲ್ಲ. ಆದರೆ ನಾವು 1 ಸಾವಿರ ಕೋಟಿ ರೂ. ಹಣ ಬಿಡುಗಡೆ ಮಾಡಿದ್ದೇವೆ ಎಂದರು.

ಇದನ್ನೂ ಓದಿ: ರಾಜ್ಯಸಭೆ ಚುನಾವಣೆ: ಬಿಜೆಪಿ ಸಲಹೆ ಮೇರೆಗೆ ಕುಪೇಂದ್ರ ರೆಡ್ಡಿ ಕಣಕ್ಕೆ, ಕಾಂಗ್ರೆಸ್​ಗೆ ಅಡ್ಡಮತದಾನದ ಆತಂಕ

ಯೋಜನೆ ಮೇಲಿನ ಕಾಳಜಿಯಿಂದ 1 ಸಾವಿರ ಕೋಟಿ ರೂ. ಹಣ ಬಿಡುಗಡೆ ಮಾಡಿದ್ದೇವೆ. ಕೇಂದ್ರ ಸರ್ಕಾರ ರಾಜ್ಯಕ್ಕೆ 1 ಸಾವಿರ ಕೋಟಿ ರೂ. ಹಣ ದ್ರೋಹ ಮಾಡಿದೆ. ಇದಕ್ಕೆ ಹಣಕಾಸು ಸಚಿವರು ಸಹಕಾರ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಿಎಂ ವಿಷಾದಕ್ಕೆ ವಿಪಕ್ಷಗಳ ಬಿಗಿ ಪಟ್ಟು 

ಸಿಎಂ ಗೂಂಡಾ ಹೇಳಿಕೆ ಖಂಡಿಸಿ ಬಿಜೆಪಿ ಸದಸ್ಯರಿಂದ ಸಭಾತ್ಯಾಗ ಮಾಡಲಾಗಿದೆ. ಸಿದ್ದರಾಮಯ್ಯ ವಿಷಾದ ವ್ಯಕ್ತಪಡಿಸಲೇ ಬೇಕು ಎಂದು ವಿಪಕ್ಷ ಬಿಗಿ ಪಟ್ಟು ಹಿಡಿದಿದೆ. ಸರ್ಕಾರ ಹೀಗೆ ಮುಂದುವರೆದರೆ ನಾವು ಬಾಯ್ಕಾಟ್ ಮಾಡುತ್ತೇವೆ ಎಂದು ಬಿಜೆಪಿ ಸದಸ್ಯರು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