AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ವಾರ ಕರಾವಳಿ ಕರ್ನಾಟಕದಲ್ಲಿ ವರ್ಷಧಾರೆ, ಬೆಂಗಳೂರಿನಲ್ಲಿ ಸಾಧಾರಣ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಜುಲೈ 1 ರಿಂದ ಜುಲೈ 5 ರವರೆಗೆ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 40-45 ಕಿಮೀ ಯಿಂದ ಗಂಟೆಗೆ 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಮುಂದಿನ ವಾರ ಕರಾವಳಿ ಕರ್ನಾಟಕದಲ್ಲಿ ವರ್ಷಧಾರೆ, ಬೆಂಗಳೂರಿನಲ್ಲಿ ಸಾಧಾರಣ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಸಾಂದರ್ಭಿಕ ಚಿತ್ರ
Prajwal D'Souza
Prajwal D'Souza| Edited By: |

Updated on: Jul 01, 2023 | 6:17 PM

Share

ಬೆಂಗಳೂರು: ಕರಾವಳಿ ಕರ್ನಾಟಕ ಭಾಗದಲ್ಲಿ (Coastal Karnataka) ಭಾನುವಾರ ಮತ್ತು ಸೋಮವಾರ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಶನಿವಾರ ನೀಡಿದ ಮುನ್ಸೂಚನೆಯಲ್ಲಿ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ಜುಲೈ 4 ಮತ್ತು 6 ರ ನಡುವೆ ಅತಿ ಹೆಚ್ಚು (115.6 ಮಿಮೀ ನಿಂದ 204.4) ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ಜುಲೈ 1 ರಿಂದ ಜುಲೈ 5 ರವರೆಗೆ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 40-45 ಕಿಮೀ ಯಿಂದ ಗಂಟೆಗೆ 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಶುಕ್ರವಾರ ಬೆಳಿಗ್ಗೆ 8.30 ರಿಂದ ಶನಿವಾರ ಬೆಳಿಗ್ಗೆ 8.30 ರ ನಡುವೆ ಕಾರವಾರದಲ್ಲಿ ಅತಿ ಹೆಚ್ಚು ಅಂದರೆ 71.6 ಮಿ.ಮೀ, ಮಂಗಳೂರಿನಲ್ಲಿ 46.1 ಮಿ.ಮೀ ಮಳೆಯಾಗಿದೆ ಎಂದು ಇಲಾಖೆಯ ಅಂಕಿಅಂಶಗಳು ತೋರಿಸಿವೆ.

ಜುಲೈ 2 ರಿಂದ ಜುಲೈ 6 ರ ನಡುವೆ ಬೆಂಗಳೂರು ಗ್ರಾಮಾಂತರ ಮತ್ತು ನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಸಾಧಾರಣ ಮಳೆಯಾಗುವ ಸಾಧ್ಯತೆಯೂ ಇದೆ.

ಇದನ್ನೂ ಓದಿ: Mangalore Rains: ಮಂಗಳೂರಿನ ಕೋಟೆಕಾರಿನಲ್ಲಿ ಒಂದೇ ದಿನ 245 ಮಿಮೀ ಮಳೆ, ಕರಾವಳಿ ಕರ್ನಾಟಕದಲ್ಲಿ ವರ್ಷಧಾರೆ ಸಾಧ್ಯತೆ

ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗದಲ್ಲಿ ಜುಲೈ 6 ರಂದು ಅತಿ ಹೆಚ್ಚು (204.5ಮಿಮೀ ಗಿಂತ ಹೆಚ್ಚು) ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನಲ್ಲಿ ಜುಲೈ 2 ಮತ್ತು ಜುಲೈ 6 ರ ನಡುವೆ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.

ಜುಲೈ 2 ಮತ್ತು ಜುಲೈ 6 ರ ನಡುವೆ ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಜುಲೈ 4 ಮತ್ತು ಜುಲೈ 6 ರ ನಡುವೆ, ಅನೇಕ ಸ್ಥಳಗಳಲ್ಲಿ ಲಘುವಾಗಿ ಮಧ್ಯಮ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