AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಂತ ಸಂತೋಷದಿಂದ ರೈತರ ಸಾಲ ವಿತರಣೆಗೆ ಚಾಲನೆ ನೀಡಿದ್ದೇನೆ: ಸಿಎಂ ಯಡಿಯೂರಪ್ಪ

ಸಾಲ ಮರುಪಾವತಿ ಅವಧಿಯನ್ನು ಮೂರು ತಿಂಗಳು ವಿಸ್ತರಿಸಿದ್ದೇವೆ. ಕೊವಿಡ್​ನಿಂದ ಸೂಕ್ತ ಮಾರುಕಟ್ಟೆ ಇಲ್ಲದ ಹೂವು, ಹಣ್ಣು ಬೆಳೆಗಾರರಿಗೂ ಪರಿಹಾರ ನೀಡಲಾಗಿದೆ. ಅಭಿವೃದ್ದಿ ಆಗುತ್ತಿಲ್ಲ ಅಂತ ಟೀಕೆ ಮಾಡುವವರಿಗೆ ಈ ಅಂಕಿ ಅಂಶಗಳೆ ಉತ್ತರ. ಹತ್ತು ಹಲವು ಅಭಿವೃದ್ಧಿ ಕೆಲಸಗಳಿಗೆ ಯಾವುದೇ ಕೊರತೆ ಮಾಡಿಲ್ಲ.

ಅತ್ಯಂತ ಸಂತೋಷದಿಂದ ರೈತರ ಸಾಲ ವಿತರಣೆಗೆ ಚಾಲನೆ ನೀಡಿದ್ದೇನೆ: ಸಿಎಂ ಯಡಿಯೂರಪ್ಪ
ಬಿ.ಎಸ್.ಯಡಿಯೂರಪ್ಪ
TV9 Web
| Edited By: |

Updated on:Jun 21, 2021 | 1:51 PM

Share

ಬೆಂಗಳೂರು: ಅತ್ಯಂತ ಸಂತೋಷದಿಂದ ರೈತರಿಗೆ ಸಾಲ ವಿತರಣೆಗೆ ಚಾಲನೆ ನೀಡಿದ್ದೇನೆ ಎಂದು ಹೇಳಿಕೆ ನೀಡಿದ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ನಮ್ಮದು ರೈತ ಪರ ಸರ್ಕಾರವಾಗಿದೆ. ರೈತರು, ಆರೋಗ್ಯ, ಶಿಕ್ಷಣ ನಮ್ಮ ಸರ್ಕಾರದ ಮೊದಲ ಆದ್ಯತೆ. ಕೊವಿಡ್ ಸಂದರ್ಭದಲ್ಲಿ ಸಹಕಾರ ಸಂಘಗಳು ಸಾಕಷ್ಟು ಕೆಲಸ ಮಾಡಿವೆ. ವೈದ್ಯಕೀಯ ಸಲಕರಣೆ, ಆಹಾರ ಕಿಟ್, ಧಾನ್ಯ ವಿತರಣೆ ಮಾಡಿವೆ. 58 ಕೋಟಿಗೂ ಹೆಚ್ಚು ಮೊತ್ತವನ್ನು ಸಿಎಂ ಪರಿಹಾರ ನಿಧಿಗೆ ಸಹಕಾರ ಇಲಾಖೆ ನೀಡಿದೆ ಎಂದು ತಿಳಿಸಿದರು.

ಸಾಲ ಮರುಪಾವತಿ ಅವಧಿಯನ್ನು ಮೂರು ತಿಂಗಳು ವಿಸ್ತರಿಸಿದ್ದೇವೆ. ಕೊವಿಡ್​ನಿಂದ ಸೂಕ್ತ ಮಾರುಕಟ್ಟೆ ಇಲ್ಲದ ಹೂವು, ಹಣ್ಣು ಬೆಳೆಗಾರರಿಗೂ ಪರಿಹಾರ ನೀಡಲಾಗಿದೆ. ಅಭಿವೃದ್ದಿ ಆಗುತ್ತಿಲ್ಲ ಅಂತ ಟೀಕೆ ಮಾಡುವವರಿಗೆ ಈ ಅಂಕಿ ಅಂಶಗಳೆ ಉತ್ತರ. ಹತ್ತು ಹಲವು ಅಭಿವೃದ್ಧಿ ಕೆಲಸಗಳಿಗೆ ಯಾವುದೇ ಕೊರತೆ ಮಾಡಿಲ್ಲ. ಇನ್ನೂ ಹೆಚ್ಚಿನ ಅಭಿವೃದ್ಧಿ ಕೆಲಸ ಮಾಡುವುದಕ್ಕೆ ಅವಕಾಶ ಆಗಲಿದೆ ಎಂದು ಅಭಿಪ್ರಾಯಪಟ್ಟರು.

