AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mekedatu Project: ನಾಳೆ ದೆಹಲಿ ವಿಮಾನ ಏರಲಿರುವ ಸಿಎಂ ಯಡಿಯೂರಪ್ಪ; ಪ್ರಧಾನಿ ಮೋದಿ ಜತೆ ಮೇಕೆದಾಟು ಯೋಜನೆ ಕುರಿತು ಚರ್ಚೆ ಸಾಧ್ಯತೆ

ಈಗಾಗಲೇ ಜಲ ಸಂಪನ್ಮೂಲ ಇಲಾಖೆ ಅಧಿಕಾರಿಗಳು ದೆಹಲಿಗೆ ತೆರಳಿದ್ದು, ನಾಳೆ ಕೇಂದ್ರ ಜಲಶಕ್ತಿ ಇಲಾಖೆ ಸಚಿವರು, ಅಧಿಕಾರಿಗಳನ್ನು ರಾಜ್ಯದ ಅಧಿಕಾರಿಗಳು ಭೇಟಿಯಾಗಲಿದ್ದಾರೆ ಎಂಬ ಮಾಹಿತಿ ದೊರೆತಿದೆ. ನಾಳೆ ಸಿಎಂ ಯಡಿಯೂರಪ್ಪ ಜತೆ ಡಿಸಿಎಂ ಗೋವಿಂದ ಕಾರಜೋಳ ಮತ್ತು ಗೃಹಸಚಿವ ಬಸವರಾಜ ಬೊಮ್ಮಾಯಿ‌ ಕೂಡಾ ತೆರಳುವ ಸಾಧ್ಯತೆಯಿದೆ.

Mekedatu Project: ನಾಳೆ ದೆಹಲಿ ವಿಮಾನ ಏರಲಿರುವ ಸಿಎಂ ಯಡಿಯೂರಪ್ಪ; ಪ್ರಧಾನಿ ಮೋದಿ ಜತೆ ಮೇಕೆದಾಟು ಯೋಜನೆ ಕುರಿತು ಚರ್ಚೆ ಸಾಧ್ಯತೆ
ಸಿಎಂ ಯಡಿಯೂರಪ್ಪ ಮತ್ತು ಪ್ರಧಾನಿ ನರೇಂದ್ರ ಮೋದಿ
TV9 Web
| Updated By: guruganesh bhat|

Updated on: Jul 15, 2021 | 4:58 PM

Share

ಬೆಂಗಳೂರು: ನಾಳೆ ಮಧ್ಯಾಹ್ನ ಸಿಎಂ ಯಡಿಯೂರಪ್ಪ ದೆಹಲಿಗೆ ಪ್ರಯಾಣ ಬೆಳೆಸುವುದು ನಿಶ್ಚಯವಾಗಿದೆ. ವಿಶೇಷ ವಿಮಾನದ ಮೂಲಕ ರಾಷ್ಟ್ರ ರಾಜಧಾನಿಗೆ ತೆರಳಲಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ನಾಳೆ ಸಂಜೆ 6.30ರಿಂದ 8 ಗಂಟೆಯ ಒಳಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಮೇಕೆದಾಟು ಡ್ಯಾಂ (Mekedatu Project) ವಿಚಾರವಾಗಿ ಪ್ರಧಾನಿ ಜತೆ ಸಿಎಂ ಯಡಿಯೂರಪ್ಪ ಚರ್ಚೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.

ಈಗಾಗಲೇ ಜಲ ಸಂಪನ್ಮೂಲ ಇಲಾಖೆ ಅಧಿಕಾರಿಗಳು ದೆಹಲಿಗೆ ತೆರಳಿದ್ದು, ನಾಳೆ ಕೇಂದ್ರ ಜಲಶಕ್ತಿ ಇಲಾಖೆ ಸಚಿವರು, ಅಧಿಕಾರಿಗಳನ್ನು ರಾಜ್ಯದ ಅಧಿಕಾರಿಗಳು ಭೇಟಿಯಾಗಲಿದ್ದಾರೆ ಎಂಬ ಮಾಹಿತಿ ದೊರೆತಿದೆ. ನಾಳೆ ಸಿಎಂ ಯಡಿಯೂರಪ್ಪ ಜತೆ ಡಿಸಿಎಂ ಗೋವಿಂದ ಕಾರಜೋಳ ಮತ್ತು ಗೃಹಸಚಿವ ಬಸವರಾಜ ಬೊಮ್ಮಾಯಿ‌ ಕೂಡಾ ತೆರಳುವ ಸಾಧ್ಯತೆಯಿದೆ.

