Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಂತ ಸಂತೋಷದಿಂದ ರೈತರ ಸಾಲ ವಿತರಣೆಗೆ ಚಾಲನೆ ನೀಡಿದ್ದೇನೆ: ಸಿಎಂ ಯಡಿಯೂರಪ್ಪ

ಸಾಲ ಮರುಪಾವತಿ ಅವಧಿಯನ್ನು ಮೂರು ತಿಂಗಳು ವಿಸ್ತರಿಸಿದ್ದೇವೆ. ಕೊವಿಡ್​ನಿಂದ ಸೂಕ್ತ ಮಾರುಕಟ್ಟೆ ಇಲ್ಲದ ಹೂವು, ಹಣ್ಣು ಬೆಳೆಗಾರರಿಗೂ ಪರಿಹಾರ ನೀಡಲಾಗಿದೆ. ಅಭಿವೃದ್ದಿ ಆಗುತ್ತಿಲ್ಲ ಅಂತ ಟೀಕೆ ಮಾಡುವವರಿಗೆ ಈ ಅಂಕಿ ಅಂಶಗಳೆ ಉತ್ತರ. ಹತ್ತು ಹಲವು ಅಭಿವೃದ್ಧಿ ಕೆಲಸಗಳಿಗೆ ಯಾವುದೇ ಕೊರತೆ ಮಾಡಿಲ್ಲ.

ಅತ್ಯಂತ ಸಂತೋಷದಿಂದ ರೈತರ ಸಾಲ ವಿತರಣೆಗೆ ಚಾಲನೆ ನೀಡಿದ್ದೇನೆ: ಸಿಎಂ ಯಡಿಯೂರಪ್ಪ
ಬಿ.ಎಸ್.ಯಡಿಯೂರಪ್ಪ
Follow us
TV9 Web
| Updated By: sandhya thejappa

Updated on:Jun 21, 2021 | 1:51 PM

ಬೆಂಗಳೂರು: ಅತ್ಯಂತ ಸಂತೋಷದಿಂದ ರೈತರಿಗೆ ಸಾಲ ವಿತರಣೆಗೆ ಚಾಲನೆ ನೀಡಿದ್ದೇನೆ ಎಂದು ಹೇಳಿಕೆ ನೀಡಿದ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ನಮ್ಮದು ರೈತ ಪರ ಸರ್ಕಾರವಾಗಿದೆ. ರೈತರು, ಆರೋಗ್ಯ, ಶಿಕ್ಷಣ ನಮ್ಮ ಸರ್ಕಾರದ ಮೊದಲ ಆದ್ಯತೆ. ಕೊವಿಡ್ ಸಂದರ್ಭದಲ್ಲಿ ಸಹಕಾರ ಸಂಘಗಳು ಸಾಕಷ್ಟು ಕೆಲಸ ಮಾಡಿವೆ. ವೈದ್ಯಕೀಯ ಸಲಕರಣೆ, ಆಹಾರ ಕಿಟ್, ಧಾನ್ಯ ವಿತರಣೆ ಮಾಡಿವೆ. 58 ಕೋಟಿಗೂ ಹೆಚ್ಚು ಮೊತ್ತವನ್ನು ಸಿಎಂ ಪರಿಹಾರ ನಿಧಿಗೆ ಸಹಕಾರ ಇಲಾಖೆ ನೀಡಿದೆ ಎಂದು ತಿಳಿಸಿದರು.

ಸಾಲ ಮರುಪಾವತಿ ಅವಧಿಯನ್ನು ಮೂರು ತಿಂಗಳು ವಿಸ್ತರಿಸಿದ್ದೇವೆ. ಕೊವಿಡ್​ನಿಂದ ಸೂಕ್ತ ಮಾರುಕಟ್ಟೆ ಇಲ್ಲದ ಹೂವು, ಹಣ್ಣು ಬೆಳೆಗಾರರಿಗೂ ಪರಿಹಾರ ನೀಡಲಾಗಿದೆ. ಅಭಿವೃದ್ದಿ ಆಗುತ್ತಿಲ್ಲ ಅಂತ ಟೀಕೆ ಮಾಡುವವರಿಗೆ ಈ ಅಂಕಿ ಅಂಶಗಳೆ ಉತ್ತರ. ಹತ್ತು ಹಲವು ಅಭಿವೃದ್ಧಿ ಕೆಲಸಗಳಿಗೆ ಯಾವುದೇ ಕೊರತೆ ಮಾಡಿಲ್ಲ. ಇನ್ನೂ ಹೆಚ್ಚಿನ ಅಭಿವೃದ್ಧಿ ಕೆಲಸ ಮಾಡುವುದಕ್ಕೆ ಅವಕಾಶ ಆಗಲಿದೆ ಎಂದು ಅಭಿಪ್ರಾಯಪಟ್ಟರು.

