AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಪುತ್ರನ ಕಾರಿನಲ್ಲಿ 4 ಸೂಟ್ ಕೇಸ್, ಹಾಗೆಯೇ ಬಿಟ್ಟು ಕಳುಹಿಸಿದ ಪೊಲೀಸರು!

ಮಂಡ್ಯ: ಈಗ ಎಲ್ಲೆಲ್ಲೂ ಉಪ‌ ಚುನಾವಣೆಯದ್ದೇ ಮಾತು ಕೃತಿ ಸರ್ವಸ್ವವೂ ಆಗಿದೆ. ಈ ವೇಳೆ ಅನಾಚಾರಕ್ಕೆ ಅವಕಾಶ ನೀಡದಂತೆ ಚುನಾವಣಾ ಸಿಬ್ಬಂದಿ, ಪೊಲೀಸರು ಕಟ್ಟೆಚ್ಚರ ವಹಿಸಿರುತ್ತಾರೆ. ಆದ್ರೆ ಇಂದು ಬೆಳಗ್ಗೆ 9.30ರ ಸುಮಾರಿಗೆ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪನವರ ಪುತ್ರ ವಿಜಯೇಂದ್ರ ಅವರು ಕೆಆರ್ ಪೇಟೆಗೆ ಆಗಮಿಸಿದರು. ಆ ವೇಳೆ ಮುಖ್ಯಮಂತ್ರಿ ಪುತ್ರ ಪ್ರಯಾಣಿಸುತ್ತಿದ್ದ ಕಾರನ್ನ ಪೊಲೀಸರು ಕಾಟಾಚಾರಕ್ಕೆ ಪರಿಶೀಲನೆ‌ ನಡೆಸಿದ್ದಾರೆ. ಗಮನಾರ್ಹವೆಂದ್ರೆ ಪೊಲೀಸರು ಕೆಆರ್ ಪೇಟೆ ಉಪ‌ ಚುನಾವಣೆ […]

ಸಿಎಂ ಪುತ್ರನ ಕಾರಿನಲ್ಲಿ 4 ಸೂಟ್ ಕೇಸ್, ಹಾಗೆಯೇ ಬಿಟ್ಟು ಕಳುಹಿಸಿದ ಪೊಲೀಸರು!
ಸಾಧು ಶ್ರೀನಾಥ್​
|

Updated on:Nov 19, 2019 | 1:05 PM

Share

ಮಂಡ್ಯ: ಈಗ ಎಲ್ಲೆಲ್ಲೂ ಉಪ‌ ಚುನಾವಣೆಯದ್ದೇ ಮಾತು ಕೃತಿ ಸರ್ವಸ್ವವೂ ಆಗಿದೆ. ಈ ವೇಳೆ ಅನಾಚಾರಕ್ಕೆ ಅವಕಾಶ ನೀಡದಂತೆ ಚುನಾವಣಾ ಸಿಬ್ಬಂದಿ, ಪೊಲೀಸರು ಕಟ್ಟೆಚ್ಚರ ವಹಿಸಿರುತ್ತಾರೆ. ಆದ್ರೆ ಇಂದು ಬೆಳಗ್ಗೆ 9.30ರ ಸುಮಾರಿಗೆ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪನವರ ಪುತ್ರ ವಿಜಯೇಂದ್ರ ಅವರು ಕೆಆರ್ ಪೇಟೆಗೆ ಆಗಮಿಸಿದರು. ಆ ವೇಳೆ ಮುಖ್ಯಮಂತ್ರಿ ಪುತ್ರ ಪ್ರಯಾಣಿಸುತ್ತಿದ್ದ ಕಾರನ್ನ ಪೊಲೀಸರು ಕಾಟಾಚಾರಕ್ಕೆ ಪರಿಶೀಲನೆ‌ ನಡೆಸಿದ್ದಾರೆ. ಗಮನಾರ್ಹವೆಂದ್ರೆ ಪೊಲೀಸರು ಕೆಆರ್ ಪೇಟೆ ಉಪ‌ ಚುನಾವಣೆ ಹಿನ್ನೆಲೆಯಲ್ಲಿ ನಾಲ್ಕು ದಿಕ್ಕುಗಳಲ್ಲಿಯೂ ಚೆಕ್ ಪೋಸ್ಟ್ ನಿರ್ಮಿಸಿ, ವಾಹನ ತಪಾಸಣೆಗಳಲ್ಲಿ ತೊಡಗಿದ್ದಾರೆ.

ವಿಜಯೇಂದ್ರ ತಮ್ಮ ಬೆಂಬಲಿಗರ ಜೊತೆ ಶ್ರವಣಬೆಳಗೊಳ ರಸ್ತೆ ಮೂಲಕ ನಾಲ್ಕು ವಾಹನಗಳಲ್ಲಿ ಕೆಆರ್ ಪೇಟೆಗೆ ಬಂದರು. ಕೆಆರ್ ಪೇಟೆ ಚುನಾವಣೆ ಉಸ್ತುವಾರಿಗಳಲ್ಲಿ ವಿಜಯೇಂದ್ರ ಸಹ ಒಬ್ಬರು. ವಿಜಯೇಂದ್ರ ಪ್ರಯಾಣಿಸುತ್ತಿದ್ದ ಕಾರು ಸೇರಿದಂತೆ ನಾಲ್ಕು ಕಾರುಗಳನ್ನ ಸರಿಯಾಗಿ ತಪಾಸಣೆ ಮಾಡದೆ ಪೊಲೀಸರು ಹಾಗೆಯೇ ಬಿಟ್ಟುಕಳುಹಿಸಿದ್ದಾರೆ. ಇಷ್ಟಕ್ಕೂ ಕಾರಿನಲ್ಲಿ ನಾಲ್ಕು ಸೂಟ್ ಕೇಸ್ ರೀತಿಯ ಬ್ಯಾಗ್ ಗಳಿದ್ದವು. ಅದನ್ನ ತೆಗೆಸಿ ನೋಡದ ಸಿಬ್ಬಂದಿ, ಕಾರನ್ನು ಹಾಗೆಯೇ ಬಿಟ್ಟಿದ್ದಾರೆ. ಕಾರುಗಳನ್ನ ನಿಲ್ಲಿಸಿ ಚೆಕ್ ಮಾಡುವ ರೀತಿ ಮಾಡಿದರಾದರೂ ಅದು ಸಿಎಂ ಪುತ್ರನ ಕಾರು ಎಂಬುದು ತಿಳಿಯುತ್ತಿದ್ದಂತೆ ಸುಮ್ಮನಾಗಿದ್ದಾರೆ.

ಇದೇ ಪೊಲೀಸರು ಸಾರ್ವಜನಿಕರ ವಾಹನಗಳನ್ನ ಸಂಪೂರ್ಣವಾಗಿ ತಪಾಸಣೆ ನಡೆಸಿ, ಬ್ಯಾಗ್ ಗಳಿದ್ದರೆ ಅವುಗಳನ್ನೂ ಓಪನ್ ಮಾಡಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಹಾಗಾಗಿ ಪೊಲೀಸರ ಈ ನಡೆ ಅನುಮಾನಕ್ಕೆ ಕಾರಣವಾಗಿದೆ.

Published On - 12:41 pm, Mon, 18 November 19

ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್