ಮೇಕೆದಾಟು ಯೋಜನೆಗೆ ಆಗ್ರಹಿಸಿ ಮೇಕೆದಾಟುವಿನಿಂದ ವಿಧಾನಸೌಧದವರೆಗೆ ಪಾದಯಾತ್ರೆ ಮೇಕೆದಾಟು ಡ್ಯಾಂ ಯೋಜನೆಗಾಗಿ ಮೇಕೆದಾಟುನಿಂದ ಬೆಂಗಳೂರಿನ ವಿಧಾನಸೌಧದವರೆಗೆ ಅಗಸ್ಟ್ 3ರಿಂದ 7ರವರೆಗೆ ಪಾದಯಾತ್ರೆ ನಡೆಸುವುದಾಗಿ ರಾಜ್ಯ ಮೇಕೆದಾಟು ಹೋರಾಟ ಸಮಿತಿ ಘೋಷಿಸಿದೆ. ಐದು ದಿನಗಳ ಪಾದಯಾತ್ರೆಯಲ್ಲಿ ಸಾವಿರಾರು ರೈತರು ಪಾದಯಾತ್ರೆಯಲ್ಲಿ ಭಾಗಿಯಾಗಲಿದ್ದು, ಹೋರಾಟ ಸಮಿತಿ ಪಾದಯಾತ್ರೆಯನ್ನು ಆಯೋಜಿಸಲಿದೆ. ಕರ್ನಾಟಕ ರಾಜ್ಯ ಮೇಕೆದಾಟು ಹೋರಾಟ ಸಂಘದ ಪ್ರಮುಖರಾದ ಸಂಪತ್ ಕುಮಾರ್, ಜಿ ಜಿ ಹಳ್ಳಿ ನಾರಾಯಣಸ್ವಾಮಿ ಸುದ್ದಿಗೋಷ್ಠಿ ನಡೆಸಿ ಈ ಮಾಹಿತಿ ನೀಡಿದ್ದಾರೆ.

ಈ ಎಲ್ಲದರ ಬೆನ್ನಲ್ಲೇ ಮೇಕೆದಾಟು ಯೋಜನೆಗೆ ಈಗಾಗಲೇ ತಮಿಳುನಾಡು ವಿರೋಧ ನಾಳೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್​ರನ್ನು ಭೇಟಿಯಾಗಲಿರುವ ತಮಿಳುನಾಡು ನಿಯೋಗ ನಿರ್ಧರಿಸಿದೆ.

ಇದನ್ನೂ ಓದಿ: 

ಐದು ವರ್ಷಗಳಲ್ಲಿ 10 ಮಿಲಿಯನ್ ಉದ್ಯೋಗ ಸೃಷ್ಟಿ ಮಾಡುತ್ತೇವೆ; ಬಿ.ಎಸ್.ಯಡಿಯೂರಪ್ಪ

ಮೇಕೆದಾಟು ಡ್ಯಾಂ ನಿರ್ಮಾಣಕ್ಕೆ ಮತ್ತೊಂದು ವಿಘ್ನ; ಈ ಬಾರಿ ಪುದುಚೇರಿಯಿಂದ ಅಡ್ಡಗಾಲು! ಯಾಕಂತೆ?

(CM Yeddyurappa to fly to Delhi tomorrow Possibility to discuss govt plan with PM Narendra Modi)