ತಾವೇ ಇಷ್ಟಪಟ್ಟು ರೈತ ಗೀತೆ ಹಾಡಿಸಿದ ಸಿಎಂ ವಿಧಾನಸೌಧದ ಬ್ಯಾಂಕ್ಟೆಟ್ ಹಾಲ್​ನಲ್ಲಿ ನಡೆದ ರೈತ ಸ್ಪಂದನ ಕಾರ್ಯಕ್ರಮದಲ್ಲಿ ಸಿಎಂ ಯಡಿಯೂರಪ್ಪ ತಾವೇ ಇಷ್ಟಪಟ್ಟು ರೈತ ಗೀತೆಯನ್ನು ಹಾಡಿಸಿದರು. ತಮ್ಮ ಭಾಷಣಕ್ಕೂ ಮೊದಲು ರೈತ ಗೀತೆಯನ್ನು ಹೇಳಿ ಎಂದು ಮುಖ್ಯಮಂತ್ರಿ ಹಾಡಿಸಿದರು.

ಲಸಿಕಾ ಮೇಳದಲ್ಲಿ 5ರಿಂದ 7 ಲಕ್ಷ ಜನರಿಗೆ ಲಸಿಕೆ ನೀಡಲಾಗುತ್ತೆ. ಈಗಾಗಲೇ ಎಲ್ಲ ಜಿಲ್ಲೆಗಳಿಗೆ ಲಸಿಕೆ ಪೂರೈಕೆ ಮಾಡಲಾಗಿದೆ. 2ನೇ ಡೋಸ್ ಲಸಿಕೆ ನೀಡುವುದಕ್ಕೆ ಮೊದಲ ಆದ್ಯತೆ. ಲಸಿಕಾ ಅಭಿಯಾನದಿಂದ ಜನರಿಗೆ ಉಪಯೋಗವಾಗಬೇಕು. ರಾಜ್ಯದ ಜನತೆ ಲಸಿಕಾ ಅಭಿಯಾನಕ್ಕೆ ಕೈ ಜೋಡಿಸಬೇಕು. ರಾಜ್ಯದಲ್ಲಿ ನಿರೀಕ್ಷೆಗೂ ಮೀರಿ ಕೊರೊನಾ ಕಡಿಮೆ ಆಗಿದೆ. ಹೀಗಾಗಿ ರಾಜ್ಯದಲ್ಲಿ ನಿಯಮ ಸಡಿಲ ಮಾಡಲಾಗಿದೆ. ಆದರೆ ಜನರು ಕೊವಿಡ್ ನಿಯಮ ಉಲ್ಲಂಘಿಸಬಾರದು ಎಂದು ಮುಖ್ಯಮಂತ್ರಿ ತಿಳಿಸಿದರು.

ಇದನ್ನೂ ಓದಿ

ಯಾರು ಕೆಲಸ ಮಾಡುತ್ತಾರೆ, ಮಾಡಲ್ಲ ಎಂಬುವು ನನಗೆ ಗೊತ್ತಿದೆ.. ಕೆಲವರನ್ನು ಬದಲಾವಣೆ ಮಾಡಬೇಕೆಂದು ಇಲ್ಲಿಗೆ ಬಂದಿದ್ದೇನೆ -ಡಿಕೆಶಿ

ಮಳೆಗಾಲದಲ್ಲಿ ಮರಗಳು ಬೀಳುವುದನ್ನು ನಿಯಂತ್ರಿಸಲು ಮುಂಬೈನಲ್ಲಿ ವಿನೂತನ ಕ್ರಮ; ಟ್ರೀ ಸರ್ಜನ್​​ಗಳನ್ನು ನೇಮಕ ಮಾಡಿದ ಬಿಎಂಸಿ

(CM Yediyurappa instructed the singer to sing the farmer song)

Published On - 1:41 pm, Mon, 21 June 21

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