ತಾವೇ ಇಷ್ಟಪಟ್ಟು ರೈತ ಗೀತೆ ಹಾಡಿಸಿದ ಸಿಎಂ ವಿಧಾನಸೌಧದ ಬ್ಯಾಂಕ್ಟೆಟ್ ಹಾಲ್​ನಲ್ಲಿ ನಡೆದ ರೈತ ಸ್ಪಂದನ ಕಾರ್ಯಕ್ರಮದಲ್ಲಿ ಸಿಎಂ ಯಡಿಯೂರಪ್ಪ ತಾವೇ ಇಷ್ಟಪಟ್ಟು ರೈತ ಗೀತೆಯನ್ನು ಹಾಡಿಸಿದರು. ತಮ್ಮ ಭಾಷಣಕ್ಕೂ ಮೊದಲು ರೈತ ಗೀತೆಯನ್ನು ಹೇಳಿ ಎಂದು ಮುಖ್ಯಮಂತ್ರಿ ಹಾಡಿಸಿದರು.

ಲಸಿಕಾ ಮೇಳದಲ್ಲಿ 5ರಿಂದ 7 ಲಕ್ಷ ಜನರಿಗೆ ಲಸಿಕೆ ನೀಡಲಾಗುತ್ತೆ. ಈಗಾಗಲೇ ಎಲ್ಲ ಜಿಲ್ಲೆಗಳಿಗೆ ಲಸಿಕೆ ಪೂರೈಕೆ ಮಾಡಲಾಗಿದೆ. 2ನೇ ಡೋಸ್ ಲಸಿಕೆ ನೀಡುವುದಕ್ಕೆ ಮೊದಲ ಆದ್ಯತೆ. ಲಸಿಕಾ ಅಭಿಯಾನದಿಂದ ಜನರಿಗೆ ಉಪಯೋಗವಾಗಬೇಕು. ರಾಜ್ಯದ ಜನತೆ ಲಸಿಕಾ ಅಭಿಯಾನಕ್ಕೆ ಕೈ ಜೋಡಿಸಬೇಕು. ರಾಜ್ಯದಲ್ಲಿ ನಿರೀಕ್ಷೆಗೂ ಮೀರಿ ಕೊರೊನಾ ಕಡಿಮೆ ಆಗಿದೆ. ಹೀಗಾಗಿ ರಾಜ್ಯದಲ್ಲಿ ನಿಯಮ ಸಡಿಲ ಮಾಡಲಾಗಿದೆ. ಆದರೆ ಜನರು ಕೊವಿಡ್ ನಿಯಮ ಉಲ್ಲಂಘಿಸಬಾರದು ಎಂದು ಮುಖ್ಯಮಂತ್ರಿ ತಿಳಿಸಿದರು.

ಇದನ್ನೂ ಓದಿ

ಯಾರು ಕೆಲಸ ಮಾಡುತ್ತಾರೆ, ಮಾಡಲ್ಲ ಎಂಬುವು ನನಗೆ ಗೊತ್ತಿದೆ.. ಕೆಲವರನ್ನು ಬದಲಾವಣೆ ಮಾಡಬೇಕೆಂದು ಇಲ್ಲಿಗೆ ಬಂದಿದ್ದೇನೆ -ಡಿಕೆಶಿ

ಮಳೆಗಾಲದಲ್ಲಿ ಮರಗಳು ಬೀಳುವುದನ್ನು ನಿಯಂತ್ರಿಸಲು ಮುಂಬೈನಲ್ಲಿ ವಿನೂತನ ಕ್ರಮ; ಟ್ರೀ ಸರ್ಜನ್​​ಗಳನ್ನು ನೇಮಕ ಮಾಡಿದ ಬಿಎಂಸಿ

(CM Yediyurappa instructed the singer to sing the farmer song)

Published On - 1:41 pm, Mon, 21 June 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!