AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆಯಿಂದ ಮೂರು ದಿನ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಲಭ್ಯವಿರಲ್ಲ

ನಾಳೆಯಿಂದ ಜಿಲ್ಲಾ ಪ್ರವಾಸ ಕೈಗೊಂಡಿರುವ ಸಿಎಂ ಸಿದ್ದರಾಮಯ್ಯ ಮೊದಲು ಮೈಸೂರಿಗೆ ಬಳಿಕ ಭಾನುವಾರ ಧಾರವಾಡ ಮತ್ತು ಬೆಳಗಾವಿಗೆ ತೆರಳಲಿದ್ದಾರೆ. ಅ.11, 12, 13ರಂದು ಮೈಸೂರು ಜಿಲ್ಲೆಗೆ ಭೇಟಿ ನೀಡುತ್ತಿರುವ ಸಿದ್ದರಾಮಯ್ಯ, ವಿಜಯದಶಮಿ ಮೆರವಣಿಗೆಯನ್ನು ಉದ್ಘಾಟಿಸಲಿದ್ದಾರೆ.

ನಾಳೆಯಿಂದ ಮೂರು ದಿನ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಲಭ್ಯವಿರಲ್ಲ
ನಾಳೆಯಿಂದ ಮೂರು ದಿನ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಲಭ್ಯವಿರಲ್ಲ
ರಾಮ್​, ಮೈಸೂರು
| Edited By: |

Updated on: Oct 10, 2024 | 8:10 PM

Share

ಮೈಸೂರು, ಅಕ್ಟೋಬರ್​ 10: ಸಿಎಂ ಸಿದ್ದರಾಮಯ್ಯ (Siddaramaiah) ನಾಳೆಯಿಂದ 3 ದಿನ‌ಗಳ ಕಾಲ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಬೆಳಗ್ಗೆ ಮೈಸೂರಿಗೆ ತೆರಳಲಿರುವ ಸಿಎಂ, 2 ದಿನ ದಸರಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಭಾನುವಾರ ಧಾರವಾಡ ಮತ್ತು ಬೆಳಗಾವಿಗೆ ತೆರಳಲಿದ್ದಾರೆ.

ಸಿಎಂ ಜಿಲ್ಲಾ ಪ್ರವಾಸ ವಿವರ 

ನಾಳೆಯಿಂದ ಜಿಲ್ಲಾ ಪ್ರವಾಸ ಕೈಗೊಂಡಿರುವ ಸಿಎಂ ಸಿದ್ದರಾಮಯ್ಯ ಅ.11, 12, 13ರಂದು ಮೈಸೂರು ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ. ಅಕ್ಟೋಬರ್ 11ರಂದು ಬೆಳಗ್ಗೆ 10.25ಕ್ಕೆ ಮೈಸೂರಿಗೆ ಆಗಮಿಸುವ ಸಿಎಂ, ಅ.12ರಂದು ಬೆಳಗ್ಗೆ 10 ಗಂಟೆಗೆ ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಲಿದ್ದಾರೆ.

ಇದನ್ನೂ ಓದಿ: ಮೈಸೂರು ಡಿಸಿ ಕಚೇರಿಯಲ್ಲೂ ಖರೀದಿಸಬಹದು ಜಂಬೂಸವಾರಿ, ಟಾರ್ಚ್​​ ಲೈಟ್​ ಟಿಕೆಟ್

ಅಕ್ಟೋಬರ್, 12ರಂದು ಮಧ್ಯಾಹ್ನ 1.41ರಿಂದ 2.10ರವರೆಗೆ ಅರಮನೆಯ ಬಲರಾಮ ದ್ವಾರದ ಆವರಣದಲ್ಲಿ ನಂದಿ ಧ್ವಜಕ್ಕೆ ಪೂಜೆಯಲ್ಲಿ ಭಾಗಿಯಾಗಲಿದ್ದಾರೆ. ಅಂದು ಸಂಜೆ 4ರಿಂದ 4.30ರವರೆಗೆ ಜಂಬೂಸವಾರಿಗೆ ಚಾಲನೆ ನೀಡಲಿದ್ದು, ಚಿನ್ನದ ಅಂಬಾರಿಯಲ್ಲಿ ಆಸೀನರಾಗುವ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ವಿಜಯದಶಮಿ ಮೆರವಣಿಗೆ ಉದ್ಘಾಟಿಸಲಿದ್ದಾರೆ.

ಇದನ್ನೂ ಓದಿ: ಮೈಸೂರು ದಸರಾ 2024: ಮೂರನೇ ದಿನ ಕಾರ್ಯಕ್ರಗಳ ವಿವರ ಹೀಗಿದೆ

ಇನ್ನು ಸಂಜೆ 7 ಗಂಟೆಗೆ ಬನ್ನಿಮಂಟಪ ಮೈದಾನದಲ್ಲಿ ಪಂಜಿನ ಕವಾಯತು, ಟಾರ್ಚ್ ಲೈಟ್ ಪರೇಡ್​ನಲ್ಲಿ ಭಾಗವಹಿಸಲಿದ್ದಾರೆ. ಅ.13ರಂದು ಬೆಳಗ್ಗೆ 11ಕ್ಕೆ ಕಡಕೋಳದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ 11.30ಕ್ಕೆ ಮೈಸೂರಿನಿಂದ ನಿರ್ಗಮಿಸಲಿದ್ದಾರೆ. ಭಾನುವಾರ ಅಂದರೆ ಅ.13ರಂದು ಮೈಸೂರಿನಿಂದ ಹೊರಡುವ ಸಿಎಂ ಸಿದ್ದರಾಮಯ್ಯ ಧಾರವಾಡ ಮತ್ತು ಬೆಳಗಾವಿಗೆ ಜಿಲ್ಲಾಗಳಿಗೂ ಭೇಟಿ ನೀಡಲಿದ್ದಾರೆ.

ಇಂದು ಯುವ ದಸರಾಗೆ ತೆರೆ

ಇನ್ನು ವಿಶ್ವವಿಖ್ಯಾತ ಮೈಸೂರು ದಸರಾ 5ನೇ ದಿನಕ್ಕೆ ಯುವ ದಸರಾ ಕಾಲಿಟ್ಟಿದೆ. ಮ್ಯೂಸಿಕ್ ಮಾಂತ್ರಿಕ ಇಳಿಯರಾಜ ಅವರಿಂದ ಸಂಗೀತ ಸಂಜೆ ಆಯೋಜಿಸಲಾಗಿದೆ. ಭಕ್ತಿ ಗೀತೆಗಳಿಂದ 7 ಗಂಟೆಗೆ ಯುವ ದಸರಾ ಪ್ರಾರಂಭಿಸಲಾಗಿದೆ. ಇಂದು ಯುವ ದಸರಾಗೆ ತೆರೆ ಬೀಳಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​