AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿತ್ತೂರು ರಾಣಿ ಚೆನ್ನಮ್ಮ ಸಮಾಧಿ ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಿ: ಮೋದಿಗೆ ಸಿದ್ದರಾಮಯ್ಯ ಪತ್ರ

ವೀರ ರಾಣಿ ಕಿತ್ತೂರು ಚೆನ್ನಮ್ಮನ ಸಮಾಧಿಯನ್ನು 1958ರ ಪ್ರಾಚೀನ ಸ್ಮಾರಕ ಕಾಯ್ದೆಯಡಿ ರಾಷ್ಟ್ರೀಯ ಮಹತ್ವದ ಸ್ಮಾರಕವಾಗಿ ಘೋಷಿಸುವಂತೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ರಾಣಿ ಚೆನ್ನಮ್ಮನ ಧೈರ್ಯ ಮತ್ತು ತ್ಯಾಗವನ್ನು ಸ್ಮರಿಸುವ ಈ ಸ್ಮಾರಕವು ಭಾರತದ ಇತಿಹಾಸ ಮತ್ತು ಸಂಸ್ಕೃತಿಗೆ ಅಮೂಲ್ಯ ಕೊಡುಗೆಯಾಗಿದೆ. ಇದರ ಸಂರಕ್ಷಣೆ ಮತ್ತು ಅಭಿವೃದ್ಧಿಯು ಸಾಂಸ್ಕೃತಿಕ ಪ್ರವಾಸೋದ್ಯಮವನ್ನು ಉತ್ತೇಜಿಸುತ್ತದೆ ಮತ್ತು ಸ್ಥಳೀಯ ಆರ್ಥಿಕತೆಗೆ ಕೊಡುಗೆ ನೀಡುತ್ತದೆ.

ಕಿತ್ತೂರು ರಾಣಿ ಚೆನ್ನಮ್ಮ ಸಮಾಧಿ ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಿ: ಮೋದಿಗೆ ಸಿದ್ದರಾಮಯ್ಯ ಪತ್ರ
ಸಿಎಂ ಸಿದ್ದರಾಮಯ್ಯ, ಪ್ರಧಾನಿ ಮೋದಿ
Follow us
ವಿವೇಕ ಬಿರಾದಾರ
|

Updated on: Mar 29, 2025 | 8:37 PM

ಬೆಂಗಳೂರು, ಮಾರ್ಚ್ 29: ಬೆಳಗಾವಿ (Belagavi) ಜಿಲ್ಲೆಯ ಬೈಲಹೊಂಗಲ (Bailhongal) ತಾಲೂಕಿನಲ್ಲಿರುವ ವೀರ ರಾಣಿ ಕಿತ್ತೂರು ಚೆನ್ನಮ್ಮ (Kittur Rani Chennamma) ಅವರ ಸಮಾಧಿಯನ್ನು ಪ್ರಾಚೀನ ಸ್ಮಾರಕಗಳು ಮತ್ತು ಪುರಾತತ್ವ ತಾಣಗಳು ಮತ್ತು ಅವಶೇಷಗಳ ಕಾಯ್ದೆ, 1958 ರ ಅಡಿಯಲ್ಲಿ “ರಾಷ್ಟ್ರೀಯ ಮಹತ್ವದ ಸ್ಮಾರಕ” ಎಂದು ಘೋಷಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದಾರೆ.

ವೀರ ರಾಣಿ ಕಿತ್ತೂರು ಚೆನ್ನಮ್ಮ ಅವರು ವಸಾಹತುಶಾಹಿ ಆಳ್ವಿಕೆಯ ವಿರುದ್ಧ ಸಶಸ್ತ್ರ ಹೋರಾಟವನ್ನು ಮುನ್ನಡೆಸಿದ ಮೊದಲ ಮಹಿಳೆಯರಲ್ಲಿ ಒಬ್ಬರಾಗಿದ್ದಾರೆ. ವೀರ ರಾಣಿ ಕಿತ್ತೂರು ಚೆನ್ನಮ್ಮ ಅವರ ಸಮಾಧಿಯು ಐತಿಹಾಸಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಹೊಂದಿದೆ. ರಾಣಿ ಚೆನ್ನಮ್ಮ ಭಾರತದ ಇತಿಹಾಸದಲ್ಲಿ ವಿಶಿಷ್ಟ ಸ್ಥಾನವನ್ನು ಹೊಂದಿದ್ದಾರೆ. ಅವರ ಶೌರ್ಯ ಮತ್ತು ಅದಮ್ಯ ಚೈತನ್ಯವು ದೇಶದ ಪೀಳಿಗೆಗೆ ಸ್ಫೂರ್ತಿ ನೀಡುತ್ತಲೇ ಇದೆ ಎಂದು ಎಂದು ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ
Image
Krantiveer Sangolli Rayanna: ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕ ದಿನದಂದು ಜನಿಸಿದ ಸಂಗೊಳ್ಳಿ ರಾಯಣ್ಣನ ನೆನೆಯೋಣ
Image
Sangolli Rayanna: ಇಂದು ಸಂಗೊಳ್ಳಿ ರಾಯಣ್ಣ ಜನ್ಮದಿನ: ಮಹಾನ್ ಹೋರಾಟಗಾರನನ್ನು ನೆನಪಿಸಿಕೊಂಡ ಬೊಮ್ಮಾಯಿ, ಸಿದ್ದರಾಮಯ್ಯ
Image
ಬೆಳಗಾವಿಯಲ್ಲಿ ಶೂ ಧರಿಸಿ ಕಿತ್ತೂರು ರಾಣಿ ಚನ್ನಮ್ಮಗೆ ಮಾಲಾರ್ಪಣೆ ಮಾಡಿದ ಎನ್​ಸಿಪಿ ಕಾರ್ಯಕರ್ತ
Image
‘ನಾನು ಕಿತ್ತೂರು ರಾಣಿ ಚೆನ್ನಮ್ಮ ಕುಟುಂಬದವನು’; ಕೊನೆಯ ದಿನ ಅಚ್ಚರಿಯ ವಿಚಾರ ಬಿಚ್ಚಿಟ್ಟ ಪ್ರಶಾಂತ್​ ಸಂಬರಗಿ

