AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷ್ಣಾ, ಭೀಮಾ ನದಿಗೆ ನೀರು ಹರಿಸುವಂತೆ ಮಹಾರಾಷ್ಟ್ರ ಸಿಎಂಗೆ ಸಿದ್ದರಾಮಯ್ಯ ಪತ್ರ 

ಉತ್ತರ ಕರ್ನಾಟಕದ ಜಿಲ್ಲೆಗಳು ಕುಡಿಯುವ ನೀರಿನ ತೀವ್ರ ಕೊರತೆಯನ್ನು ಎದುರಿಸುತ್ತಿವೆ.  ಈ ಸಮಸ್ಯೆಗೆ ಪರಿಹಾರವಾಗಿ, ಮುಖ್ಯಮಂತ್ರಿಗಳು ಮಹಾರಾಷ್ಟ್ರ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಕೊಯ್ನಾ ಮತ್ತು ಉಜ್ಜಯನಿ ಜಲಾಶಯಗಳಿಂದ ಕೃಷ್ಣಾ ಮತ್ತು ಭೀಮಾ ನದಿಗಳಿಗೆ ನೀರು ಬಿಡುಗಡೆ ಮಾಡುವಂತೆ ವಿನಂತಿಸಿದ್ದಾರೆ. ಇದರಿಂದ ಜನರು ಮತ್ತು ಜಾನುವಾರುಗಳಿಗೆ ನೀರಿನ ಅಗತ್ಯವನ್ನು ಪೂರೈಸಲು ಸಹಾಯವಾಗುತ್ತೆ ಎಂದಿದ್ದಾರೆ.

ಕೃಷ್ಣಾ, ಭೀಮಾ ನದಿಗೆ ನೀರು ಹರಿಸುವಂತೆ ಮಹಾರಾಷ್ಟ್ರ ಸಿಎಂಗೆ ಸಿದ್ದರಾಮಯ್ಯ ಪತ್ರ 
ಸಿದ್ದರಾಮಯ್ಯ
Follow us
ವಿವೇಕ ಬಿರಾದಾರ
|

Updated on:Apr 01, 2025 | 7:31 PM

ಬೆಂಗಳೂರು, ಏಪ್ರಿಲ್​ 01: ಕರ್ನಾಟಕದ (Karnataka) ಕುಡಿಯುವ ನೀರಿನ ಅಗತ್ಯಗಳಿಗಾಗಿ ಕೊಯ್ನಾ (Koyna) ಜಲಾಶಯದಿಂದ ಕೃಷ್ಣಾ ನದಿಗೆ (Krishna River) ಮತ್ತು ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ (Bhima River) ನೀರು ಬಿಡುಗಡೆ ಮಾಡುವಂತೆ ಮಹಾರಾಷ್ಟ್ರ  ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್​ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಪತ್ರ ಬರೆದಿದ್ದಾರೆ.

ಉತ್ತರ ಕರ್ನಾಟಕದ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕಲಬುರಗಿ ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳು ಮಾರ್ಚ್ 2025 ರ ಆರಂಭದಿಂದಲೂ ಕುಡಿಯುವ ನೀರಿನ ತೀವ್ರ ಕೊರತೆಯನ್ನು ಎದುರಿಸುತ್ತಿವೆ. ಹಿಂದಿನ ಸಂದರ್ಭಗಳಲ್ಲಿ, ಬೇಸಿಗೆ ಕಾಲದಲ್ಲಿ, ಜನ-ಜಾನುವಾರುಗಳ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸಲು ಕೃಷ್ಣಾ ನದಿಯಿಂದ ನೀರನ್ನು ಬಿಡುಗಡೆ ಮಾಡಲು ಮಹಾರಾಷ್ಟ್ರ ಸರ್ಕಾರ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿತ್ತು. ಕರ್ನಾಟಕ ಸರ್ಕಾರವು ಈ ಮೂಲಕ ಮಹಾರಾಷ್ಟ್ರ ರಾಜ್ಯಕ್ಕೆ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸುತ್ತದೆ ಎಂದು ಪತ್ರದಲ್ಲಿ ಬರೆದಿದ್ದಾರೆ.

