AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mekedatu Project: ನಾಳೆ ದೆಹಲಿ ವಿಮಾನ ಏರಲಿರುವ ಸಿಎಂ ಯಡಿಯೂರಪ್ಪ; ಪ್ರಧಾನಿ ಮೋದಿ ಜತೆ ಮೇಕೆದಾಟು ಯೋಜನೆ ಕುರಿತು ಚರ್ಚೆ ಸಾಧ್ಯತೆ

ಈಗಾಗಲೇ ಜಲ ಸಂಪನ್ಮೂಲ ಇಲಾಖೆ ಅಧಿಕಾರಿಗಳು ದೆಹಲಿಗೆ ತೆರಳಿದ್ದು, ನಾಳೆ ಕೇಂದ್ರ ಜಲಶಕ್ತಿ ಇಲಾಖೆ ಸಚಿವರು, ಅಧಿಕಾರಿಗಳನ್ನು ರಾಜ್ಯದ ಅಧಿಕಾರಿಗಳು ಭೇಟಿಯಾಗಲಿದ್ದಾರೆ ಎಂಬ ಮಾಹಿತಿ ದೊರೆತಿದೆ. ನಾಳೆ ಸಿಎಂ ಯಡಿಯೂರಪ್ಪ ಜತೆ ಡಿಸಿಎಂ ಗೋವಿಂದ ಕಾರಜೋಳ ಮತ್ತು ಗೃಹಸಚಿವ ಬಸವರಾಜ ಬೊಮ್ಮಾಯಿ‌ ಕೂಡಾ ತೆರಳುವ ಸಾಧ್ಯತೆಯಿದೆ.

Mekedatu Project: ನಾಳೆ ದೆಹಲಿ ವಿಮಾನ ಏರಲಿರುವ ಸಿಎಂ ಯಡಿಯೂರಪ್ಪ; ಪ್ರಧಾನಿ ಮೋದಿ ಜತೆ ಮೇಕೆದಾಟು ಯೋಜನೆ ಕುರಿತು ಚರ್ಚೆ ಸಾಧ್ಯತೆ
ಸಿಎಂ ಯಡಿಯೂರಪ್ಪ ಮತ್ತು ಪ್ರಧಾನಿ ನರೇಂದ್ರ ಮೋದಿ
TV9 Web
| Edited By: |

Updated on: Jul 15, 2021 | 4:58 PM

Share

ಬೆಂಗಳೂರು: ನಾಳೆ ಮಧ್ಯಾಹ್ನ ಸಿಎಂ ಯಡಿಯೂರಪ್ಪ ದೆಹಲಿಗೆ ಪ್ರಯಾಣ ಬೆಳೆಸುವುದು ನಿಶ್ಚಯವಾಗಿದೆ. ವಿಶೇಷ ವಿಮಾನದ ಮೂಲಕ ರಾಷ್ಟ್ರ ರಾಜಧಾನಿಗೆ ತೆರಳಲಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ನಾಳೆ ಸಂಜೆ 6.30ರಿಂದ 8 ಗಂಟೆಯ ಒಳಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಮೇಕೆದಾಟು ಡ್ಯಾಂ (Mekedatu Project) ವಿಚಾರವಾಗಿ ಪ್ರಧಾನಿ ಜತೆ ಸಿಎಂ ಯಡಿಯೂರಪ್ಪ ಚರ್ಚೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.

