ನಾಳೆಯಿಂದಲೇ ಸಿಎಂ BSY ಕರ್ತವ್ಯಕ್ಕೆ ಹಾಜರು, ಕ್ವಾರಂಟೈನ್ ಅನ್ವಯ ಆಗಲ್ಲ

ಬೆಂಗಳೂರು: ಕೊರೊನಾ ಸೋಂಕಿನಿಂದ ಗುಣಮುಖರಾದ ಸಿಎಂ ಬಿಎಸ್ ಯಡಿಯೂರಪ್ಪ, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಬಂದಿದ್ದಾರೆ. ಎಂದಿನಂತೆ ವಾಕಿಂಗ್ ಹಾಗೂ ಆಹಾರ ಶೈಲಿಯನ್ನು ಮುಂದುವರೆಸಲು ಇದೇ ಸಂದರ್ಭದಲ್ಲಿ ವೈದ್ಯರು ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಅಲ್ಲದೆ ಸಿಎಂ ಬಿಎಸ್ ಯಡಿಯೂರಪ್ಪ ಸಾಂವಿಧಾನಿಕ ಹುದ್ದೆಯಲ್ಲಿದ್ದು ಜೊತೆಗೆ ಕೊರೊನಾ ವಾರಿಯರ್ ಆಗಿರುವ ಹಿನ್ನೆಲೆಯಿಂದಾಗಿ ಸಾಮಾನ್ಯ ಸೋಂಕಿತರಿಗೆ ಇರುವಂತಹ ನಿಯಮಾವಳಿಗಳು ಇರುವುದಿಲ್ಲ. ಹಾಗಾಗಿ ಬಿಎಸ್ ವೈಗೆ ಕ್ವಾರಂಟೈನ್ ಆಗುವ ನಿಯಮಾವಳಿಗಳು ಇಲ್ಲದಿರುವುದರಿಂದ ನಾಳೆಯಿಂದ ಕರ್ತವ್ಯಕ್ಕೆ ಹಾಜರಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ. ಜೊತೆಗೆ […]

ನಾಳೆಯಿಂದಲೇ ಸಿಎಂ BSY ಕರ್ತವ್ಯಕ್ಕೆ ಹಾಜರು, ಕ್ವಾರಂಟೈನ್ ಅನ್ವಯ ಆಗಲ್ಲ
ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ
ಸಾಧು ಶ್ರೀನಾಥ್​

Updated on: Aug 10, 2020 | 5:52 PM

ಬೆಂಗಳೂರು: ಕೊರೊನಾ ಸೋಂಕಿನಿಂದ ಗುಣಮುಖರಾದ ಸಿಎಂ ಬಿಎಸ್ ಯಡಿಯೂರಪ್ಪ, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಬಂದಿದ್ದಾರೆ. ಎಂದಿನಂತೆ ವಾಕಿಂಗ್ ಹಾಗೂ ಆಹಾರ ಶೈಲಿಯನ್ನು ಮುಂದುವರೆಸಲು ಇದೇ ಸಂದರ್ಭದಲ್ಲಿ ವೈದ್ಯರು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಅಲ್ಲದೆ ಸಿಎಂ ಬಿಎಸ್ ಯಡಿಯೂರಪ್ಪ ಸಾಂವಿಧಾನಿಕ ಹುದ್ದೆಯಲ್ಲಿದ್ದು ಜೊತೆಗೆ ಕೊರೊನಾ ವಾರಿಯರ್ ಆಗಿರುವ ಹಿನ್ನೆಲೆಯಿಂದಾಗಿ ಸಾಮಾನ್ಯ ಸೋಂಕಿತರಿಗೆ ಇರುವಂತಹ ನಿಯಮಾವಳಿಗಳು ಇರುವುದಿಲ್ಲ. ಹಾಗಾಗಿ ಬಿಎಸ್ ವೈಗೆ ಕ್ವಾರಂಟೈನ್ ಆಗುವ ನಿಯಮಾವಳಿಗಳು ಇಲ್ಲದಿರುವುದರಿಂದ ನಾಳೆಯಿಂದ ಕರ್ತವ್ಯಕ್ಕೆ ಹಾಜರಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ. ಜೊತೆಗೆ ಎರಡು ದಿನಗಳ ಕಾಲ ಮನೆಯಲ್ಲಿ ವಿಶ್ರಾಂತಿ ಪಡೆಯಬಹುದು ಎಂಬ ಮಾಹಿತಿ ಇದ್ದು, ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಳ್ಳಬಹುದು ಎಂದು ತಿಳಿದುಬಂದಿದೆ.

ಪುತ್ರಿ ಸಹ ಮನೆಗೆ ವಾಪಾಸ್..
ಸಿಎಂ ಬಿಎಸ್‌ವೈ ಜೊತೆಗೆ ಕೊರೊನಾ ಸೋಂಕು ದೃಢಪಟ್ಟಿದ್ದ ಸಿಎಂ ಪುತ್ರಿ ಪದ್ಮಾವತಿ ಸಹ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ವಾಪಸಾಗಿದ್ದಾರೆ.

Published On - 5:37 pm, Mon, 10 August 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us