ಕೃಷ್ಣಾ, ಭೀಮಾ ನದಿಗೆ ನೀರು ಹರಿಸುವಂತೆ ಮಹಾರಾಷ್ಟ್ರ ಸಿಎಂಗೆ ಸಿದ್ದರಾಮಯ್ಯ ಪತ್ರ 

ಉತ್ತರ ಕರ್ನಾಟಕದ ಜಿಲ್ಲೆಗಳು ಕುಡಿಯುವ ನೀರಿನ ತೀವ್ರ ಕೊರತೆಯನ್ನು ಎದುರಿಸುತ್ತಿವೆ.  ಈ ಸಮಸ್ಯೆಗೆ ಪರಿಹಾರವಾಗಿ, ಮುಖ್ಯಮಂತ್ರಿಗಳು ಮಹಾರಾಷ್ಟ್ರ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಕೊಯ್ನಾ ಮತ್ತು ಉಜ್ಜಯನಿ ಜಲಾಶಯಗಳಿಂದ ಕೃಷ್ಣಾ ಮತ್ತು ಭೀಮಾ ನದಿಗಳಿಗೆ ನೀರು ಬಿಡುಗಡೆ ಮಾಡುವಂತೆ ವಿನಂತಿಸಿದ್ದಾರೆ. ಇದರಿಂದ ಜನರು ಮತ್ತು ಜಾನುವಾರುಗಳಿಗೆ ನೀರಿನ ಅಗತ್ಯವನ್ನು ಪೂರೈಸಲು ಸಹಾಯವಾಗುತ್ತೆ ಎಂದಿದ್ದಾರೆ.

ಕೃಷ್ಣಾ, ಭೀಮಾ ನದಿಗೆ ನೀರು ಹರಿಸುವಂತೆ ಮಹಾರಾಷ್ಟ್ರ ಸಿಎಂಗೆ ಸಿದ್ದರಾಮಯ್ಯ ಪತ್ರ 
ಸಿದ್ದರಾಮಯ್ಯ

Updated on: Apr 01, 2025 | 7:31 PM

ಬೆಂಗಳೂರು, ಏಪ್ರಿಲ್​ 01: ಕರ್ನಾಟಕದ (Karnataka) ಕುಡಿಯುವ ನೀರಿನ ಅಗತ್ಯಗಳಿಗಾಗಿ ಕೊಯ್ನಾ (Koyna) ಜಲಾಶಯದಿಂದ ಕೃಷ್ಣಾ ನದಿಗೆ (Krishna River) ಮತ್ತು ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ (Bhima River) ನೀರು ಬಿಡುಗಡೆ ಮಾಡುವಂತೆ ಮಹಾರಾಷ್ಟ್ರ  ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್​ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಪತ್ರ ಬರೆದಿದ್ದಾರೆ.

ಉತ್ತರ ಕರ್ನಾಟಕದ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕಲಬುರಗಿ ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳು ಮಾರ್ಚ್ 2025 ರ ಆರಂಭದಿಂದಲೂ ಕುಡಿಯುವ ನೀರಿನ ತೀವ್ರ ಕೊರತೆಯನ್ನು ಎದುರಿಸುತ್ತಿವೆ. ಹಿಂದಿನ ಸಂದರ್ಭಗಳಲ್ಲಿ, ಬೇಸಿಗೆ ಕಾಲದಲ್ಲಿ, ಜನ-ಜಾನುವಾರುಗಳ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸಲು ಕೃಷ್ಣಾ ನದಿಯಿಂದ ನೀರನ್ನು ಬಿಡುಗಡೆ ಮಾಡಲು ಮಹಾರಾಷ್ಟ್ರ ಸರ್ಕಾರ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿತ್ತು. ಕರ್ನಾಟಕ ಸರ್ಕಾರವು ಈ ಮೂಲಕ ಮಹಾರಾಷ್ಟ್ರ ರಾಜ್ಯಕ್ಕೆ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸುತ್ತದೆ ಎಂದು ಪತ್ರದಲ್ಲಿ ಬರೆದಿದ್ದಾರೆ.