ಇದನ್ನೂ ಓದಿ
Image
Krantiveer Sangolli Rayanna: ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕ ದಿನದಂದು ಜನಿಸಿದ ಸಂಗೊಳ್ಳಿ ರಾಯಣ್ಣನ ನೆನೆಯೋಣ
Image
Sangolli Rayanna: ಇಂದು ಸಂಗೊಳ್ಳಿ ರಾಯಣ್ಣ ಜನ್ಮದಿನ: ಮಹಾನ್ ಹೋರಾಟಗಾರನನ್ನು ನೆನಪಿಸಿಕೊಂಡ ಬೊಮ್ಮಾಯಿ, ಸಿದ್ದರಾಮಯ್ಯ
Image
ಬೆಳಗಾವಿಯಲ್ಲಿ ಶೂ ಧರಿಸಿ ಕಿತ್ತೂರು ರಾಣಿ ಚನ್ನಮ್ಮಗೆ ಮಾಲಾರ್ಪಣೆ ಮಾಡಿದ ಎನ್​ಸಿಪಿ ಕಾರ್ಯಕರ್ತ
Image
‘ನಾನು ಕಿತ್ತೂರು ರಾಣಿ ಚೆನ್ನಮ್ಮ ಕುಟುಂಬದವನು’; ಕೊನೆಯ ದಿನ ಅಚ್ಚರಿಯ ವಿಚಾರ ಬಿಚ್ಚಿಟ್ಟ ಪ್ರಶಾಂತ್​ ಸಂಬರಗಿ

ಟ್ವಿಟರ್ ಪೋಸ್ಟ್​

ಪ್ರಸ್ತುತ, ಹೆಚ್ಚುತ್ತಿರುವ ತಾಪಮಾನ ಮತ್ತು ಹಿಪ್ಪರಗಿ ಬ್ಯಾರೇಜ್ ಮತ್ತು ಇತರ ಸ್ಥಳೀಯ ಜಲಾಶಯಗಳಲ್ಲಿ ಸಂಗ್ರಹವಾಗಿರುವ ನೀರು ಮುಂಗಾರು ಆರಂಭವಾಗುವವರೆಗೆ ಕೃಷ್ಣಾ ಜಲಾನಯನ ಪ್ರದೇಶದ ಉತ್ತರ ಕರ್ನಾಟಕ ಜಿಲ್ಲೆಗಳ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸಲು ಸಾಕಾಗುವುದಿಲ್ಲ. ಹೀಗಾಗಿ, ಪರಿಸ್ಥಿತಿ ಹೆಚ್ಚು ಗಂಭೀರವಾಗುತ್ತಿದೆ.

ಇದನ್ನೂ ಓದಿ: ಕಿತ್ತೂರು ರಾಣಿ ಚೆನ್ನಮ್ಮ ಸಮಾಧಿ ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಿ: ಮೋದಿಗೆ ಸಿದ್ದರಾಮಯ್ಯ ಪತ್ರ

ಈ ಹಿನ್ನೆಲೆಯಲ್ಲಿ, ಕರ್ನಾಟಕದ ಉತ್ತರ ಜಿಲ್ಲೆಗಳ ಜನ-ಜಾನುವಾರುಗಳ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸಲು, ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಕನಿಷ್ಠ 2.00 ಟಿಎಂಸಿ ಮತ್ತು ಉಜ್ಜಯನಿ ಜಲಾಶಯದಿಂದ ಭೀಮಾ ನದಿಗೆ 1.00 ಟಿಎಂಸಿ ನೀರನ್ನು ಬಿಡುಗಡೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಎಂದು ಪತ್ರದ ಮೂಲಕ ವಿನಂತಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:26 pm, Tue, 1 April 25

ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?