AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಪತ್ನಿ ಪಾರ್ವತಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಸದ್ಯ ರಾಜ್ಯ ಸಚಿವ ಸಂಪುಟ ಪುನಾರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹಾಗೂ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಸಂಬಂಧ ಕಾಂಗ್ರೆಸ್​​ನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಟೆನ್ಷನ್​​ನಲ್ಲಿದ್ದು, ಹೈಕಮಾಂಡ್ ಜೊತೆ ಚರ್ಚಿಸಲು ದೆಹಲಿಗೆ ತೆರಳಿದ್ದಾರೆ. ಇದರ ನಡುವೆ ಸಿದ್ದರಾಮಯ್ಯನವರ ಪತ್ನಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಿದ್ದರಾಮಯ್ಯ ಪತ್ನಿ ಪಾರ್ವತಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು
Parvathi And Siddaramaiah
ರಮೇಶ್ ಬಿ. ಜವಳಗೇರಾ
|

Updated on:Nov 17, 2025 | 10:24 PM

Share

ಬೆಂಗಳೂರು, (ನವೆಂಬರ್ 17): ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah)  ಪತ್ನಿ ಪಾರ್ವತಿ (Parvathi) ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಶ್ವಾಸಕೋಶದ ಸಮಸ್ಯೆಯಿಂದಾಗಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಇದರಿಂದ ಇಂದು (ನವೆಂಬರ್ 17) ಬೆಂಗಳೂರಿನ ಶೇಷಾದ್ರಿಪುರಂ‌‌ನ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತಜ್ಞ ವೈದ್ಯರ ತಂಡದಿಂದ ಪಾರ್ವತಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ  ಎಂದು ತಿಳಿದಬಂದಿದೆ.

ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿರುವ ಪಾರ್ವತಿ ಅವರಿಗೆ ಡಾ ಬಿಸಿ ಶ್ರೀನಿವಾಸ್ ನೇತೃತ್ವದ ವೈದ್ಯರ ತಂಡ ಐಸಿಯುನಲ್ಲಿ ಚಿಕಿತ್ಸೆ ನೀಡುತ್ತಿದ್ದು, ಪಾರ್ವತಿ ಜೊತೆಗೆ ಪುತ್ರ, ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಇದ್ದಾರೆ. ಇನ್ನು ಹೈಕಮಾಂಡ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಸಿಎಂ ಸಿದ್ದರಾಮಯ್ಯ ನವದೆಹಲಿಗೆ ತೆರಳಿದ್ದು, ಅಲ್ಲಿಂದಲ್ಲೇ ವೈದ್ಯರಿಗೆ ಪೋನ್ ಕರೆ ಮಾಡಿ ಪತ್ನಿ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಪತ್ನಿಗೆ ಐಸಿಯುನಲ್ಲಿ ಮುಂದುವರೆದ ಚಿಕಿತ್ಸೆ: ಪಾರ್ವತಿಯವರಿಗೆ ಆಗಿದ್ದೇನು?

ಇನ್ನು ತಾಯಿಯ ಆರೋಗ್ಯದ ಬಗ್ಗೆ ಪ್ರತಿಕ್ರಿಯಿಸಿರುವ ಪುತ್ರ ಯತೀಂದ್ರ, ಶ್ವಾಸಕೋಶದಲ್ಲಿ ನೀರು ತುಂಬಿದೆ. ಹಾಗಾಗಿ ಉಸಿರಾಟದ ಸಮಸ್ಯೆ ಉಂಟಾಗಿತ್ತು. ಇದರಿಂದ ವೈದ್ಯರು ಸಾಕಷ್ಟು ಪರೀಕ್ಷೆ ಮಾಡಿ ಐಸಿಯುನಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ನಾಳೆವರೆಗೂ (ನವೆಂಬರ್ 18) ಆಸ್ಪತ್ರೆಯಲ್ಲೇ ಅಡ್ಮಿಟ್ ಇರಲು ವೈದ್ಯರು ತಿಳಿಸಿದ್ದಾರೆ. ಸಿಎಂ ಸಹ ಆಸ್ಪತ್ರೆಗೆ ಬರಲಿದ್ದಾರೆ. ನಾನು ಇಲ್ಲೇ ಇರುತ್ತೇನೆ ಎಂದು ಮಾಹಿತಿ ನೀಡಿದರು.

ಪಾರ್ವತಿ ಅವರ ಆನಾರೋಗ್ಯದ ಸುದ್ದಿ ತಿಳಿಯುತ್ತಿದ್ದಂತೆಯೇ ಅಪೋಲೊ ಆಸ್ಪತ್ರೆಗೆ ಶಾಸಕ ಶಿವಲಿಂಗೇಗೌಡ ದೌಡಾಯಿಸಿದ್ದಾರೆ. ಆದ್ರೆ, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿರುವುದರಿಂದ ಪಾರ್ವತಿ ಅವರನ್ನು ನೋಡಲು ಯಾರನ್ನೂ ಒಳಗಡೆ ಬಿಡುತ್ತಿಲ್ಲ. ಹೀಗಾಗಿ ಶಿವಲಿಂಗೇಗೌಡ ಅವರು ಯತೀಂದ್ರ ಸಿದ್ದರಾಮಯ್ಯನವರಿಂದ ಆರೋಗ್ಯದ ಬಗ್ಗೆ ಮಾಹಿತಿ ಪಡೆದು ಆಸ್ಪತ್ರೆಯಿಂದ ತೆರಳಿದರು.

ಪಾರ್ವತಿ ಅವರು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದು ಬಹಳ ವಿರಳ. ಅವರು ಮೈಸೂರಿನ ಚಾಮುಂಡಿ ದೇವಸ್ಥಾನಕ್ಕೂ ಬಂದರೂ ಸಹ ಜನರ ಜೊತೆಯಲ್ಲೇ ಸಾಮಾನ್ಯ ಭಕ್ತರ ರೀತಿಯಲ್ಲೇ ಸರದಿ ಸಾಲಿನಲ್ಲಿ ಹೋಗಿರುವುದನ್ನು ನಾವು ಕಂಡಿದ್ದೇವೆ. ಅವರು ಕೊನೆಯ ಬಾರಿಗೆ ಮಾಧ್ಯಮಗಳ ಕ್ಯಾಮೆರಾ ಕಣ್ಣಿಗೆ ಬಿದ್ದಿದ್ದು ಹಾಸನಾಂಬೆ ದರ್ಶನಕ್ಕೆ ಹೋಗಿದ್ದ ವೇಳೆ.

Published On - 9:39 pm, Mon, 17 November 25

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