Daily horoscope: ವ್ಯಾಪಾರಸ್ಥರಿಗೆ ವೃತ್ತಿ ಜೀವನದಲ್ಲಿ ಯಶಸ್ಸು
Daily horoscope: ವ್ಯಾಪಾರಸ್ಥರಿಗೆ ವೃತ್ತಿ ಜೀವನದಲ್ಲಿ ಯಶಸ್ಸು
ಜನತೆಗೆ ಗುಡ್​ ನ್ಯೂಸ್ ಕೊಟ್ಟ ಕೇಂದ್ರ: ಯಾವೆಲ್ಲಾ ವಸ್ತುಗಳ ಬೆಲೆ ಇಳಿಕೆ?
ಜನತೆಗೆ ಗುಡ್​ ನ್ಯೂಸ್ ಕೊಟ್ಟ ಕೇಂದ್ರ: ಯಾವೆಲ್ಲಾ ವಸ್ತುಗಳ ಬೆಲೆ ಇಳಿಕೆ?
ವಿಷ್ಣುವರ್ಧನ್​​ಗೆ ಕರ್ನಾಟಕ ರತ್ನ ನೀಡುವ ಬಗ್ಗೆ ಸಿಎಂ ಸಕಾರಾತ್ಮಕ ಸ್ಪಂದನೆ
ವಿಷ್ಣುವರ್ಧನ್​​ಗೆ ಕರ್ನಾಟಕ ರತ್ನ ನೀಡುವ ಬಗ್ಗೆ ಸಿಎಂ ಸಕಾರಾತ್ಮಕ ಸ್ಪಂದನೆ
ಸಿನಿಮಾ ಸಾಹಸಕ್ಕೆ ಕೈ ಹಾಕಿದ ‘ಅಮೃತಾಂಜನ್’ ಕಿರುಚಿತ್ರದ ಹುಡುಗರು
ಸಿನಿಮಾ ಸಾಹಸಕ್ಕೆ ಕೈ ಹಾಕಿದ ‘ಅಮೃತಾಂಜನ್’ ಕಿರುಚಿತ್ರದ ಹುಡುಗರು
ಅಪಾಯದ ಮಟ್ಟ ಮೀರಿದ ಜಮ್ಮು-ಕಾಶ್ಮೀರದ ಝೀಲಂ ನದಿ, ಪ್ರವಾಹದ ಎಚ್ಚರಿಕೆ
ಅಪಾಯದ ಮಟ್ಟ ಮೀರಿದ ಜಮ್ಮು-ಕಾಶ್ಮೀರದ ಝೀಲಂ ನದಿ, ಪ್ರವಾಹದ ಎಚ್ಚರಿಕೆ
ಬಾನು ಮುಸ್ತಾಕ್ ಮನೆಯಲ್ಲಿ ಕುರಾನ್ ಜತೆ ಭಗವದ್ಗೀತೆ
ಬಾನು ಮುಸ್ತಾಕ್ ಮನೆಯಲ್ಲಿ ಕುರಾನ್ ಜತೆ ಭಗವದ್ಗೀತೆ
ದರ್ಶನ್ ನೋವು ನೋಡಿ ಖುಷಿಪಡುವ ಕೆಲವರು ಇದ್ದಾರೆ: ನಿರ್ದೇಶಕ ಪ್ರೇಮ್
ದರ್ಶನ್ ನೋವು ನೋಡಿ ಖುಷಿಪಡುವ ಕೆಲವರು ಇದ್ದಾರೆ: ನಿರ್ದೇಶಕ ಪ್ರೇಮ್
ಮೈಸೂರು ದಸರಾ ಉದ್ಘಾಟನೆ: ಫಲತಾಂಬೂಲ ನೀಡಿ ಬಾನು ಮುಸ್ತಾಕ್​ಗೆ ಆಹ್ವಾನ
ಮೈಸೂರು ದಸರಾ ಉದ್ಘಾಟನೆ: ಫಲತಾಂಬೂಲ ನೀಡಿ ಬಾನು ಮುಸ್ತಾಕ್​ಗೆ ಆಹ್ವಾನ
ದರ್ಶನ್ ಅವರನ್ನು ಭೇಟಿ ಮಾಡಿದ್ದೆ, ನೋವಿನಿಂದ ನುಡಿದ ಪ್ರೇಮ್
ದರ್ಶನ್ ಅವರನ್ನು ಭೇಟಿ ಮಾಡಿದ್ದೆ, ನೋವಿನಿಂದ ನುಡಿದ ಪ್ರೇಮ್
ಕೇದಾರನಾಥ- ಸೋನ್‌ಪ್ರಯಾಗ ಮಾರ್ಗದಲ್ಲಿ ಭೂಕುಸಿತ; ಹಲವಾರು ವಾಹನಗಳಿಗೆ ಹಾನಿ
ಕೇದಾರನಾಥ- ಸೋನ್‌ಪ್ರಯಾಗ ಮಾರ್ಗದಲ್ಲಿ ಭೂಕುಸಿತ; ಹಲವಾರು ವಾಹನಗಳಿಗೆ ಹಾನಿ