AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

15 ತಿಂಗಳ ಪುಟ್ಟ ಮಗುವಿಗಾಗಿ ಮಿಡಿದ ಸಿಎಂ ಹೃದಯ: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಮನವಿ

'ಸ್ಪೈನಲ್ ಮಸ್ಕ್ಯುಲರ್ ಅಟ್ರೋಪಿ' ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಕರ್ನಾಟಕದ 15 ತಿಂಗಳ ಮೌರ್ಯ ಎಂಬ ಪುಟ್ಟ ಕಂದನಿಗಾಗಿ ಸಿಎಂ ಸಿದ್ದರಾಮಯ್ಯ ಹೃದಯ ಮಿಡಿದಿದೆ. ಮಾನವೀಯ ನೆಲೆಗಟ್ಟಿನಲ್ಲಿ ವಿಶೇಷ ಪ್ರಕರಣವೆಂದು ಪರಿಗಣಿಸಿ ಕಂದನ ಪ್ರಾಣ ಉಳಿಸಲು ನೆರವಾಗವಂತೆ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಮಾಡಿದ್ದಾರೆ.

15 ತಿಂಗಳ ಪುಟ್ಟ ಮಗುವಿಗಾಗಿ ಮಿಡಿದ ಸಿಎಂ ಹೃದಯ: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಮನವಿ
ಸಿಎಂ ಸಿದ್ದರಾಮಯ್ಯ
ಗಂಗಾಧರ​ ಬ. ಸಾಬೋಜಿ
|

Updated on: Nov 01, 2023 | 6:23 PM

Share

ಬೆಂಗಳೂರು, ನವೆಂಬರ್​​​​ 01: ಕೇಂದ್ರ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ? ಎಂದು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ (Siddaramaiah) ಕೆಲ ದಿನಗಳಿಂದ ನಿರಂತರವಾಗಿ ಅಭಿಯಾನದ ಮೂಲಕ ಹರಿಹಾಯ್ದಿದ್ದರು. ಆದರೆ ಇದೀಗ ಕರ್ನಾಟಕದ 15 ತಿಂಗಳ ಪುಟ್ಟ ಕಂದನಿಗಾಗಿ ಸಿಎಂ ಸಿದ್ದರಾಮಯ್ಯ ಹೃದಯ ಮಿಡಿದ್ದು, ಆತನ ಪ್ರಾಣ ಉಳಿಸಲು ನೆರವಾಗುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.

ಈ ಕುರಿತಾಗಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಅವರೇ, ಕರ್ನಾಟಕದ 15 ತಿಂಗಳ ಮೌರ್ಯ ಎಂಬ ಪುಟ್ಟ ಕಂದ ‘ಸ್ಪೈನಲ್ ಮಸ್ಕ್ಯುಲರ್ ಅಟ್ರೋಪಿ’ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾನೆ. ಈ ಮಗುವಿನ ಖಾಯಿಲೆಯನ್ನು ಗುಣಪಡಿಸಬಹುದಾದ ಝೋಲ್ಗೆನ್‌ಸ್ಮ ಎಂಬ ಚುಚ್ಚುಮದ್ದನ್ನು ವಿದೇಶದಿಂದ ಆಮದು ಮಾಡಿಕೊಳ್ಳಬೇಕಾಗಿದ್ದು, ಅದರ ಬೆಲೆ ರೂ. 17.5 ಕೋಟಿ  ಇದೆ.

ಸಿಎಂ ಸಿದ್ದರಾಮಯ್ಯ ಟ್ವೀಟ್

ಕೇಂದ್ರ ಸರ್ಕಾರವು ಇದನ್ನು ಮಾನವೀಯ ನೆಲೆಗಟ್ಟಿನಲ್ಲಿ ವಿಶೇಷ ಪ್ರಕರಣವೆಂದು ಪರಿಗಣಿಸಿ ಆಮದು ಸುಂಕದಿಂದ ವಿನಾಯಿತಿ ನೀಡುವ ಮೂಲಕ ಕರುನಾಡಿನ ಪುಟ್ಟ ಕಂದನ ಪ್ರಾಣ ಉಳಿಸಲು ನೆರವಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡುತ್ತಿದ್ದಾರೆ.

ಇದನ್ನೂ ಓದಿ: ನಿವೃತ್ತ ಯೋಧನ‌ ಮೆರವಣಿಗೆ ವಾಹನ ಚಲಾಯಿಸಿ ಗಮನ ಸೆಳೆದ ಎಂಪಿ ರೇಣುಕಾಚಾರ್ಯ; ಇಲ್ಲಿದೆ ವಿಡಿಯೋ

ಕರ್ನಾಟಕದ 15 ತಿಂಗಳ ಪುಟ್ಟ ಕಂದನ ಚಿಕಿತ್ಸೆಗೆ ಬೇಕಾದ 17.5 ಕೋಟಿ ರೂ. ಹೊಂದಿಸುವುದು ಕುಟುಂಬಕ್ಕೆ ಅಸಾಧಾರಣ ಸವಾಲಗಾಗಿ ಪರಿಣಮಿಸಿದೆ. ಔಷಧದ ಬೆಲೆಯೇ ಹೆಚ್ಚಾಗಿದ್ದು, ಜೊತೆಗ ಆಮದು ತೆರಿಗೆಗಳಿಂದ ಹಣಕಾಸಿನ ಹೊರೆ ಗಣನೀಯವಾಗಿ ಹೆಚ್ಚಳವಾಗುತ್ತದೆ. ಹಾಗಾಗಿ ತಮ್ಮ ಕಂದನ ಪ್ರಾಣ ಉಳಿಸುವ ಔಷಧಿಯನ್ನು ಸ್ವಾಧೀನಪಡಿಸಿಕೊಳ್ಳುವುದು ಅವರಿಗೆ ಅಸಾಧ್ಯವಾಗಿದೆ.

ಇದನ್ನೂ ಓದಿ: ಕೊಪ್ಪಳ: ಗಡ್ಡೆಯಾಗುವ ಮೊದಲೇ ಹಾಳಾದ ಈರುಳ್ಳಿ, ಬೆಲೆ ಹೆಚ್ಚಾದರೂ ರೈತರಿಗಿಲ್ಲ ಪ್ರಯೋಜನ

ಮಗುವಿನ ಚಿಕಿತ್ಸೆಗೆ ಅಗತ್ಯವಿರುವ ಝೋಲ್ಗೆನ್‌ಸ್ಮ ಮೇಲಿನ ಆಮದು ತೆರಿಗೆಯನ್ನು ಮನ್ನಾ ಮಾಡುವಂತೆ ಹಣಕಾಸು ಸಚಿವಾಲಯಕ್ಕೆ ನಿರ್ದೇಶನ ನೀಡಿ. ಚುಚ್ಚುಮದ್ದಿನ ಖರೀದಿಗೆ ಸಹಾಯ ಮಾಡಲು PM CARES ನಿಧಿಯಿಂದ ಹಣಕಾಸಿನ ಬೆಂಬಲವನ್ನು ನೀಡಿ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ನೀವು ಮಾಡುವ ಈ ಸಹಾಯದಿಂದ ಮೌರ್ಯ ಅವರ ಕುಟುಂಬಕ್ಕೆ ಆರ್ಥಿಕ ಹೊರೆಯನ್ನು ಗಣನೀಯವಾಗಿ ಕಡಿಮೆ ಮಾಡಬಹುದಾಗಿದೆ. ಇದು ಕಿರಿಯ ನಾಗರಿಕರ ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ನಮ್ಮ ರಾಷ್ಟ್ರದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.