AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಮನವಿ; ಎರಡನೇ ಬಾರಿ ಕೇಂದ್ರಕ್ಕೆ ಪತ್ರ

ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್, ಎನ್ಎಸ್ ಬೋಸರಾಜು, ಕೇಂದ್ರ ಸಚಿವ ಭಗವಂತ ಖೂಬಾ ನೇತೃತ್ವದ ನಿಯೋಗವು ಈ ಭಾಗದ ಶಾಸಕರು ಮತ್ತು ಸಂಸದರೊಂದಿಗೆ ಮಾಂಡವೀಯರನ್ನು ಭೇಟಿ ಮಾಡಿ ಯೋಜನೆಗೆ ಅನುಮೋದನೆ ನೀಡುವಂತೆ ಈಗಾಗಲೇ ಮನವಿ ಮಾಡಿದೆ.

ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಮನವಿ; ಎರಡನೇ ಬಾರಿ ಕೇಂದ್ರಕ್ಕೆ ಪತ್ರ
ಗಣಪತಿ ಶರ್ಮಾ
|

Updated on: Sep 08, 2023 | 7:00 PM

Share

ಬೆಂಗಳೂರು, ಸೆಪ್ಟೆಂಬರ್ 8: ರಾಯಚೂರಿನಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ಸ್ಥಾಪಿಸುವಂತೆ ಮನವಿ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರಿಗೆ ಪತ್ರ ಬರೆದಿದ್ದಾರೆ. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಏಮ್ಸ್ ಸ್ಥಾಪನೆ ವಿಚಾರವಾಗಿ ಸಿದ್ದರಾಮಯ್ಯ ಬರೆದಿರುವ ಎರಡನೇ ಪತ್ರ ಇದಾಗಿದೆ. ಈ ಹಿಂದೆ ಜೂನ್‌ನಲ್ಲಿ ಪತ್ರ ಬರೆದಿದ್ದರು. ಏಮ್ಸ್ ಸ್ಥಾಪನೆ ವಿಚಾರವಾಗಿ ಕಲ್ಯಾಣ ಕರ್ನಾಟಕ ಪ್ರದೇಶದ ಶಾಸಕರ ನಿಯೋಗವು ಕಳೆದ ತಿಂಗಳು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರನ್ನು ಭೇಟಿ ಮಾಡಿತ್ತು.

ಸಿದ್ದರಾಮಯ್ಯ ಅವರು ಪತ್ರ ಬರೆದ ವಿಚಾರವಾಗಿ ಮುಖ್ಯಮಂತ್ರಿಗಳ ಕಚೇರಿ ಸಾಮಾಜಿಕ ಮಾಧ್ಯಮ ಎಕ್ಸ್​ ಮೂಲಕಮ ಮಾಹಿತಿ ಹಂಚಿಕೊಂಡಿದೆ. ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಯಿಂದ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಆರೋಗ್ಯ ವ್ಯವಸ್ಥೆ ಬಲಗೊಳ್ಳಲಿದೆ ಎಂದು ಅದು ಉಲ್ಲೇಖಿಸಿದೆ.

ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಎಐಐಎಂಎಸ್ ಸ್ಥಾಪನೆಗೆ 2015 ರಿಂದಲೇ ಬೇಡಿಕೆ ಇದೆ ಆದರೆ ಈ ವಿಷಯದಲ್ಲಿ ಯಾವುದೇ ಪ್ರಗತಿಯಾಗಿಲ್ಲ.

ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್, ಎನ್ಎಸ್ ಬೋಸರಾಜು, ಕೇಂದ್ರ ಸಚಿವ ಭಗವಂತ ಖೂಬಾ ನೇತೃತ್ವದ ನಿಯೋಗವು ಈ ಭಾಗದ ಶಾಸಕರು ಮತ್ತು ಸಂಸದರೊಂದಿಗೆ ಮಾಂಡವೀಯರನ್ನು ಭೇಟಿ ಮಾಡಿ ಯೋಜನೆಗೆ ಅನುಮೋದನೆ ನೀಡುವಂತೆ ಈಗಾಗಲೇ ಮನವಿ ಮಾಡಿದೆ.

ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಲು ಕರ್ನಾಟಕ ಸರ್ಕಾರ ಒಪ್ಪಿಗೆ ನೀಡಿದೆ.

ಇದನ್ನೂ ಓದಿ: ಆದೇಶಕ್ಕಿಂತಲೂ ತಮಿಳುನಾಡಿಗೆ ಅಧಿಕ ನೀರು ಬಿಡುಗಡೆ; ಸರ್ಕಾರದ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ ಕಿಡಿ

ಇತರ ಪ್ರದೇಶಗಳಿಗೆ ಹೋಲಿಸಿದರೆ ರಾಯಚೂರಿನಲ್ಲಿ ಆರೋಗ್ಯ, ಶಿಕ್ಷಣ ಮಟ್ಟ ಮತ್ತು ತಲಾ ಆದಾಯ ಕಡಿಮೆ ಇದೆ ಎಂದು ಸಿಎಂ ಹಿಂದಿನ ಪತ್ರದಲ್ಲಿ ತಿಳಿಸಿದ್ದರು. ಜಿಲ್ಲೆಯು ತನ್ನ ಭೌಗೋಳಿಕತೆಯ ಕಾರಣದಿಂದಾಗಿ ವಿಪರೀತ ಹವಾಮಾನ ಪರಿಸ್ಥಿತಿಗಳಿಗೂ ಸಾಕ್ಷಿಯಾಗಿದೆ.

ರಾಯಚೂರಿನಲ್ಲಿ ಏಮ್ಸ್​​ ಸ್ಥಾಪನೆಗೆ ಆಗ್ರಹಿಸಿ ಈ ಹಿಂದೆ ಅನೇಕ ಹೋರಾಟ, ಪ್ರತಿಭಟನೆ, ಧರಣಿಗಳೂ ನಡೆದಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್