ಇದನ್ನೂ ಓದಿ
Krantiveer Sangolli Rayanna: ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕ ದಿನದಂದು ಜನಿಸಿದ ಸಂಗೊಳ್ಳಿ ರಾಯಣ್ಣನ ನೆನೆಯೋಣ
Sangolli Rayanna: ಇಂದು ಸಂಗೊಳ್ಳಿ ರಾಯಣ್ಣ ಜನ್ಮದಿನ: ಮಹಾನ್ ಹೋರಾಟಗಾರನನ್ನು ನೆನಪಿಸಿಕೊಂಡ ಬೊಮ್ಮಾಯಿ, ಸಿದ್ದರಾಮಯ್ಯ
ಬೆಳಗಾವಿಯಲ್ಲಿ ಶೂ ಧರಿಸಿ ಕಿತ್ತೂರು ರಾಣಿ ಚನ್ನಮ್ಮಗೆ ಮಾಲಾರ್ಪಣೆ ಮಾಡಿದ ಎನ್​ಸಿಪಿ ಕಾರ್ಯಕರ್ತ
‘ನಾನು ಕಿತ್ತೂರು ರಾಣಿ ಚೆನ್ನಮ್ಮ ಕುಟುಂಬದವನು’; ಕೊನೆಯ ದಿನ ಅಚ್ಚರಿಯ ವಿಚಾರ ಬಿಚ್ಚಿಟ್ಟ ಪ್ರಶಾಂತ್​ ಸಂಬರಗಿ

 

ಟ್ವಿಟರ್ ಪೋಸ್ಟ್​

ಪ್ರಸ್ತುತ, ಹೆಚ್ಚುತ್ತಿರುವ ತಾಪಮಾನ ಮತ್ತು ಹಿಪ್ಪರಗಿ ಬ್ಯಾರೇಜ್ ಮತ್ತು ಇತರ ಸ್ಥಳೀಯ ಜಲಾಶಯಗಳಲ್ಲಿ ಸಂಗ್ರಹವಾಗಿರುವ ನೀರು ಮುಂಗಾರು ಆರಂಭವಾಗುವವರೆಗೆ ಕೃಷ್ಣಾ ಜಲಾನಯನ ಪ್ರದೇಶದ ಉತ್ತರ ಕರ್ನಾಟಕ ಜಿಲ್ಲೆಗಳ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸಲು ಸಾಕಾಗುವುದಿಲ್ಲ. ಹೀಗಾಗಿ, ಪರಿಸ್ಥಿತಿ ಹೆಚ್ಚು ಗಂಭೀರವಾಗುತ್ತಿದೆ.

ಇದನ್ನೂ ಓದಿ: ಕಿತ್ತೂರು ರಾಣಿ ಚೆನ್ನಮ್ಮ ಸಮಾಧಿ ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಿ: ಮೋದಿಗೆ ಸಿದ್ದರಾಮಯ್ಯ ಪತ್ರ

ಈ ಹಿನ್ನೆಲೆಯಲ್ಲಿ, ಕರ್ನಾಟಕದ ಉತ್ತರ ಜಿಲ್ಲೆಗಳ ಜನ-ಜಾನುವಾರುಗಳ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸಲು, ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಕನಿಷ್ಠ 2.00 ಟಿಎಂಸಿ ಮತ್ತು ಉಜ್ಜಯನಿ ಜಲಾಶಯದಿಂದ ಭೀಮಾ ನದಿಗೆ 1.00 ಟಿಎಂಸಿ ನೀರನ್ನು ಬಿಡುಗಡೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಎಂದು ಪತ್ರದ ಮೂಲಕ ವಿನಂತಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:26 pm, Tue, 1 April 25