AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಂತ ಸಂತೋಷದಿಂದ ರೈತರ ಸಾಲ ವಿತರಣೆಗೆ ಚಾಲನೆ ನೀಡಿದ್ದೇನೆ: ಸಿಎಂ ಯಡಿಯೂರಪ್ಪ

ಸಾಲ ಮರುಪಾವತಿ ಅವಧಿಯನ್ನು ಮೂರು ತಿಂಗಳು ವಿಸ್ತರಿಸಿದ್ದೇವೆ. ಕೊವಿಡ್​ನಿಂದ ಸೂಕ್ತ ಮಾರುಕಟ್ಟೆ ಇಲ್ಲದ ಹೂವು, ಹಣ್ಣು ಬೆಳೆಗಾರರಿಗೂ ಪರಿಹಾರ ನೀಡಲಾಗಿದೆ. ಅಭಿವೃದ್ದಿ ಆಗುತ್ತಿಲ್ಲ ಅಂತ ಟೀಕೆ ಮಾಡುವವರಿಗೆ ಈ ಅಂಕಿ ಅಂಶಗಳೆ ಉತ್ತರ. ಹತ್ತು ಹಲವು ಅಭಿವೃದ್ಧಿ ಕೆಲಸಗಳಿಗೆ ಯಾವುದೇ ಕೊರತೆ ಮಾಡಿಲ್ಲ.

ಅತ್ಯಂತ ಸಂತೋಷದಿಂದ ರೈತರ ಸಾಲ ವಿತರಣೆಗೆ ಚಾಲನೆ ನೀಡಿದ್ದೇನೆ: ಸಿಎಂ ಯಡಿಯೂರಪ್ಪ
ಬಿ.ಎಸ್.ಯಡಿಯೂರಪ್ಪ
TV9 Web
| Edited By: sandhya thejappa|

Updated on:Jun 21, 2021 | 1:51 PM

Share

ಬೆಂಗಳೂರು: ಅತ್ಯಂತ ಸಂತೋಷದಿಂದ ರೈತರಿಗೆ ಸಾಲ ವಿತರಣೆಗೆ ಚಾಲನೆ ನೀಡಿದ್ದೇನೆ ಎಂದು ಹೇಳಿಕೆ ನೀಡಿದ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ನಮ್ಮದು ರೈತ ಪರ ಸರ್ಕಾರವಾಗಿದೆ. ರೈತರು, ಆರೋಗ್ಯ, ಶಿಕ್ಷಣ ನಮ್ಮ ಸರ್ಕಾರದ ಮೊದಲ ಆದ್ಯತೆ. ಕೊವಿಡ್ ಸಂದರ್ಭದಲ್ಲಿ ಸಹಕಾರ ಸಂಘಗಳು ಸಾಕಷ್ಟು ಕೆಲಸ ಮಾಡಿವೆ. ವೈದ್ಯಕೀಯ ಸಲಕರಣೆ, ಆಹಾರ ಕಿಟ್, ಧಾನ್ಯ ವಿತರಣೆ ಮಾಡಿವೆ. 58 ಕೋಟಿಗೂ ಹೆಚ್ಚು ಮೊತ್ತವನ್ನು ಸಿಎಂ ಪರಿಹಾರ ನಿಧಿಗೆ ಸಹಕಾರ ಇಲಾಖೆ ನೀಡಿದೆ ಎಂದು ತಿಳಿಸಿದರು.

ಸಾಲ ಮರುಪಾವತಿ ಅವಧಿಯನ್ನು ಮೂರು ತಿಂಗಳು ವಿಸ್ತರಿಸಿದ್ದೇವೆ. ಕೊವಿಡ್​ನಿಂದ ಸೂಕ್ತ ಮಾರುಕಟ್ಟೆ ಇಲ್ಲದ ಹೂವು, ಹಣ್ಣು ಬೆಳೆಗಾರರಿಗೂ ಪರಿಹಾರ ನೀಡಲಾಗಿದೆ. ಅಭಿವೃದ್ದಿ ಆಗುತ್ತಿಲ್ಲ ಅಂತ ಟೀಕೆ ಮಾಡುವವರಿಗೆ ಈ ಅಂಕಿ ಅಂಶಗಳೆ ಉತ್ತರ. ಹತ್ತು ಹಲವು ಅಭಿವೃದ್ಧಿ ಕೆಲಸಗಳಿಗೆ ಯಾವುದೇ ಕೊರತೆ ಮಾಡಿಲ್ಲ. ಇನ್ನೂ ಹೆಚ್ಚಿನ ಅಭಿವೃದ್ಧಿ ಕೆಲಸ ಮಾಡುವುದಕ್ಕೆ ಅವಕಾಶ ಆಗಲಿದೆ ಎಂದು ಅಭಿಪ್ರಾಯಪಟ್ಟರು.