ಸಿದ್ದರಾಮಯ್ಯ ಟ್ವೀಟ್​

ಈ ಅಪ್ರತಿಮ ನಾಯಕಿಯ ಸಮಾಧಿ ಕೇವಲ ವಿಶ್ರಾಂತಿ ಸ್ಥಳವಲ್ಲ. ಬದಲಾಗಿ ಭಾರತದ ಸ್ವಾತಂತ್ರ್ಯ ಹೋರಾಟದ ಅವಿನಾಭಾವ ಚೈತನ್ಯವನ್ನು ಸಂಕೇತಿಸುವ ಪವಿತ್ರ ಸ್ಥಳವಾಗಿದೆ. ಇದು ಧೈರ್ಯ ಮತ್ತು ತ್ಯಾಗದ ಸಂಕೇತವಾಗಿದೆ. 1824 ರಲ್ಲಿ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ಶಕ್ತಿಯನ್ನು ಧಿಕ್ಕರಿಸಿದ ಮಹಿಳೆಯ ದೃಢಸಂಕಲ್ಪವನ್ನು ಪ್ರತಿಬಿಂಬಿಸುವ ಧೈರ್ಯ ಮತ್ತು ತ್ಯಾಗದ ದಾರಿದೀಪವಾಗಿ ನಿಂತಿದೆ. ಪ್ರಾಚೀನ ಸ್ಮಾರಕಗಳು ಮತ್ತು ಪುರಾತತ್ವ ತಾಣಗಳು ಮತ್ತು ಅವಶೇಷಗಳ ಕಾಯ್ದೆ, 1958 ರ ಅಡಿಯಲ್ಲಿ ಈ ಸ್ಥಳವನ್ನು “ರಾಷ್ಟ್ರೀಯವಾಗಿ ಮಹತ್ವದ ಸ್ಮಾರಕ” ಎಂದು ಗುರುತಿಸಿ, ಅವರ ಪರಂಪರೆಯನ್ನು ಸಂರಕ್ಷಿಸುವಂತೆ ಪತ್ರ ಬರೆದಿದ್ದಾರೆ.

ಈ ಸ್ಮಾರಕಕ್ಕೆ ಸಂರಕ್ಷಣೆ ಮತ್ತು ಅಭಿವೃದ್ಧಿಯ ಅಗತ್ಯವಿದೆ. ದೇಶಾದ್ಯಂತ ಮತ್ತು ಹೊರಗಿನ ಪ್ರವಾಸಿಗರನ್ನು ಈ ಸ್ಥಳ ಸೆಳೆಯುತ್ತದೆ. ಈ ಮೂಲಕ ಸಾಂಸ್ಕೃತಿಕ ಪ್ರವಾಸೋದ್ಯಮವನ್ನು ಉತ್ತೇಜಿಸುತ್ತದೆ. ಜೊತೆಗೆ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ಕೊಡುಗೆ ನೀಡುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ವಿದ್ಯಾರ್ಥಿಗಳ ಭವಿಷ್ಯದ ಜೊತೆ ಸರ್ಕಾರ ಚೆಲ್ಲಾಟ: ಆನೇಕಲ್ ಕಿತ್ತೂರು ರಾಣಿ ವಸತಿ ಶಾಲೆಯಲ್ಲಿ ಹೇಳೋರಿಲ್ಲ ಕೇಳೋರಿಲ್ಲ

ಈ ಸ್ಥಳವನ್ನು ರಾಷ್ಟ್ರೀಯ ಸ್ಮಾರಕವೆಂದು ಮೌಲ್ಯಮಾಪನ ಮಾಡುವ ಮತ್ತು ಘೋಷಿಸುವ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ತಾವು ಸಂಸ್ಕೃತಿ ಸಚಿವಾಲಯ ಮತ್ತು ಭಾರತೀಯ ಪುರಾತತ್ವ ಇಲಾಖೆಗೆ ನಿರ್ದೇಶನ ನೀಡಬೇಕೆಂದು ವಿನಂತಿಸುತ್ತೇನೆ. ಈ ಮೂಲಕ ಶ್ರೀಮಂತ ಇತಿಹಾಸ ಮತ್ತು ಸಾಂಸ್ಕೃತಿಕ ಪರಂಪರೆ ಹೊಂದಿರುವ ಕರ್ನಾಟಕವು ವೀರ ರಾಣಿ ಕಿತ್ತೂರು ಚೆನ್ನಮ್ಮನವರ ಸಮಾಧಿಯನ್ನು ರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿಪಡಿಸಲು ಉತ್ಸುಕವಾಗಿದೆ ಎಂದಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