AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏ.9ರಿಂದ 11 ರವರೆಗೆ ಕರಾವಳಿಗೆ ಬಿಸಿಲಿನ ಪೆಟ್ಟು, ಈ ಜಿಲ್ಲೆಗಳಿಗೆ ಮಾತ್ರ ವರುಣನ ತಂಪು: 3 ದಿನಗಳ ಕಾಲ ‘ಯೆಲ್ಲೋ ಅಲರ್ಟ್’

ಭಾರತೀಯ ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡಕ್ಕೆ ಏಪ್ರಿಲ್ 9-11 ರವರೆಗೆ 'ಯೆಲ್ಲೋ ಅಲರ್ಟ್' ಘೋಷಿಸಿದೆ. ತೀವ್ರ ಬಿಸಿಗಾಳಿ ಮತ್ತು ಹೆಚ್ಚಿನ ಆರ್ದ್ರತೆ ಇರಲಿದ್ದು, ತಾಪಮಾನ ಹೆಚ್ಚಳವಾಗಲಿದೆ. ಸಾರ್ವಜನಿಕರು ಬಾಯಾರಿಕೆ ಇಲ್ಲದಿದ್ದರೂ ನೀರು ಕುಡಿಯುವುದು, ಎಳನೀರು, ಮಜ್ಜಿಗೆ ಸೇವಿಸುವುದು, ಮಧ್ಯಾಹ್ನ ಬಿಸಿಲಿಗೆ ಹೋಗದಿರುವುದು, ಹತ್ತಿ ಬಟ್ಟೆ ಧರಿಸುವುದು ಸೇರಿದಂತೆ ಸೂಕ್ತ ಮುನ್ನೆಚ್ಚರಿಕೆ ವಹಿಸಲು ಸೂಚಿಸಿದೆ.

ಏ.9ರಿಂದ 11 ರವರೆಗೆ ಕರಾವಳಿಗೆ ಬಿಸಿಲಿನ ಪೆಟ್ಟು, ಈ ಜಿಲ್ಲೆಗಳಿಗೆ ಮಾತ್ರ ವರುಣನ ತಂಪು: 3 ದಿನಗಳ ಕಾಲ 'ಯೆಲ್ಲೋ ಅಲರ್ಟ್'
ಸಾಂದರ್ಭಿಕ ಚಿತ್ರ Image Credit source: Tv9 kannada
ಅಕ್ಷಯ್​ ಪಲ್ಲಮಜಲು​​
|

Updated on: Apr 07, 2026 | 10:47 PM

Share

ಮಂಗಳೂರು, ಏ. 07: ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಮುಂದಿನ ಮೂರು ದಿನಗಳ ಕಾಲ ಹವಾಮಾನದಲ್ಲಿ ಭಾರಿ ಏರುಪೇರಾಗಲಿದ್ದು, ತೀವ್ರವಾದ ಬಿಸಿ ಗಾಳಿ ಮತ್ತು ಆರ್ದ್ರತೆ (Humidity) ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಭಾಗಕ್ಕೆ ‘ಯೆಲ್ಲೋ ಅಲರ್ಟ್’ (Yellow Alert) ಘೋಷಿಸಲಾಗಿದೆ.

ಏಪ್ರಿಲ್ 9 ರಿಂದ ಏಪ್ರಿಲ್ 11 ರವರೆಗೆ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ ದಾಖಲಾಗುವ ಸಾಧ್ಯತೆ ಇದ್ದು, ಆರ್ದ್ರತೆಯ ಕಾರಣದಿಂದಾಗಿ ಸಾರ್ವಜನಿಕರಿಗೆ ಹೆಚ್ಚಿನ ಸೆಖೆಯ ಅನುಭವವಾಗಲಿದೆ. ಹವಾಮಾನ ಇಲಾಖೆ ಮತ್ತು ಆರೋಗ್ಯ ಇಲಾಖೆಯು ಸಾರ್ವಜನಿಕರಿಗೆ ಕೆಲವು ಮುನ್ನೆಚ್ಚರಿಕೆಗಳನ್ನು ವಹಿಸಲು ಕೋರಿದೆ.

ಇದನ್ನೂ ಓದಿ: ಮಹಿಳೆಯ ಈ ಗುಣಗಳು ಕುಟುಂಬದ ಬಹುದೊಡ್ಡ ಶಕ್ತಿ ಎಂದಿದ್ದಾರೆ ಚಾಣಕ್ಯ

ಬಾಯಾರಿಕೆ ಇಲ್ಲದಿದ್ದರೂ ನಿಯಮಿತವಾಗಿ ನೀರು ಕುಡಿಯುತ್ತಿರಿ. ಎಳನೀರು, ಮಜ್ಜಿಗೆಯಂತಹ ಪಾನೀಯಗಳನ್ನು ಸೇವಿಸಿ ಎಂದು ಹೇಳಲಾಗಿದೆ.ಮಧ್ಯಾಹ್ನ 12 ರಿಂದ ಸಂಜೆ 4 ಗಂಟೆಯವರೆಗೆ ನೇರ ಬಿಸಿಲಿಗೆ ಒಡ್ಡಿಕೊಳ್ಳುವುದನ್ನು ತಪ್ಪಿಸಿ. ತಿಳಿ ಬಣ್ಣದ, ಹತ್ತಿ ಬಟ್ಟೆಗಳನ್ನು ಧರಿಸಲು ಆದ್ಯತೆ ನೀಡಿ. ಹೊರಹೋಗುವಾಗ ಛತ್ರಿ ಅಥವಾ ಟೋಪಿ ಬಳಸಲು ಸಲಹೆ ನೀಡಿದೆ. ಬಿಸಿಲಿನ ಪ್ರಖರತೆ ಮಕ್ಕಳು ಮತ್ತು ವಯೋವೃದ್ಧರ ಮೇಲೆ ಹೆಚ್ಚು ಪರಿಣಾಮ ಬೀರಲಿದ್ದು, ಅವರ ಆರೋಗ್ಯದ ಕಡೆ ಗಮನಹರಿಸಿ ಎಂದು ಇಲಾಖೆ ಎಚ್ಚರಿಕೆ ನೀಡಿದೆ.

ಏಪ್ರಿಲ್ 9 ರಿಂದ ಏಪ್ರಿಲ್ 11 ರವರೆಗೆ ಕರ್ನಾಟಕದ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 9 ರಿಂದ 11 ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಚಾಮರಾಜನಗರ, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಏಪ್ರಿಲ್ 11 ರಂದು ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಗಳ ಒಂದು ಅಥವಾ ಎರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಈ ಸಮಯದಲ್ಲಿ ಗುಡುಗಿನೊಂದಿಗೆ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ಏಪ್ರಿಲ್ 11 ಮತ್ತು 12 ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಆಕಾಶವು ಭಾಗಶಃ ಮೋಡದಿಂದ ಕೂಡಿದ್ದು, ಸಂಜೆ ಅಥವಾ ರಾತ್ರಿಯ ಸಮಯದಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನವು 36°C ಮತ್ತು ಕನಿಷ್ಠ ತಾಪಮಾನವು 22°C ಆಸುಪಾಸಿನಲ್ಲಿರಲಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More