AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾಗೆ 14 ಸೈಟ್ ವಾಪಸ್‌ ಪ್ರಕ್ರಿಯೆ ಪೂರ್ಣ: ಯಾರ ಹೆಸರಿಗೆ ವರ್ಗಾವಣೆಯಾಯ್ತು ವಿವಾದಿತ 14 ಸೈಟ್?

ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಂದ 14 ನಿವೇಶನ ಮುಡಾಗೆ ಹಿಂದಿರುಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾಗೆ 14 ನಿವೇಶನ ಹಿಂದಿರುಗಿಸುವ ಪ್ರಕ್ರಿಯೆ ಇಂದು ಪೂರ್ಣವಾಗಿದೆ. ಪಾರ್ವತಿಯವರಿಂದ ಪ್ರತಿ ಸೈಟ್​ಗೆ 1,000 ರೂ. ಅಂದರೆ 14 ನಿವೇಶನಕ್ಕೆ ಒಟ್ಟು 14 ಸಾವಿರ ರೂ. ಪಡೆದು ನಿವೇಶನವನ್ನು ವಾಪಸ್ ಪಡೆಯಲಾಗಿದೆ.

ಮುಡಾಗೆ 14 ಸೈಟ್ ವಾಪಸ್‌ ಪ್ರಕ್ರಿಯೆ ಪೂರ್ಣ: ಯಾರ ಹೆಸರಿಗೆ ವರ್ಗಾವಣೆಯಾಯ್ತು ವಿವಾದಿತ 14 ಸೈಟ್?
ಮುಡಾಗೆ 14 ಸೈಟ್ ವಾಪಸ್‌ ಪ್ರಕ್ರಿಯೆ ಪೂರ್ಣ: ಯಾರ ಹೆಸರಿಗೆ ವರ್ಗಾವಣೆಯಾಯ್ತು ವಿವಾದಿತ 14 ಸೈಟ್?
Follow us
ರಾಮ್​, ಮೈಸೂರು
| Updated By: ಗಂಗಾಧರ​ ಬ. ಸಾಬೋಜಿ

Updated on: Oct 03, 2024 | 3:22 PM

ಮೈಸೂರು, ಅಕ್ಟೋಬರ್​ 03: ಖುದ್ದು ಸಿಎಂ ಸಿದ್ದರಾಮಯ್ಯರ (Siddaramaiah) ಪತ್ನಿಯೇ ಮುಡಾ ಕಚೇರಿಗೆ ಬಂದು ಸೈಟ್ ವಾಪಸ್​ ಕೊಡೋದಾಗಿ ಮೊನ್ನೆ ಹೇಳಿದ್ದರು. ಇದಾಗುತ್ತಿದ್ದಂತೆಯೇ ತಕ್ಷಣವೇ ಸಿಎಂ ಪತ್ನಿಯ ಹೆಸರಿನಲ್ಲಿದ್ದ ಸೈಟ್​ಗಳು ಮುಡಾ ಪಾಲಾಗಿವೆ. ಇಂದು ಮುಡಾಗೆ 14 ನಿವೇಶನ ಹಿಂದಿರುಗಿಸುವ ಪ್ರಕ್ರಿಯೆ ಪೂರ್ಣವಾಗಿದೆ. ಮೈಸೂರಿನ ಟಿ.ಕೆ.ಲೇಔಟ್​ನ ಸಿದ್ದರಾಮಯ್ಯ ನಿವಾಸದಲ್ಲಿ ಅಧಿಕಾರಿಗಳು ಖಾಸಗಿ ನೋಂದಣಿ ಮಾಡಿಕೊಂಡಿದ್ದಾರೆ.

ಮುಡಾಗೆ ನಿವೇಶನ ವಾಪಸ್ ಆದ ದಾಖಲೆ ಟಿವಿ9ಗೆ ಲಭ್ಯವಾಗಿದೆ. ಪಾರ್ವತಿಯವರಿಂದ ಪ್ರತಿ ಸೈಟ್​ಗೆ 1,000 ರೂ. ಅಂದರೆ 14 ನಿವೇಶನಕ್ಕೆ ಒಟ್ಟು 14 ಸಾವಿರ ರೂ. ಪಡೆದು ನಿವೇಶನವನ್ನು ವಾಪಸ್ ಪಡೆಯಲಾಗಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಹೆಸರಿಗೆ ಸೈಟ್ ವರ್ಗಾವಣೆ ಮಾಡಲಾಗಿದೆ.

14 ಸೈಟ್​ಗಳ ಸಂಬಂಧ ಸಿಎಂ ವಿರುದ್ಧ ಸಾಕ್ಷಿ ನಾಶ ಆರೋಪ: ಇಡಿಗೆ ಪ್ರದೀಪ್​ ಕುಮಾರ್ ದೂರು

ಪಾರ್ವತಿ ಅವರಿಂದ 14 ನಿವೇಶನ ಮುಡಾಗೆ ವಾಪಸ್ಸ್​ ಬೆನ್ನಲ್ಲೇ ಈ ಮಧ್ಯೆ 14 ಸೈಟ್​ಗಳ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಕ್ಷ್ಯನಾಶದ ಆರೋಪ ಕೇಳಿಬಂದಿದೆ. ಈ​ ಬಗ್ಗೆ ತನಿಖೆ ನಡೆಸಿ ಸಂಬಂಧಪಟ್ಟವರನ್ನು ಬಂಧಿಸುವಂತೆ ಇಡಿಗೆ ಮುಡಾ ದೂರುದಾರರಲ್ಲೊಬ್ಬರಾದ ಪ್ರದೀಪ್​ ಕುಮಾರ್​ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಮುಡಾ ಕೇಸ್: ಸಿಎಂಗೆ ಭಯ ಹುಟ್ಟಿಸಿದ pmlaನ ಆ ಸೆಕ್ಷನ್ ಯಾವುದು ಗೊತ್ತಾ?

