ಕೋವಿಡ್ ಸೆಂಟರ್​ಗಳಲ್ಲಿ ಭಾರಿ ಅಕ್ರಮದ ಬೆಡ್ ಬಾಡಿಗೆ ವ್ಯವಹಾರಕ್ಕೆ ಬ್ರೇಕ್

[lazy-load-videos-and-sticky-control id=”iKFjQPv3kmQ”] ಬೆಂಗಳೂರಿನಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪನೆ ಸಂದರ್ಭದಲ್ಲಿ ಬೆಡ್ ಬಾಡಿಗೆಗೆ ಪಡೆಯುವ ವ್ಯವಹಾರಕ್ಕೆ ಸಿಎಂ ಯಡಿಯೂರಪ್ಪ ಬ್ರೇಕ್ ಹಾಕಿದ್ದಾರೆ. ನಿನ್ನೆ ಕೋವಿಡ್ ಟಾಸ್ಕ್ ಫೋರ್ಸ್ ಸಭೆಯಲ್ಲಿ ಬಾಡಿಗೆಗೆ ಪಡೆಯದೇ ನೇರವಾಗಿ ಖರೀದಿ ಮಾಡಲು ಸೂಚನೆ ನೀಡಿದ್ದರು. ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಬಾಡಿಗೆಗೆ ಪಡೆಯುವ ವಸ್ತುಗಳ ಬಾಡಿಗೆ ಮೂಲ ಬೆಲೆಗಿಂತ ಮೂರರಿಂದ ನಾಲ್ಕು ಪಟ್ಟು ಹೆಚ್ಚು ಹಣ ತೆರಲಾಗಿತ್ತು. ತಮ್ಮ ಗಮನಕ್ಕೆ ತಾರದೇ ಬಾಡಿಗೆಗೆ ಪಡೆಯುವ ನಿರ್ಧಾರ ತೆಗೆದುಕೊಂಡಿದ್ದಕ್ಕೆ ಸಿಎಂ ತರಾಟೆಗೆತ್ತಿಕೊಂಡಿದ್ದರು. ಈ ಮೂಲಕ […]

ಕೋವಿಡ್ ಸೆಂಟರ್​ಗಳಲ್ಲಿ ಭಾರಿ ಅಕ್ರಮದ ಬೆಡ್ ಬಾಡಿಗೆ ವ್ಯವಹಾರಕ್ಕೆ ಬ್ರೇಕ್
ಸಾಧು ಶ್ರೀನಾಥ್​

Updated on: Jul 14, 2020 | 12:19 PM

[lazy-load-videos-and-sticky-control id=”iKFjQPv3kmQ”]
ಬೆಂಗಳೂರಿನಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪನೆ ಸಂದರ್ಭದಲ್ಲಿ ಬೆಡ್ ಬಾಡಿಗೆಗೆ ಪಡೆಯುವ ವ್ಯವಹಾರಕ್ಕೆ ಸಿಎಂ ಯಡಿಯೂರಪ್ಪ ಬ್ರೇಕ್ ಹಾಕಿದ್ದಾರೆ. ನಿನ್ನೆ ಕೋವಿಡ್ ಟಾಸ್ಕ್ ಫೋರ್ಸ್ ಸಭೆಯಲ್ಲಿ ಬಾಡಿಗೆಗೆ ಪಡೆಯದೇ ನೇರವಾಗಿ ಖರೀದಿ ಮಾಡಲು ಸೂಚನೆ ನೀಡಿದ್ದರು. ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಬಾಡಿಗೆಗೆ ಪಡೆಯುವ ವಸ್ತುಗಳ ಬಾಡಿಗೆ ಮೂಲ ಬೆಲೆಗಿಂತ ಮೂರರಿಂದ ನಾಲ್ಕು ಪಟ್ಟು ಹೆಚ್ಚು ಹಣ ತೆರಲಾಗಿತ್ತು.

ತಮ್ಮ ಗಮನಕ್ಕೆ ತಾರದೇ ಬಾಡಿಗೆಗೆ ಪಡೆಯುವ ನಿರ್ಧಾರ ತೆಗೆದುಕೊಂಡಿದ್ದಕ್ಕೆ ಸಿಎಂ ತರಾಟೆಗೆತ್ತಿಕೊಂಡಿದ್ದರು. ಈ ಮೂಲಕ ಮತ್ತೊಂದು ಅವ್ಯವಹಾರದ ಆರೋಪಕ್ಕೆ ಗುರಿಯಾಗುವುದನ್ನು ತಪ್ಪಿಸಿಕೊಂಡು ರಾಜ್ಯ ಸರ್ಕಾರ ಡ್ಯಾಮೇಜ್ ಕಂಟ್ರೋಲ್ ಮಾಡಿತ್ತು. ತಾಜಾ ಬೆಳವಣಿಗೆಗೆ ವೀಕ್ಷಿಸಿ ಟೊವಿ9 ಕನ್ನಡ ಯೂಟ್ಯೂಬ್ ಲೈವ್

Published On - 10:45 am, Tue, 14 July 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us