ಈಗಾಗಲೇ ಜಲ ಸಂಪನ್ಮೂಲ ಇಲಾಖೆ ಅಧಿಕಾರಿಗಳು ದೆಹಲಿಗೆ ತೆರಳಿದ್ದು, ನಾಳೆ ಕೇಂದ್ರ ಜಲಶಕ್ತಿ ಇಲಾಖೆ ಸಚಿವರು, ಅಧಿಕಾರಿಗಳನ್ನು ರಾಜ್ಯದ ಅಧಿಕಾರಿಗಳು ಭೇಟಿಯಾಗಲಿದ್ದಾರೆ ಎಂಬ ಮಾಹಿತಿ ದೊರೆತಿದೆ. ನಾಳೆ ಸಿಎಂ ಯಡಿಯೂರಪ್ಪ ಜತೆ ಡಿಸಿಎಂ ಗೋವಿಂದ ಕಾರಜೋಳ ಮತ್ತು ಗೃಹಸಚಿವ ಬಸವರಾಜ ಬೊಮ್ಮಾಯಿ‌ ಕೂಡಾ ತೆರಳುವ ಸಾಧ್ಯತೆಯಿದೆ.

ಮೇಕೆದಾಟು ಯೋಜನೆಗೆ ಆಗ್ರಹಿಸಿ ಮೇಕೆದಾಟುವಿನಿಂದ ವಿಧಾನಸೌಧದವರೆಗೆ ಪಾದಯಾತ್ರೆ ಮೇಕೆದಾಟು ಡ್ಯಾಂ ಯೋಜನೆಗಾಗಿ ಮೇಕೆದಾಟುನಿಂದ ಬೆಂಗಳೂರಿನ ವಿಧಾನಸೌಧದವರೆಗೆ ಅಗಸ್ಟ್ 3ರಿಂದ 7ರವರೆಗೆ ಪಾದಯಾತ್ರೆ ನಡೆಸುವುದಾಗಿ ರಾಜ್ಯ ಮೇಕೆದಾಟು ಹೋರಾಟ ಸಮಿತಿ ಘೋಷಿಸಿದೆ. ಐದು ದಿನಗಳ ಪಾದಯಾತ್ರೆಯಲ್ಲಿ ಸಾವಿರಾರು ರೈತರು ಪಾದಯಾತ್ರೆಯಲ್ಲಿ ಭಾಗಿಯಾಗಲಿದ್ದು, ಹೋರಾಟ ಸಮಿತಿ ಪಾದಯಾತ್ರೆಯನ್ನು ಆಯೋಜಿಸಲಿದೆ. ಕರ್ನಾಟಕ ರಾಜ್ಯ ಮೇಕೆದಾಟು ಹೋರಾಟ ಸಂಘದ ಪ್ರಮುಖರಾದ ಸಂಪತ್ ಕುಮಾರ್, ಜಿ ಜಿ ಹಳ್ಳಿ ನಾರಾಯಣಸ್ವಾಮಿ ಸುದ್ದಿಗೋಷ್ಠಿ ನಡೆಸಿ ಈ ಮಾಹಿತಿ ನೀಡಿದ್ದಾರೆ.

ಈ ಎಲ್ಲದರ ಬೆನ್ನಲ್ಲೇ ಮೇಕೆದಾಟು ಯೋಜನೆಗೆ ಈಗಾಗಲೇ ತಮಿಳುನಾಡು ವಿರೋಧ ನಾಳೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್​ರನ್ನು ಭೇಟಿಯಾಗಲಿರುವ ತಮಿಳುನಾಡು ನಿಯೋಗ ನಿರ್ಧರಿಸಿದೆ.

ಇದನ್ನೂ ಓದಿ: 

ಐದು ವರ್ಷಗಳಲ್ಲಿ 10 ಮಿಲಿಯನ್ ಉದ್ಯೋಗ ಸೃಷ್ಟಿ ಮಾಡುತ್ತೇವೆ; ಬಿ.ಎಸ್.ಯಡಿಯೂರಪ್ಪ

ಮೇಕೆದಾಟು ಡ್ಯಾಂ ನಿರ್ಮಾಣಕ್ಕೆ ಮತ್ತೊಂದು ವಿಘ್ನ; ಈ ಬಾರಿ ಪುದುಚೇರಿಯಿಂದ ಅಡ್ಡಗಾಲು! ಯಾಕಂತೆ?

(CM Yeddyurappa to fly to Delhi tomorrow Possibility to discuss govt plan with PM Narendra Modi)

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