ಈ ಬಗ್ಗೆ ಬೆಂಗಳೂರಿನಲ್ಲಿ ಇಡಿ ಅಧಿಕಾರಿಗಳಿಗೆ ದೂರು ನೀಡಿರುವ ಪ್ರದೀಪ್​ ಕುಮಾರ್​​ ಯತೀಂದ್ರ ಸಿದ್ದರಾಮಯ್ಯ ಕೂಡ ಇದರಲ್ಲಿ ಪಾಲುದಾರರಾಗಿದ್ದಾರೆ. ಅಲ್ಲದೇ ಸೈಟ್​ ವಾಪಸ್​ ಪಡೆಯುವ ಮೂಲಕ ಸಾಕ್ಷ್ಯನಾಶ ಆಗಿದೆ. ಮುಡಾ ಅಧಿಕಾರಿಗಳನ್ನು ಬಳಸಿಕೊಂಡು ಸಾಕ್ಷ್ಯನಾಶ ಮಾಡಲಾಗುತ್ತಿದೆ. ಹೀಗಾಗಿ ಸಾಕ್ಷ್ಯನಾಶ ಪ್ರಕರಣ ದಾಖಲು ಮಾಡಬೇಕೆಂದು ಇಡಿಗೆ ಮನವಿ ಮಾಡಿದ್ದಾರೆ.

ಮುಡಾ ಆಯುಕ್ತರು ಪಾರ್ವತಿ ಮನೆಗೆ ಹೋಗಿ ಸೈಟ್ ವಾಪಸ್ ಪ್ರತಿಗೆ ಸಹಿ ಮಾಡಿಸಿಕೊಂಡು ಬಂದಿದ್ದಾರೆ. ಅಧಿಕಾರಿಗಳು ಆರೋಪಿಗಳ ಜೊತೆಗೆ ಸಾಕ್ಷಿ ನಾಶಕ್ಕೆ ಕೈಜೋಡಿಸಿದ್ದಾರೆ. ಹೀಗಾಗಿ ಮುಡಾ ಅಧಿಕಾರಿಗಳ ವಿರುದ್ಧವೂ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಮುಡಾ ಹಗರಣ: ಸೈಟ್ ವಾಪಸ್ ಕೊಟ್ಟರೆ ಸಿದ್ದರಾಮಯ್ಯ ಸಂಕಷ್ಟ ಕಡಿಮೆಯಾಗುತ್ತಾ? ಕಾನೂನು ತಜ್ಞರು ಹೇಳಿದ್ದಿಷ್ಟು

ಸಿಎಂ ಸಿದ್ದರಾಮಯ್ಯ ಕುಟುಂಬದಿಂದ ತಕ್ಷಣ 14 ಸೈಟ್​ಗಳನ್ನ ವಶಕ್ಕೆ ಪಡೆಯಬೇಕು. ದಾಖಲೆ ಬದಲಾವಣೆ ಮಾಡುತ್ತಿರುವ ಮುಡಾ ಆಯುಕ್ತರ ವಿರುದ್ಧ ಕ್ರಮವಾಗಬೇಕು. ಮುಡಾ ಆಯುಕ್ತರು, ಅಧಿಕಾರಿಗಳ ಮೇಲೆ ಸಿಎಂ ಪ್ರಭಾವ ಬೀರುತ್ತಿದ್ದಾರೆ. ಹಾಗಾಗಿ ಸಿಎಂ ಸೇರಿದಂತೆ ಮತ್ತಿತರರ ವಿರುದ್ಧ ಕೇಸ್ ದಾಖಲಿಸುವಂತೆ ಕ್ರಮಕ್ಕೆ‌ ಆಗ್ರಹಿಸಿದ್ದು, ದಾಖಲೆ ವಶಕ್ಕೆ ಪಡೆಯಲು ಲೋಕಾಯುಕ್ತ ಎಸ್​ಪಿಗೆ ಸೂಚಿಸುವಂತೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?
ನಂದಿನಿ ಸ್ಕೂಟರ್​ಗೆ ಗುದ್ದಿದ ಕಾರು ಓಡಿಸುತ್ತಿದ್ದ ಮಹಿಳೆ ಕುಡಿದಿದ್ದಳೇ?
ನಂದಿನಿ ಸ್ಕೂಟರ್​ಗೆ ಗುದ್ದಿದ ಕಾರು ಓಡಿಸುತ್ತಿದ್ದ ಮಹಿಳೆ ಕುಡಿದಿದ್ದಳೇ?