ತಾವೇ ಇಷ್ಟಪಟ್ಟು ರೈತ ಗೀತೆ ಹಾಡಿಸಿದ ಸಿಎಂ ವಿಧಾನಸೌಧದ ಬ್ಯಾಂಕ್ಟೆಟ್ ಹಾಲ್​ನಲ್ಲಿ ನಡೆದ ರೈತ ಸ್ಪಂದನ ಕಾರ್ಯಕ್ರಮದಲ್ಲಿ ಸಿಎಂ ಯಡಿಯೂರಪ್ಪ ತಾವೇ ಇಷ್ಟಪಟ್ಟು ರೈತ ಗೀತೆಯನ್ನು ಹಾಡಿಸಿದರು. ತಮ್ಮ ಭಾಷಣಕ್ಕೂ ಮೊದಲು ರೈತ ಗೀತೆಯನ್ನು ಹೇಳಿ ಎಂದು ಮುಖ್ಯಮಂತ್ರಿ ಹಾಡಿಸಿದರು.

ಲಸಿಕಾ ಮೇಳದಲ್ಲಿ 5ರಿಂದ 7 ಲಕ್ಷ ಜನರಿಗೆ ಲಸಿಕೆ ನೀಡಲಾಗುತ್ತೆ. ಈಗಾಗಲೇ ಎಲ್ಲ ಜಿಲ್ಲೆಗಳಿಗೆ ಲಸಿಕೆ ಪೂರೈಕೆ ಮಾಡಲಾಗಿದೆ. 2ನೇ ಡೋಸ್ ಲಸಿಕೆ ನೀಡುವುದಕ್ಕೆ ಮೊದಲ ಆದ್ಯತೆ. ಲಸಿಕಾ ಅಭಿಯಾನದಿಂದ ಜನರಿಗೆ ಉಪಯೋಗವಾಗಬೇಕು. ರಾಜ್ಯದ ಜನತೆ ಲಸಿಕಾ ಅಭಿಯಾನಕ್ಕೆ ಕೈ ಜೋಡಿಸಬೇಕು. ರಾಜ್ಯದಲ್ಲಿ ನಿರೀಕ್ಷೆಗೂ ಮೀರಿ ಕೊರೊನಾ ಕಡಿಮೆ ಆಗಿದೆ. ಹೀಗಾಗಿ ರಾಜ್ಯದಲ್ಲಿ ನಿಯಮ ಸಡಿಲ ಮಾಡಲಾಗಿದೆ. ಆದರೆ ಜನರು ಕೊವಿಡ್ ನಿಯಮ ಉಲ್ಲಂಘಿಸಬಾರದು ಎಂದು ಮುಖ್ಯಮಂತ್ರಿ ತಿಳಿಸಿದರು.

ಇದನ್ನೂ ಓದಿ

ಯಾರು ಕೆಲಸ ಮಾಡುತ್ತಾರೆ, ಮಾಡಲ್ಲ ಎಂಬುವು ನನಗೆ ಗೊತ್ತಿದೆ.. ಕೆಲವರನ್ನು ಬದಲಾವಣೆ ಮಾಡಬೇಕೆಂದು ಇಲ್ಲಿಗೆ ಬಂದಿದ್ದೇನೆ -ಡಿಕೆಶಿ

ಮಳೆಗಾಲದಲ್ಲಿ ಮರಗಳು ಬೀಳುವುದನ್ನು ನಿಯಂತ್ರಿಸಲು ಮುಂಬೈನಲ್ಲಿ ವಿನೂತನ ಕ್ರಮ; ಟ್ರೀ ಸರ್ಜನ್​​ಗಳನ್ನು ನೇಮಕ ಮಾಡಿದ ಬಿಎಂಸಿ

(CM Yediyurappa instructed the singer to sing the farmer song)

Published On - 1:41 pm, Mon, 21 June 21

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​